ಮಹಿಷ ಚಿತ್ರ ಇರುವ ರಂಗೋಲಿ ತುಳಿದು ವಿಕೃತ ಮೆರೆದ ಆರೋಪ…6 ಮಂದಿ ವಿರುದ್ದ FIR ದಾಖಲು…

  • Crime
  • December 27, 2023
  • No Comment
  • 476

ನಂಜನಗೂಡು,ಡಿ27,Tv10 ಕನ್ನಡ

ನಿನ್ನೆ ನಂಜನಗೂಡಿನಲ್ಲಿ ನಡೆದ ಅಂಧಕಾಸುರನ ಸಂಹಾರ ಕಾರ್ಯಕ್ರಮದಲ್ಲಿ ಶೋಷಿತ ವರ್ಗದ ಮಹಾಪುರುಷ ಮಹಿಷ ಚಕ್ರವರ್ತಿಯ ಚಿತ್ರವಿರುವ ರಂಗೋಲಿ ತುಳಿದು ವಿಕೃತಿ ಮೆರೆಯುವ ಮೂಲಕ ಮೌಢ್ಯಾಚರಣೆ ಆಚರಿಸಿದ್ದಾರೆಂದು ಆರೋಪಿಸಿ ಟೌನ್ ಪೊಲೀಸ್ ಠಾಣೆಯಲ್ಲಿ ಆರು ಮಂದಿ ವಿರುದ್ದ ಪ್ರಕರಣ ದಾಖಲಾಗಿದೆ.ಮೌಢ್ಯಪ್ರತಿಭಂಧಕ ಕಾಯ್ದೆ ಜಾರಿ ಇದ್ದರೂ ಅದನ್ನು ಲೆಕ್ಕಿಸದೆ ಮಹಿಷ ಚಿತ್ರವಿರುವ ರಂಗೋಲಿಯನ್ನ ತುಳಿದು ವಿಕೃತ ಮೆರೆದಿದ್ದಾರೆಂದು ಮಾಲೇಶ್ ಎಂಬುವರು ಕಪಿಲೇಶ್,ಅನಂತ್,ಕಿರಣ್,ರಾಜು,ರವಿ,ಗಿರೀಶ್ ಹಾಗೂ ಇತರರ ಮೇಲೆ FIR ದಾಖಲಿಸಿದ್ದಾರೆ.

ಶ್ರೀಕಂಠೇಶ್ವರನ ದೇವಾಲಯದ ಬಳಿ ನಿನ್ನೆ ಅಂಧಕಾಸುರನ ಸಂಹಾರ ಕಾರ್ಯಕ್ರಮ ಇತ್ತು.ಇಲ್ಲಿ ಮಹಿಷನ ಚಿತ್ರದ ಫ್ಲೆಕ್ಸ್ ಅಳವಡಿಸಿ ರಂಗೋಲಿ ಬಿಡಿಸಿ ಸಂಹಾರ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ಇದನ್ನ ಮಾಲೇಶ್,ನಾರಾಯಣ್ ಹಾಗೂ ಇತರರು ವಿರೋಧಿಸಿದ್ದರು.ಈ ವೇಳೆ ದೇವಾಲಯದ ಇಓ ಜಗದೀಶ್ ಕುಮಾರ್ ರವರು ಮೌಢ್ಯಾಚರಣೆ ಆಚರಿಸುವುದಿಲ್ಲವೆಂದು ನಂಬಿಸಿ ನಂತರ ಮಹಿಷನ ಚಿತ್ರವಿರುವ ರಂಗೋಲಿಯನ್ನ ಕೆಲವು ಆಗಮಿಕರು ಹಾಗೂ ಪುರೋಹಿತರು ತುಳಿದು ವಿಕೃತಿ ಮೆರೆದಿರುವುದಲ್ಲದೆ ನಮ್ಮ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆಂದು ದೂರಿನಲ್ಲಿ ಆರೋಪಿಸಿದ್ದಾರೆ.ಮಹಿಷ ಚಿತ್ರವನ್ನ ತುಳಿಯುವ ವೇಳೆ ವಿರೋಧಿಸಿದಾಗ ನಮ್ಮ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾರೆಂದು ಆರೋಪಿಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *