ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಯು ಮನೋವಿಕಲ್ಪ ಸಮಾಧಿ ಸ್ಥಿತಿಗೆ ತಲುಪುತ್ತಾನೆ-ಪೊಲೀಸ್ ಇನಸ್ಪೆಕ್ಟರ್ ಪ್ರಕಾಶ್


ಮಾದಕ ವಸ್ತುಗಳು ಯುವ ಪೀಳಿಗೆಯನ್ನು ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕ ಆರೋಗ್ಯವನ್ನು ಹದಗೆಡಿಸುತ್ತದೆ. ಇದರಿಂದ ಅನೇಕರು ಅಪಾಯಕ್ಕೆ ಸಿಲುಕಿ ತಮ್ಮ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ನಂಜನಗೂಡಿನ ಪೊಲೀಸ್ ಇನಸ್ಪೇಕ್ಟರ್ ಶ್ರೀ ಪ್ರಕಾಶ್ ರವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಮಾದಕ ವಸ್ತುಗಳ ಸೇವನೆಯ ಅರಿವು ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಈ ಪಿಡುಗುವಿನಿಂದ ವ್ಯಕ್ತಿಯು ಮನೋವಿಕಲ್ಪ ಸಮಾಧಿ ಸ್ಥಿತಿಗೆ ತಲುಪುತ್ತಾನೆ.ಕಾಲೇಜಿನ ಪ್ರಾಂಶುಪಾಲರಾದ ಲಯನ್ ಸಿ.ಆರ್. ದಿನೇಶ್ ರವರು ಮಾತನಾಡಿ ಮಾದಕ ವಸ್ತುಗಳ ಸೇವನೆ ಪ್ರಪಂಚದಲ್ಲಿ ಎಲ್ಲಾ ಕಡೆ ಕಂಡುಬರುವ ಒಂದು ದೊಡ್ಡ ಪಿಡುಗು. ಗಂಡು ಹೆಣ್ಣು ಬಡವ ಶ್ರೀಮಂತ ಎಂಬ ಭೇದಭಾವವಿಲ್ಲದೆ ತಂಬಾಕು, ಗಾಂಜಾ, ಕೊಕೇನ್, ಅನಿಲಗಳು, ನಿದ್ರೆ ಮಾತ್ರೆ,ಅಫೀಮು ಇತ್ಯಾದಿಗಳ ಸೇವನೆಯಿಂದ ಯುವಕರು ಇವುಗಳಿಗೆ ದಾಸರಾಗಿ ಹಾಗೂ ಬಿಡಲಾಗದ ಪರಿಸ್ಥಿತಿಗೆ ಒಳಪಟ್ಟಿದ್ದಾರೆ .ಹಾಗಾಗಿ ಇಂದು ಯುವ ಪೀಳಿಗೆಯಲ್ಲಿ ಇವುಗಳ ಉಪಯೋಗ ಬಗ್ಗೆ ಜಾಗೃತಿ ಹಾಗೂ ಅವುಗಳ ಪರಿಣಾಮಗಳ ಬಗ್ಗೆ ಮಾಹಿತಿ ನೀಡಿ ಮುಂದೆ ಮಾದಕ ದ್ರವ್ಯ ಮುಕ್ತ ಸುಂದರ ಸಮಾಜ ನಿರ್ಮಾಣ ಮಾಡಬಹುದು ಎಂದು ಹೇಳಿದರು

ಕಾರ್ಯಕ್ರಮದಲ್ಲಿ ಹಿರಿಯ ಉಪನ್ಯಾಸಕರಾದ ಅಶ್ವಥ್ ನಾರಾಯಣ ಗೌಡ ಡಾ. ಟಿ.ಕೆ ರವಿ ,ಮೀನಾ, ನಾಗವೇಣಿ, ಮೋಹನ್ ಕುಮಾರ್ ,ನಾಗರಾಜು, ಬಿಂದು ,ಕಾಲೇಜಿನ ಎಲ್ಲಾ ಸಿಬ್ಬಂದಿ ವರ್ಗದವರು ಈ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *