ಮೇಲುಕೋಟೆ ಚಲುವನಾರಾಯಣಸ್ವಾಮಿ ದೇವಾಲಯದ ಜಮೀನಿಗೆ ಕನ್ನ…ಕ್ರಮ ಕೈಗೊಳ್ಳುವಂತೆ ಮೈಸೂರು ಡಿಸಿಗೆ ಮಂಡ್ಯ ಜಿಲ್ಲಾಧಿಕಾರಿ ಪತ್ರ…

ಮೈಸೂರು,ಡಿ20,Tv10 ಕನ್ನಡ

ಮೇಲುಕೋಟೆ ಶ್ರೀ ಚಲುವನಾರಾಯಣಸ್ವಾಮಿ ದೇವಾಲಯಕ್ಕೇ ಸೇರಿದ ಜಮೀನುಗಳನ್ನ ಲಪಟಾಯಿಸಿದ ಖದೀಮರ ವಿರುದ್ದ ಕ್ರಮ ಕೈಗೊಳ್ಳುವಂತೆ ಮಂಡ್ಯ ಜಿಲ್ಲೆ ಜಿಲ್ಲಾಧಿಕಾರಿಗಳು ಮೈಸೂರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.ಮೈಸೂರುತಾಲೂಕು ಕಸಬ ಹೋಬಳಿ ಕೆಸರೆ ಗ್ರಾಮದ ಸರ್ವೆ ನಂ 396 ರ 3 ಎಕ್ರೆ 07 ಗುಂಟೆ,ಸರ್ವೆ ನಂ 397 ರ 0.05 ಗುಂಟೆ,ಸರ್ವೆ ನಂ.398 ರ 1 ಎಕ್ರೆ 18 ಗುಂಟೆ ಹಾಗೂ ಸರ್ವೆ ನಂ.399 ರ 4 ಎಕ್ರೆ 18 ಗುಂಟೆ ಜಮೀನುಗಳು ಮೇಲುಕೋಟೆ ಶ್ರೀ ಚೆಲುವನಾರಾಯಣ ಸ್ವಾಮಿ ದೇವಾಲಯಕ್ಕೆ ಸೇರಿದ ಆಸ್ತಿ.ಮೈಸೂರು ಮಹರಾಜರು ದೇವಾಲಯಕ್ಕಾಗಿ ನೀಡಿದ ಜಮೀನುಗಳು ಇವು.ಕೆಲವು ಪಟ್ಟಭದ್ರ ಹಿತಾಸಕ್ತಿಗಳು,ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಸೇರಿ ಅಕ್ರಮ ಕೂಟ ರಚಿಸಿಕೊಂಡು ಸದರಿ ಜಮೀನುಗಳ ಪಹಣಿಯಲ್ಲಿ ಸರ್ಕಾರಿ ಎಂದು ನಮೂದಿಸಿ ಖಾಸಗಿ ವ್ಯಕ್ತಿಗಳಿಗೆ ಕೋಟ್ಯಾಂತರ ರೂಗಳಿಗೆ ಮಾರಾಟ,ಒಪ್ಪಂದ ಮಾಡಿ ಅಕ್ರಮವೆಸಗಿರುವುದು ದಾಖಲೆಗಳಲ್ಲಿ ಸಾಬೀತಾಗಿದೆ.ಹೀಗಾಗಿ ಅಕ್ರಮದಲ್ಲಿ ಭಾಗಿಯಾಗಿರುವ ಅಧಿಕಾರಿಗಳು,ನೌಕರರು ಹಾಗೂ ಖಾಸಗಿ ವ್ಯಕ್ತಿಗಳ ವಿರುದ್ದ ಕ್ರಮ ಕೈಗೊಂಡು ದೇವಾಲಯದ ಆಸ್ತಿ ರಕ್ಷಣೆ ಮಾಡುವಂತೆ ಮಂಡ್ಯ ಜಿಲ್ಲಾಧಿಕಾರಿಗಳು ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ರವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *