ಅಪರಾಧ ತಡೆ ಮಾಸಾಚರಣೆ…ಬೈಕ್ ರಾಲಿ ಮೂಲಕ ಪೊಲೀಸರಿಂದ ಜಾಗೃತಿ…

ಹುಣಸೂರು,ಡಿ10,Tv10 ಕನ್ನಡ

ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಹುಣಸೂರು ತಾಲೂಕಿನ ಬಿಳಿಕರೆ ಪೊಲೀಸರು ಬೈಕ್ ರಾಲಿ ನಡೆಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಅಪರಿಚಿತ ವ್ಯಕ್ತಿಗಳು ಹಾಗೂ ವಂಚಕರ ಬಗ್ಗೆ ಎಚ್ಚರಿಕೆ ವಹಿಸಬೇಕು, ಬಾಲ್ಯ ವಿವಾಹ,ಒಬ್ಬಂಟಿ ಮಹಿಳೆಯರು ಸಂಚರಿಸುವಾಗ ಅಪರಿಚಿತ ವ್ಯಕ್ತಿಗಳ ಬಗ್ಗೆ ಎಚ್ಚರಿಕೆ ವಹಿಸುವುದು, ತಮ್ಮ ಆಭರಣಗಳ ಬಗ್ಗೆ ನಿಗಾವಹಿಸುವುದು, ವೃದ್ಧರ ಬಳಿ ಚಿನ್ನ ಪಾಲಿಶ್ ಮಾಡುವ ನೆಪದಲ್ಲಿ ಮೋಸ ಮಾಡುವುದು ಅಲ್ಲದೆ ಪೋಕ್ಸೊ ಕಾಯಿದೆ ಬಗ್ಗೆ, ಸಂಚಾರಿ ನಿಯಮಗಳ ಬಗ್ಗೆ, ಗಮನವನ್ನು ಬೇರೆಡೆ ಸೆಳೆದು ಹಣ ಲಪಟಾಯಿಸುವವರ ಬಗ್ಗೆ ಎಚ್ಚರಿಕೆ ವಹಿಸುವಂತೆ ಜಾಗೃತಿ ಮೂಡಿಸಿದರು. ಬೈಕ್ ಸವಾರರು ಹೆಲ್ಮೆಟ್ ಧರಿಸುವಂತೆ ಹಾಗೂ ಇದರ ಮಹತ್ವದ ಬಗ್ಗೆ ಅರಿವು ಮೂಡಿಸಿದರು. ಬಿಳಿಕೆರೆ ಎಸ್ಸೈ ಲೋಲಾಕ್ಷಿ ನೇತೃತ್ವದಲ್ಲಿ ಬೈಕ್ ರಾಲಿ ನೆರವೇರಿತು.ಬಿಳಿಕರೆ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಲಾಯಿತು…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *