ಅಪರಾಧ ತಡೆ ಮಾಸಾಚರಣೆ…ಬೈಕ್ ರಾಲಿ ಮೂಲಕ ಪೊಲೀಸರಿಂದ ಜಾಗೃತಿ…

ಹುಣಸೂರು,ಡಿ10,Tv10 ಕನ್ನಡ

ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಹುಣಸೂರು ತಾಲೂಕಿನ ಬಿಳಿಕರೆ ಪೊಲೀಸರು ಬೈಕ್ ರಾಲಿ ನಡೆಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಅಪರಿಚಿತ ವ್ಯಕ್ತಿಗಳು ಹಾಗೂ ವಂಚಕರ ಬಗ್ಗೆ ಎಚ್ಚರಿಕೆ ವಹಿಸಬೇಕು, ಬಾಲ್ಯ ವಿವಾಹ,ಒಬ್ಬಂಟಿ ಮಹಿಳೆಯರು ಸಂಚರಿಸುವಾಗ ಅಪರಿಚಿತ ವ್ಯಕ್ತಿಗಳ ಬಗ್ಗೆ ಎಚ್ಚರಿಕೆ ವಹಿಸುವುದು, ತಮ್ಮ ಆಭರಣಗಳ ಬಗ್ಗೆ ನಿಗಾವಹಿಸುವುದು, ವೃದ್ಧರ ಬಳಿ ಚಿನ್ನ ಪಾಲಿಶ್ ಮಾಡುವ ನೆಪದಲ್ಲಿ ಮೋಸ ಮಾಡುವುದು ಅಲ್ಲದೆ ಪೋಕ್ಸೊ ಕಾಯಿದೆ ಬಗ್ಗೆ, ಸಂಚಾರಿ ನಿಯಮಗಳ ಬಗ್ಗೆ, ಗಮನವನ್ನು ಬೇರೆಡೆ ಸೆಳೆದು ಹಣ ಲಪಟಾಯಿಸುವವರ ಬಗ್ಗೆ ಎಚ್ಚರಿಕೆ ವಹಿಸುವಂತೆ ಜಾಗೃತಿ ಮೂಡಿಸಿದರು. ಬೈಕ್ ಸವಾರರು ಹೆಲ್ಮೆಟ್ ಧರಿಸುವಂತೆ ಹಾಗೂ ಇದರ ಮಹತ್ವದ ಬಗ್ಗೆ ಅರಿವು ಮೂಡಿಸಿದರು. ಬಿಳಿಕೆರೆ ಎಸ್ಸೈ ಲೋಲಾಕ್ಷಿ ನೇತೃತ್ವದಲ್ಲಿ ಬೈಕ್ ರಾಲಿ ನೆರವೇರಿತು.ಬಿಳಿಕರೆ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಲಾಯಿತು…

Spread the love

Related post

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…
ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…

Leave a Reply

Your email address will not be published. Required fields are marked *