ಮಹಿಷ ಚಿತ್ರ ಇರುವ ರಂಗೋಲಿ ತುಳಿದು ವಿಕೃತ ಮೆರೆದ ಆರೋಪ…6 ಮಂದಿ ವಿರುದ್ದ FIR ದಾಖಲು…

  • Crime
  • December 27, 2023
  • No Comment
  • 513

ನಂಜನಗೂಡು,ಡಿ27,Tv10 ಕನ್ನಡ

ನಿನ್ನೆ ನಂಜನಗೂಡಿನಲ್ಲಿ ನಡೆದ ಅಂಧಕಾಸುರನ ಸಂಹಾರ ಕಾರ್ಯಕ್ರಮದಲ್ಲಿ ಶೋಷಿತ ವರ್ಗದ ಮಹಾಪುರುಷ ಮಹಿಷ ಚಕ್ರವರ್ತಿಯ ಚಿತ್ರವಿರುವ ರಂಗೋಲಿ ತುಳಿದು ವಿಕೃತಿ ಮೆರೆಯುವ ಮೂಲಕ ಮೌಢ್ಯಾಚರಣೆ ಆಚರಿಸಿದ್ದಾರೆಂದು ಆರೋಪಿಸಿ ಟೌನ್ ಪೊಲೀಸ್ ಠಾಣೆಯಲ್ಲಿ ಆರು ಮಂದಿ ವಿರುದ್ದ ಪ್ರಕರಣ ದಾಖಲಾಗಿದೆ.ಮೌಢ್ಯಪ್ರತಿಭಂಧಕ ಕಾಯ್ದೆ ಜಾರಿ ಇದ್ದರೂ ಅದನ್ನು ಲೆಕ್ಕಿಸದೆ ಮಹಿಷ ಚಿತ್ರವಿರುವ ರಂಗೋಲಿಯನ್ನ ತುಳಿದು ವಿಕೃತ ಮೆರೆದಿದ್ದಾರೆಂದು ಮಾಲೇಶ್ ಎಂಬುವರು ಕಪಿಲೇಶ್,ಅನಂತ್,ಕಿರಣ್,ರಾಜು,ರವಿ,ಗಿರೀಶ್ ಹಾಗೂ ಇತರರ ಮೇಲೆ FIR ದಾಖಲಿಸಿದ್ದಾರೆ.

ಶ್ರೀಕಂಠೇಶ್ವರನ ದೇವಾಲಯದ ಬಳಿ ನಿನ್ನೆ ಅಂಧಕಾಸುರನ ಸಂಹಾರ ಕಾರ್ಯಕ್ರಮ ಇತ್ತು.ಇಲ್ಲಿ ಮಹಿಷನ ಚಿತ್ರದ ಫ್ಲೆಕ್ಸ್ ಅಳವಡಿಸಿ ರಂಗೋಲಿ ಬಿಡಿಸಿ ಸಂಹಾರ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ಇದನ್ನ ಮಾಲೇಶ್,ನಾರಾಯಣ್ ಹಾಗೂ ಇತರರು ವಿರೋಧಿಸಿದ್ದರು.ಈ ವೇಳೆ ದೇವಾಲಯದ ಇಓ ಜಗದೀಶ್ ಕುಮಾರ್ ರವರು ಮೌಢ್ಯಾಚರಣೆ ಆಚರಿಸುವುದಿಲ್ಲವೆಂದು ನಂಬಿಸಿ ನಂತರ ಮಹಿಷನ ಚಿತ್ರವಿರುವ ರಂಗೋಲಿಯನ್ನ ಕೆಲವು ಆಗಮಿಕರು ಹಾಗೂ ಪುರೋಹಿತರು ತುಳಿದು ವಿಕೃತಿ ಮೆರೆದಿರುವುದಲ್ಲದೆ ನಮ್ಮ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆಂದು ದೂರಿನಲ್ಲಿ ಆರೋಪಿಸಿದ್ದಾರೆ.ಮಹಿಷ ಚಿತ್ರವನ್ನ ತುಳಿಯುವ ವೇಳೆ ವಿರೋಧಿಸಿದಾಗ ನಮ್ಮ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾರೆಂದು ಆರೋಪಿಸಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *