ಪಾನಮತ್ತ ಯುವಕರ ಗಲಾಟೆ…ಪ್ರಶ್ನೆ ಮಾಡಿದ ಪೊಲೀಸರಿಗೆ ವರ್ಗಾವಣೆ ಶಿಕ್ಷೆ…!!

ಕೆ.ಆರ್.ನಗರ,ಡಿ10,Tv10 ಕನ್ನಡ

ಕುಡಿದು ಗಲಾಟೆ ಮಾಡಿದ ಯುವಕರನ್ನ ಪ್ರಶ್ನೆ ಮಾಡಿದ ಪೊಲೀಸರಿಗೆ ವರ್ಗಾವಣೆ ಶಿಕ್ಷೆಯಾಗಿದೆ.
ಮೈಸೂರು ಜಿಲ್ಲೆ ಕೆ ಆರ್ ನಗರದಲ್ಲಿ ಘಟನೆ ಬೆಳಕಿಗೆ ಬಂದಿದೆ.ಕೆ.ಆರ್.ನಗರ ಪೊಲೀಸ್ ಠಾಣೆ
ಪೊಲೀಸ್ ಕಾನ್ಸಟೇಬಲ್ ಪುನೀತ್ ಹಾಗೂ ಹರೀಶ್‌ಗೆ ವರ್ಗಾವಣೆ ಶಿಕ್ಷೆಯಾಗಿದೆ.
ಐದು ದಿನದ ಹಿಂದೆ ಕೆ ಆರ್ ನಗರ ಪಟ್ಟಣದಲ್ಲಿ ಗಲಾಟೆ ನಡೆದಿತ್ತು.
ಸಾರ್ವಜನಿಕ ಸ್ಥಳದಲ್ಲಿ ಕುಡಿಯುತ್ತಿದ್ದ ಯುವಕರನ್ನ ಕಾನ್ಸಟೇಬಲ್‌ಗಳಾದ ಪುನೀತ್ ಹಾಗೂ ಹರೀಶ್ ಪ್ರಶ್ನೆ ಮಾಡಿದ್ದಾರೆ.
ಈ ವೇಳೆ ಪೊಲೀಸರ ಜೊತೆ ಯುವಕರ ಮಾತಿನ ಚಕಮಕಿ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ.
ಕೆ ಆರ್ ನಗರ ತಾಲ್ಲೂಕು ಕಾಂಗ್ರೆಸ್ ಮಾಜಿ ಅಧ್ಯಕ್ಷ ಚೀರನಹಳ್ಳಿ ಶಿವಣ್ಣ ಅವರ ಪುತ್ರ ಹಾಗೂ ಸ್ನೇಹಿತರು ಗಲಾಟೆ ಮಾಡಿದ್ದಾರೆ.
ಘಟನಾ ಸ್ಥಳಕ್ಕೆ ಬಂದ ಚೀರನಹಳ್ಳಿ ಶಿವಣ್ಣ
ಮಗನಿಗೆ ಬುದ್ದಿ ಹೇಳಿ ಜಗಳ ಬಿಡಿಸಿ ಕಳುಹಿಸಿದ್ದರು.
ನಿಮ್ಮನ್ನು ಇಲ್ಲಿಂದ ಎತ್ತಂಗಡಿ ಮಾಡಿಸುತ್ತೇವೆ ಅಂತಾ ಧಮ್ಕಿ ಹಾಕಿರುವುದಾಗಿ ಆರೋಪ ಕೇಳಿ ಬಂದಿದೆ.
ಘಟನೆ ನಂತರ ವಾಪಸ್ಸಾಗಿದ್ದ ಪೊಲೀಸರು ಯಾವುದೇ ಪ್ರಕರಣ ದಾಖಲಿಸಿರಲಿಲ್ಲ.
ಇದಾದ ಮರುದಿನ ಇಬ್ಬರು ಕಾನ್ಸಟೇಬಲ್‌ಗಳು ವರ್ಗಾವಣೆಯಾಗಿದೆ.
ಆಡಳಿತಾತ್ಮಕ ದೃಷ್ಟಿಯಿಂದ ವರ್ಗಾವಣೆ ಅಂತಾ ಆದೇಶವಾಗಿದೆ.
ಹರೀಶ್‌ಗೆ ಕೆ ಆರ್ ನಗರ ಠಾಣೆಯಿಂದ ಬಿಳಿಕೆರೆ ಪೊಲೀಸ್ ಠಾಣೆಗೆ ವರ್ಗಾವಣೆ
ಪುನೀತ್‌ಗೆ ನಂಜನಗೂಡು ಸಂಚಾರ ಪೊಲೀಸ್ ಠಾಣೆಗೆ ವರ್ಗಾವಣೆ ಆಗಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *