ರಾಷ್ಟ್ರೀಯ ಗ್ರಾಹಕರ ದಿನಾಚರಣೆ…ಗ್ರಾಹಕನೇ ರಾಜ ಪುಸ್ತಕ ಬಿಡುಗಡೆ…

ಮೈಸೂರು,ಡಿ25,Tv10 ಕನ್ನಡ
ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದ ವತಿಯಿಂದ ಗ್ರಾಹಕರಲ್ಲಿ ಅರಿವು ಮೂಡಿಸುವಂತಹ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.
ಜೆಪಿ ನಗರದಲ್ಲಿರುವ ಪಂಡಿತ್ ಗವಾಯಿ ಸ್ಟೇಡಿಯಂ ಆವರಣದಲ್ಲಿ
ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಹಾಗೂ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಸುವರ್ಣ ಮಹೋತ್ಸವ ಅಂಗವಾಗಿ ಗ್ರಾಹಕನೇ ರಾಜ ಪುಸ್ತಕವನ್ನು ಹೊರತರಲಾಗಿದ್ದು, ನಿವೃತ್ತ ಡಿ ವೈ ಎಸ್ ಪಿ ರಂಗಸ್ವಾಮಿ ಅವರು ಲೋಕಾರ್ಪಣೆ ಮಾಡಿದರು.
ಈ ವೇಳೆ ಮಾತನಾಡಿದ ರಂಗಸ್ವಾಮಿ ಗ್ರಾಹಕರ ಹಕ್ಕುಗಳು ಏನು, ಅವುಗಳನ್ನು ಏಕೆ ನಾವು ತಿಳಿದುಕೊಳ್ಳಬೇಕು ಎಂಬುದರ ಬಗ್ಗೆ ಸಾರ್ವಜನಿಕರಲ್ಲಿ ಮೊದಲು ಅರಿವು ಮೂಡಬೇಕು ಎಂದು ಹೇಳಿದರು.ಹೇಗೆ ನಮಗೆ ಮೋಸ ಆಗುತ್ತಿದೆ ಅಂಗಡಿಗಳಲ್ಲಿ ಎಂ ಆರ್ ಪಿ ಹಾಕಿರುತ್ತಾರೆ ಆದರೆ ಅದರಲ್ಲಿ ಎಲ್ಲ ಟ್ಯಾಕ್ಸ್ ಸೇರಿದ್ದರು ಮತ್ತೆ ಇನ್ನೇನು ಸೇರಿಸಿ ಹೆಚ್ಚಿನ ಬೆಲೆ ಪಡೆಯುತ್ತಾರೆ ಇಂತಹ ವಿಚಾರಗಳ ಬಗ್ಗೆ ಎಚ್ಚರದಿಂದ ಇರುವಂತರ ಸಲಹೆ ನೀಡಿದರು.ಎಲ್ಲೇ ಆಗಲಿ, ಯಾರೇ ಆಗಲಿ ಮೋಸ ಆಗುತ್ತಿರುವುದು ಕಂಡಾಗ ಪ್ರಶ್ನೆಸಬೇಕು, ನಮ್ಮ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕು, ಸಾರ್ವಜನಿಕರಲ್ಲಿ ಇದೆಲ್ಲದರ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಯುವ ಜನತೆಗೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದ ಅಧ್ಯಕ್ಷ ಚಂದ್ರಶೇಖರ್, ಹಿರಿಯ ಪತ್ರಕರ್ತರಾದ ಅನಿಲ್ ಕುಮಾರ್, ನಿವೃತ್ತ ಬ್ಯಾಂಕ್ ಉದ್ಯೋಗಿ ಹಾಗೂ ಹಿರಿಯ ವಕೀಲರಾದ ರವೀಂದ್ರ,ಪ್ರಾಂತ ಕಾರ್ಯಕಾರಣಿಯ ಸದಸ್ಯರಾದ ಡಾ. ಜಿ. ವಿ ರವಿಶಂಕರ್, ಜೆಪಿ ನಗರದ ಹಿರಿಯ ನಾಗರಿಕ ವೇದಿಕೆಯ ಅಧ್ಯಕ್ಷ ಬಸವರಾಜ್, ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಉಪಾಧ್ಯಕ್ಷ ಜಯಕುಮಾರ್, ದೊರೆಸ್ವಾಮಿ, ಮಹಿಳಾ ಪ್ರಮುಖ್ ನಾಗಮಣಿ, ದರ್ಶನ್ ಮೂರ್ತಿ ಮತ್ತಿರರು ಪಾಲ್ಗೊಂಡಿದ್ದರು…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *