ರಾಷ್ಟ್ರೀಯ ಗ್ರಾಹಕರ ದಿನಾಚರಣೆ…ಗ್ರಾಹಕನೇ ರಾಜ ಪುಸ್ತಕ ಬಿಡುಗಡೆ…

ಮೈಸೂರು,ಡಿ25,Tv10 ಕನ್ನಡ
ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದ ವತಿಯಿಂದ ಗ್ರಾಹಕರಲ್ಲಿ ಅರಿವು ಮೂಡಿಸುವಂತಹ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.
ಜೆಪಿ ನಗರದಲ್ಲಿರುವ ಪಂಡಿತ್ ಗವಾಯಿ ಸ್ಟೇಡಿಯಂ ಆವರಣದಲ್ಲಿ
ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಹಾಗೂ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಸುವರ್ಣ ಮಹೋತ್ಸವ ಅಂಗವಾಗಿ ಗ್ರಾಹಕನೇ ರಾಜ ಪುಸ್ತಕವನ್ನು ಹೊರತರಲಾಗಿದ್ದು, ನಿವೃತ್ತ ಡಿ ವೈ ಎಸ್ ಪಿ ರಂಗಸ್ವಾಮಿ ಅವರು ಲೋಕಾರ್ಪಣೆ ಮಾಡಿದರು.
ಈ ವೇಳೆ ಮಾತನಾಡಿದ ರಂಗಸ್ವಾಮಿ ಗ್ರಾಹಕರ ಹಕ್ಕುಗಳು ಏನು, ಅವುಗಳನ್ನು ಏಕೆ ನಾವು ತಿಳಿದುಕೊಳ್ಳಬೇಕು ಎಂಬುದರ ಬಗ್ಗೆ ಸಾರ್ವಜನಿಕರಲ್ಲಿ ಮೊದಲು ಅರಿವು ಮೂಡಬೇಕು ಎಂದು ಹೇಳಿದರು.ಹೇಗೆ ನಮಗೆ ಮೋಸ ಆಗುತ್ತಿದೆ ಅಂಗಡಿಗಳಲ್ಲಿ ಎಂ ಆರ್ ಪಿ ಹಾಕಿರುತ್ತಾರೆ ಆದರೆ ಅದರಲ್ಲಿ ಎಲ್ಲ ಟ್ಯಾಕ್ಸ್ ಸೇರಿದ್ದರು ಮತ್ತೆ ಇನ್ನೇನು ಸೇರಿಸಿ ಹೆಚ್ಚಿನ ಬೆಲೆ ಪಡೆಯುತ್ತಾರೆ ಇಂತಹ ವಿಚಾರಗಳ ಬಗ್ಗೆ ಎಚ್ಚರದಿಂದ ಇರುವಂತರ ಸಲಹೆ ನೀಡಿದರು.ಎಲ್ಲೇ ಆಗಲಿ, ಯಾರೇ ಆಗಲಿ ಮೋಸ ಆಗುತ್ತಿರುವುದು ಕಂಡಾಗ ಪ್ರಶ್ನೆಸಬೇಕು, ನಮ್ಮ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕು, ಸಾರ್ವಜನಿಕರಲ್ಲಿ ಇದೆಲ್ಲದರ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಯುವ ಜನತೆಗೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದ ಅಧ್ಯಕ್ಷ ಚಂದ್ರಶೇಖರ್, ಹಿರಿಯ ಪತ್ರಕರ್ತರಾದ ಅನಿಲ್ ಕುಮಾರ್, ನಿವೃತ್ತ ಬ್ಯಾಂಕ್ ಉದ್ಯೋಗಿ ಹಾಗೂ ಹಿರಿಯ ವಕೀಲರಾದ ರವೀಂದ್ರ,ಪ್ರಾಂತ ಕಾರ್ಯಕಾರಣಿಯ ಸದಸ್ಯರಾದ ಡಾ. ಜಿ. ವಿ ರವಿಶಂಕರ್, ಜೆಪಿ ನಗರದ ಹಿರಿಯ ನಾಗರಿಕ ವೇದಿಕೆಯ ಅಧ್ಯಕ್ಷ ಬಸವರಾಜ್, ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಉಪಾಧ್ಯಕ್ಷ ಜಯಕುಮಾರ್, ದೊರೆಸ್ವಾಮಿ, ಮಹಿಳಾ ಪ್ರಮುಖ್ ನಾಗಮಣಿ, ದರ್ಶನ್ ಮೂರ್ತಿ ಮತ್ತಿರರು ಪಾಲ್ಗೊಂಡಿದ್ದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *