ವರದಕ್ಷಿಣೆ ಕಿರುಕುಳ…ಹಸೆಮಣೆ ಏರಬೇಕಿದ್ದ ಲಾ ಸ್ಟೂಡೆಂಟ್ ನೇಣಿಗೆ…

  • Crime
  • December 19, 2023
  • No Comment
  • 351

ಮೈಸೂರು,ಡಿ19,Tv10 ಕನ್ನಡ

ಮದುವೆ ನಿಶ್ಚಿತಾರ್ಥವಾದ ನಂತರ ವರದಕ್ಷಿಗಾಗಿ ಪೀಡಿಸಿದ ಹಿನ್ನಲೆ ಕಾನೂನು ಪದವೀಧರೆ ವಿಧ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಕುವೆಂಪುನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ತಮಿಳುನಾಡು ನೀಲಗಿರೀಸ್ ಮೂಲದ ಕವೀಶ(21) ಮೃತ ದುರ್ದೈವಿ.ಮೈಸೂರಿನ ಜೆ.ಎಸ್.ಎಸ್.ಕಾನೂನು ಕಾಲೇಜಿನಲ್ಲಿ 7 ನೇ ಸೆಮಿಸ್ಟರ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ಕವೀಶ ಕೆಲವು ದಿನಗಳಿಂದ ಊಟಿ ನಿವಾಸಿ ಕಿರಣ್ ಎಂಬಾತನನ್ನ ಪ್ರೀತಿಸುತ್ತಿದ್ದಳು. ಇಬ್ಬರ ನಡುವಿನ ಲವ್ ಮ್ಯಾಟರ್ ಮನೆಯವರಿಗೆ ಗೊತ್ತಾಗಿತ್ತು.ಇದೇ ವೇಳೆ ಕಿರಣ್ ಮನೆಯವರು ಕವೀಶ ಮನೆಗೆ ಬಂದು ಪೊಷಕರನ್ನ ಒಪ್ಪಿಸಿ ಮದುವೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು.ನಿಶ್ಚಿತಾರ್ಥದ ನಂತರ ಕಿರಣ್ ವರದಕ್ಷಿಣೆಯಾಗಿ ಕಾರು ಹಾಗೂ ಚಿನ್ನ ನೀಡಬೇಕೆಂದು ಪೀಡಿಸಿದ್ದಾನೆ.ಇಲ್ಲದಿದ್ದಲ್ಲಿ ಮದುವೆ ನಿಲ್ಲಿಸುವುದಾಗಿ ಬೆದರಿಸಿದ್ದಾನೆ.ಇದರಿಂದಾಗಿ ಮನನೊಂದ ಕವೀಶ ತಾನು ತಂಗಿದ್ದ ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾಗಿದ್ದಾಳೆ.ಕವೀಶ ಪೋಷಕರು ಕಿರಣ್ ಹಾಗೂ ಆತನ ತಂದೆ ಸೇತುಮಾಧವ,ತಾಯಿ ಲತಾ ಹಾಗೂ ಮಾವನ ವಿರುದ್ದ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *