ನಂಜನಗೂಡು ನಗರಸಭೆ ಕಚೇರಿಯಲ್ಲಿ ಕಡತ ನಾಪತ್ತೆ…SDA ವಿರುದ್ದ ದೂರು ದಾಖಲಿಸಿದ ಕಂದಾಯ ಅಧಿಕಾರಿ…

  • Crime
  • December 16, 2023
  • No Comment
  • 184

ನಂಜನಗೂಡು,ಡಿ16,Tv10 ಕನ್ನಡ

ಅಕ್ರಮವಾಗಿ ನಿವೇಶನಗಳಿಗೆ ಖಾತೆ ಮಾಡಿಕೊಟ್ಟ ಕಡತ ನಾಪತ್ತೆಯಾದ ಹಿನ್ನಲೆ ನಂಜನಗೂಡು ನಗರಸಭೆ ಕಂದಾಯ ಅಧಿಕಾರಿಯೊಬ್ಬರು ದ್ವಿತೀಯ ದರ್ಜೆ ಸಹಾಯಕರ ವಿರುದ್ದ ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಕಡತದ ಸಂರಕ್ಷಣೆಯ ಜವಾಬ್ದಾರಿ ಹೊತ್ತಿರುವ ದ್ವಿತೀಯ ದರ್ಜೆ ಸಹಾಯಕ ಡಿ.ಎಂ.ನರಸಿಂಹಮೂರ್ತಿ ವಿರುದ್ದ ಕಂದಾಯ ಅಧಿಕಾರಿ ಎಸ್.ಡಿ.ವೆಂಕಟೇಶ್ ದೂರು ನೀಡಿದ್ದಾರೆ.ನರಸಿಂಹ ಮೂರ್ತಿಯನ್ನ ಠಾಣೆಗೆ ಕರೆಯಿಸಿ ವಿಚಾರಣೆ ನಡೆಸಿ ಕಡತ ದೊರಕಿಸಿಕೊಡುವಂತೆ ದೂರಿನಲ್ಲಿ ತಿಳಿಸಿದ್ದಾರೆ.

ನಂಜನಗೂಡು ತಾಲೂಕು ದೇವೀರಮ್ಮನಹಳ್ಳಿ ಗ್ರಾಮದ ಸರ್ವೆ ನಂ.58,59 ರಲ್ಲಿ 3 ಎಕ್ರೆ 16 ಗುಂಟೆ ಪ್ರದೇಶದಲ್ಲಿ ನಿರ್ಮಿಸಲಾಗಿರುವ ಬಡಾವಣೆಯ ಖಾತೆಯನ್ನ ಅಕ್ರಮವಾಗಿ KMF-24 ರ ವಹಿಯಲ್ಲಿ ನಮೂದಿಸಿದ್ದು,ಸದರಿ ಅಕ್ರಮದಲ್ಲಿ ಭಾಗಿಯಾಗಿರುವ ಅಧಿಕಾರಿ ಹಾಗೂ ನೌಕರರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಜಿಲ್ಲಾಧಿಕಾರಿಯವರು ಸೂಚಿಸಿದ್ದು,ಸದರಿ KMF-24 ಸಂಖ್ಯೆ 106 ರಲ್ಲಿ ನಮೂದಿಸಿರುವ ಅಸೆಸ್ ಮೆಂಟ್ 17115/406/1 ರಿಂದ 17115/406/48 ರವರೆಗೆ 48 ಖಾತೆಗಳನ್ನ ಅಕ್ರಮವಾಗಿ ದಾಖಲಿಸಿರುವ ಕಡತದ ನಿರ್ವಹಣೆ ಹಾಗೂ ಸಂರಕ್ಷಣೆ ಜವಾಬ್ದಾರಿ ಡಿ.ಎಂ.ನರಸಿಂಹಮೂರ್ತಿಯವರದ್ದಾಗಿದೆ.ಆದರೆ ಸದರಿ ಕಡತ ಲಭ್ಯವಿಲ್ಲದ ಕಾರಣ ಡಿ.ಎಂ.ನರಸಿಂಹಮೂರ್ತಿಯವರನ್ನ ಠಾಣೆಗೆ ಕರೆಯಿಸಿ ವಿಚಾರಣೆ ನಡೆಸಿ ಕಡತ ದೊರಕಿಸಿಕೊಡುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *