ಮೈಸೂರಿನಲ್ಲೂ ಒಂದು ಹನಿಟ್ರಾಪ್…ಕೇರಳಾ ಉದ್ಯಮಿಗೆ ಬ್ಲಾಕ್ ಮೇಲ್…ಮೂವರು ಅಂದರ್…ತಡವಾಗಿ ಬೆಳಕಿಗೆ ಬಂದ ಪ್ರಕರಣ…

  • Crime
  • December 28, 2023
  • No Comment
  • 914

ಮೈಸೂರು,ಡಿ28,Tv10 ಕನ್ನಡ

ಕೇರಳಾ ಉದ್ಯಮಿಯೊಬ್ಬರನ್ನ ಬಲವಂತವಾಗಿ ಎಳೆದೊಯ್ದು ಮಹಿಳೆಯ ಜೊತೆ ನಗ್ನವಾಗಿ ಮಲಗಿರುವಂತೆ ಫೋಟೋ ತೆಗೆದು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿದ್ದ ಆರೋಪಿಗಳನ್ನ ಬಂಧಿಸುವಲ್ಲಿ ಮೈಸೂರು ಗ್ರಾಮಾಂತರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.ಸುಮಾರು 9 ತಿಂಗಳ ಹಿಂದೆ ನಡೆದ ಘಟನೆಯನ್ನ ಬೆನ್ನತ್ತಿದ ಗ್ರಾಮಾಂತರ ಪೊಲೀಸರು ಮಹಿಳೆ ಸೇರಿದಂತೆ ಮೂವರು ಆರೋಪಿಗಳನ್ನ ಸೆರೆಹಿಡಿದು ಜೈಲಿಗಟ್ಟಿದ್ದಾರೆ.ಆರೋಪಿಗಳಿಂದ 50 ಸಾವಿರ ನಗದು ಹಾಗೂ ಕೃತ್ಯಕ್ಕೆ ಬಳಸಿದ ಇನೋವಾ ಕಾರ್ ವಶಪಡಿಸಿಕೊಂಡಿದ್ದಾರೆ.ಫಜಲುಲ್ಲಾ ರೆಹಮಾನ್,ರಿಜ್ವಾನ್ ಹಾಗೂ ಮೋನಾ(ಹೆಸರು ಬದಲಿಸಲಾಗಿದೆ) ಬಂಧಿತ ಆರೋಪಿಗಳು.ಕೇರಳಾ ರಾಜ್ಯದ ತಿರುನೆಲ್ಲಿಯ ಉದ್ಯಮಿ ಸುನ್ನಿ ಎಂಬುವರನ್ನ ಬ್ಲಾಕ್ ಮೇಲ್ ಮಾಡಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ.

ಮಾರ್ಚ್ ತಿಂಗಳಿನಲ್ಲಿ ಸುನ್ನಿ ರವರು ಚೆನ್ನೈನಿಂದ ಹಿಂದಿರುಗಿ ಮೈಸೂರು ಮೂಲಕ ತಮ್ಮ ಕಾರಿನಲ್ಲಿ ಕೇರಳಾ ಗೆ ತೆರಳುತ್ತಿದ್ದ ವೇಳೆ ಮಾನಂದವಾಡಿ ರಸ್ತೆಯಲ್ಲಿ ಈ ಆರೋಪಿಗಳು ಅಡ್ಡಗಟ್ಟಿ ಬಲವಂತವಾಗಿ ಮನೆಯೊಂದಕ್ಕೆ ಕರೆದೊಯ್ದು ಮೋನ ಜೊತೆ ನಗ್ನವಾಗಿ ಮಲಗಿಸಿ ಫೋಟೋ ಹಾಗೂ ವಿಡಿಯೋಗಳನ್ನ ಚಿತ್ರೀಕರಿಸಿದ್ದಾರೆ.ನಂತರ ಸುನ್ನಿ ರವರಿಗೆ ಫೋಟೋ ಹಾಗೂ ವಿಡಿಯೋಗಳನ್ನ ತೋರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿದುಬಿಡುವುದಾಗಿ ಹೆದರಿಸಿ 10 ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದಾರೆ.ಗೌರವಕ್ಕೆ ಅಂಜಿದ ಸುನ್ನಿ 5 ಲಕ್ಷ ಪಾವತಿಸಿದ್ದಾರೆ.ಅಲ್ಲದೆ ಸುನ್ನಿ ರವರು ಧರಿಸಿದ್ದ ಚಿನ್ನದ ಉಂಗುರ ಹಾಗೂ ನಗದು ದೋಚಿ ಎಸ್ಕೇಪ್ ಆಗಿದ್ದಾರೆ.ನಡೆದ ಘಟನೆಯನ್ನ ಸುನ್ನಿರವರು ತಿರುನೆಲ್ಲಿ ಠಾಣೆ ಪೊಲೀಸರಿಗೆ ತಿಳಿಸಿ ಪ್ರಕರಣ ದಾಖಲಿಸಿದ್ದಾರೆ. ಕೃತ್ಯ ಮೈಸೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದ ಹಿನ್ನಲೆ ಪ್ರಕರಣ ವರ್ಗಾವಣೆ ಆಗಿದೆ.ಪ್ರಕರಣದ ತನಿಖೆ ಕೈಗೊಂಡ ಮೈಸೂರು ಗ್ರಾಮಾಂತರ ಠಾಣೆ ಪೊಲೀಸರು ಆರೋಪಿಗಳ ಬೆನ್ನತ್ತಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಆರೋಪಿಗಳಿಂದ 50 ಸಾವಿರ ನಗದು ಹಾಗೂ ಕೃತ್ಯಕ್ಕೆ ಬಳಸಿದ ಇನೋವಾ ಕಾರ್ ವಶಪಡಿಸಿಕೊಂಡಿದ್ದಾರೆ.ಇದೇ ತಂಡ ಮಡಿಕೇರಿಯಲ್ಲೂ ಇಂತಹದ್ದೇ ಕೃತ್ಯ ನಡೆಸಿರುವುದು ತನಿಖೆಯಲ್ಲಿ ತಿಳಿದುಬಂದಿದೆ…

ಮೈಸೂರು ಜಿಲ್ಲಾ ಎಸ್ಪಿ ಸೀಮಾ ಲಾಟ್ಕರ್,ಅಡಿಷನಲ್ ಎಸ್ಪಿ ನಂದಿನಿ ಹಾಗೂ ಡಿವೈಎಸ್ಪಿ ಕರೀಂ ರಾವತರ್ ಮಾರ್ಗದರ್ಶನದಲ್ಲಿ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಡಾ.ಶೇಖರ್ ನೇತೃತ್ವದಲ್ಲಿ ಪಿಎಸ್ಸೈ ಚಂದ್ರ ಹಾಗೂ ಸಿಬ್ಬಂದಿಗಳಾದ ಮಹೇಶ್,ರವಿ,ಸುನಿಲ್ ಕುಮಾರ್ ರವರು ಆರೋಪಿಗಳ ಸೆರೆ ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…

Spread the love

Related post

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…
ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…

Leave a Reply

Your email address will not be published. Required fields are marked *