ಪಾನಮತ್ತ ಯುವಕರ ಗಲಾಟೆ…ಪ್ರಶ್ನೆ ಮಾಡಿದ ಪೊಲೀಸರಿಗೆ ವರ್ಗಾವಣೆ ಶಿಕ್ಷೆ…!!

ಕೆ.ಆರ್.ನಗರ,ಡಿ10,Tv10 ಕನ್ನಡ

ಕುಡಿದು ಗಲಾಟೆ ಮಾಡಿದ ಯುವಕರನ್ನ ಪ್ರಶ್ನೆ ಮಾಡಿದ ಪೊಲೀಸರಿಗೆ ವರ್ಗಾವಣೆ ಶಿಕ್ಷೆಯಾಗಿದೆ.
ಮೈಸೂರು ಜಿಲ್ಲೆ ಕೆ ಆರ್ ನಗರದಲ್ಲಿ ಘಟನೆ ಬೆಳಕಿಗೆ ಬಂದಿದೆ.ಕೆ.ಆರ್.ನಗರ ಪೊಲೀಸ್ ಠಾಣೆ
ಪೊಲೀಸ್ ಕಾನ್ಸಟೇಬಲ್ ಪುನೀತ್ ಹಾಗೂ ಹರೀಶ್‌ಗೆ ವರ್ಗಾವಣೆ ಶಿಕ್ಷೆಯಾಗಿದೆ.
ಐದು ದಿನದ ಹಿಂದೆ ಕೆ ಆರ್ ನಗರ ಪಟ್ಟಣದಲ್ಲಿ ಗಲಾಟೆ ನಡೆದಿತ್ತು.
ಸಾರ್ವಜನಿಕ ಸ್ಥಳದಲ್ಲಿ ಕುಡಿಯುತ್ತಿದ್ದ ಯುವಕರನ್ನ ಕಾನ್ಸಟೇಬಲ್‌ಗಳಾದ ಪುನೀತ್ ಹಾಗೂ ಹರೀಶ್ ಪ್ರಶ್ನೆ ಮಾಡಿದ್ದಾರೆ.
ಈ ವೇಳೆ ಪೊಲೀಸರ ಜೊತೆ ಯುವಕರ ಮಾತಿನ ಚಕಮಕಿ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ.
ಕೆ ಆರ್ ನಗರ ತಾಲ್ಲೂಕು ಕಾಂಗ್ರೆಸ್ ಮಾಜಿ ಅಧ್ಯಕ್ಷ ಚೀರನಹಳ್ಳಿ ಶಿವಣ್ಣ ಅವರ ಪುತ್ರ ಹಾಗೂ ಸ್ನೇಹಿತರು ಗಲಾಟೆ ಮಾಡಿದ್ದಾರೆ.
ಘಟನಾ ಸ್ಥಳಕ್ಕೆ ಬಂದ ಚೀರನಹಳ್ಳಿ ಶಿವಣ್ಣ
ಮಗನಿಗೆ ಬುದ್ದಿ ಹೇಳಿ ಜಗಳ ಬಿಡಿಸಿ ಕಳುಹಿಸಿದ್ದರು.
ನಿಮ್ಮನ್ನು ಇಲ್ಲಿಂದ ಎತ್ತಂಗಡಿ ಮಾಡಿಸುತ್ತೇವೆ ಅಂತಾ ಧಮ್ಕಿ ಹಾಕಿರುವುದಾಗಿ ಆರೋಪ ಕೇಳಿ ಬಂದಿದೆ.
ಘಟನೆ ನಂತರ ವಾಪಸ್ಸಾಗಿದ್ದ ಪೊಲೀಸರು ಯಾವುದೇ ಪ್ರಕರಣ ದಾಖಲಿಸಿರಲಿಲ್ಲ.
ಇದಾದ ಮರುದಿನ ಇಬ್ಬರು ಕಾನ್ಸಟೇಬಲ್‌ಗಳು ವರ್ಗಾವಣೆಯಾಗಿದೆ.
ಆಡಳಿತಾತ್ಮಕ ದೃಷ್ಟಿಯಿಂದ ವರ್ಗಾವಣೆ ಅಂತಾ ಆದೇಶವಾಗಿದೆ.
ಹರೀಶ್‌ಗೆ ಕೆ ಆರ್ ನಗರ ಠಾಣೆಯಿಂದ ಬಿಳಿಕೆರೆ ಪೊಲೀಸ್ ಠಾಣೆಗೆ ವರ್ಗಾವಣೆ
ಪುನೀತ್‌ಗೆ ನಂಜನಗೂಡು ಸಂಚಾರ ಪೊಲೀಸ್ ಠಾಣೆಗೆ ವರ್ಗಾವಣೆ ಆಗಿದೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *