ಮೈಸೂರಿನಲ್ಲೂ ಒಂದು ಹನಿಟ್ರಾಪ್…ಕೇರಳಾ ಉದ್ಯಮಿಗೆ ಬ್ಲಾಕ್ ಮೇಲ್…ಮೂವರು ಅಂದರ್…ತಡವಾಗಿ ಬೆಳಕಿಗೆ ಬಂದ ಪ್ರಕರಣ…

  • Crime
  • December 28, 2023
  • No Comment
  • 981

ಮೈಸೂರು,ಡಿ28,Tv10 ಕನ್ನಡ

ಕೇರಳಾ ಉದ್ಯಮಿಯೊಬ್ಬರನ್ನ ಬಲವಂತವಾಗಿ ಎಳೆದೊಯ್ದು ಮಹಿಳೆಯ ಜೊತೆ ನಗ್ನವಾಗಿ ಮಲಗಿರುವಂತೆ ಫೋಟೋ ತೆಗೆದು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿದ್ದ ಆರೋಪಿಗಳನ್ನ ಬಂಧಿಸುವಲ್ಲಿ ಮೈಸೂರು ಗ್ರಾಮಾಂತರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.ಸುಮಾರು 9 ತಿಂಗಳ ಹಿಂದೆ ನಡೆದ ಘಟನೆಯನ್ನ ಬೆನ್ನತ್ತಿದ ಗ್ರಾಮಾಂತರ ಪೊಲೀಸರು ಮಹಿಳೆ ಸೇರಿದಂತೆ ಮೂವರು ಆರೋಪಿಗಳನ್ನ ಸೆರೆಹಿಡಿದು ಜೈಲಿಗಟ್ಟಿದ್ದಾರೆ.ಆರೋಪಿಗಳಿಂದ 50 ಸಾವಿರ ನಗದು ಹಾಗೂ ಕೃತ್ಯಕ್ಕೆ ಬಳಸಿದ ಇನೋವಾ ಕಾರ್ ವಶಪಡಿಸಿಕೊಂಡಿದ್ದಾರೆ.ಫಜಲುಲ್ಲಾ ರೆಹಮಾನ್,ರಿಜ್ವಾನ್ ಹಾಗೂ ಮೋನಾ(ಹೆಸರು ಬದಲಿಸಲಾಗಿದೆ) ಬಂಧಿತ ಆರೋಪಿಗಳು.ಕೇರಳಾ ರಾಜ್ಯದ ತಿರುನೆಲ್ಲಿಯ ಉದ್ಯಮಿ ಸುನ್ನಿ ಎಂಬುವರನ್ನ ಬ್ಲಾಕ್ ಮೇಲ್ ಮಾಡಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ.

ಮಾರ್ಚ್ ತಿಂಗಳಿನಲ್ಲಿ ಸುನ್ನಿ ರವರು ಚೆನ್ನೈನಿಂದ ಹಿಂದಿರುಗಿ ಮೈಸೂರು ಮೂಲಕ ತಮ್ಮ ಕಾರಿನಲ್ಲಿ ಕೇರಳಾ ಗೆ ತೆರಳುತ್ತಿದ್ದ ವೇಳೆ ಮಾನಂದವಾಡಿ ರಸ್ತೆಯಲ್ಲಿ ಈ ಆರೋಪಿಗಳು ಅಡ್ಡಗಟ್ಟಿ ಬಲವಂತವಾಗಿ ಮನೆಯೊಂದಕ್ಕೆ ಕರೆದೊಯ್ದು ಮೋನ ಜೊತೆ ನಗ್ನವಾಗಿ ಮಲಗಿಸಿ ಫೋಟೋ ಹಾಗೂ ವಿಡಿಯೋಗಳನ್ನ ಚಿತ್ರೀಕರಿಸಿದ್ದಾರೆ.ನಂತರ ಸುನ್ನಿ ರವರಿಗೆ ಫೋಟೋ ಹಾಗೂ ವಿಡಿಯೋಗಳನ್ನ ತೋರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿದುಬಿಡುವುದಾಗಿ ಹೆದರಿಸಿ 10 ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದಾರೆ.ಗೌರವಕ್ಕೆ ಅಂಜಿದ ಸುನ್ನಿ 5 ಲಕ್ಷ ಪಾವತಿಸಿದ್ದಾರೆ.ಅಲ್ಲದೆ ಸುನ್ನಿ ರವರು ಧರಿಸಿದ್ದ ಚಿನ್ನದ ಉಂಗುರ ಹಾಗೂ ನಗದು ದೋಚಿ ಎಸ್ಕೇಪ್ ಆಗಿದ್ದಾರೆ.ನಡೆದ ಘಟನೆಯನ್ನ ಸುನ್ನಿರವರು ತಿರುನೆಲ್ಲಿ ಠಾಣೆ ಪೊಲೀಸರಿಗೆ ತಿಳಿಸಿ ಪ್ರಕರಣ ದಾಖಲಿಸಿದ್ದಾರೆ. ಕೃತ್ಯ ಮೈಸೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದ ಹಿನ್ನಲೆ ಪ್ರಕರಣ ವರ್ಗಾವಣೆ ಆಗಿದೆ.ಪ್ರಕರಣದ ತನಿಖೆ ಕೈಗೊಂಡ ಮೈಸೂರು ಗ್ರಾಮಾಂತರ ಠಾಣೆ ಪೊಲೀಸರು ಆರೋಪಿಗಳ ಬೆನ್ನತ್ತಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಆರೋಪಿಗಳಿಂದ 50 ಸಾವಿರ ನಗದು ಹಾಗೂ ಕೃತ್ಯಕ್ಕೆ ಬಳಸಿದ ಇನೋವಾ ಕಾರ್ ವಶಪಡಿಸಿಕೊಂಡಿದ್ದಾರೆ.ಇದೇ ತಂಡ ಮಡಿಕೇರಿಯಲ್ಲೂ ಇಂತಹದ್ದೇ ಕೃತ್ಯ ನಡೆಸಿರುವುದು ತನಿಖೆಯಲ್ಲಿ ತಿಳಿದುಬಂದಿದೆ…

ಮೈಸೂರು ಜಿಲ್ಲಾ ಎಸ್ಪಿ ಸೀಮಾ ಲಾಟ್ಕರ್,ಅಡಿಷನಲ್ ಎಸ್ಪಿ ನಂದಿನಿ ಹಾಗೂ ಡಿವೈಎಸ್ಪಿ ಕರೀಂ ರಾವತರ್ ಮಾರ್ಗದರ್ಶನದಲ್ಲಿ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಡಾ.ಶೇಖರ್ ನೇತೃತ್ವದಲ್ಲಿ ಪಿಎಸ್ಸೈ ಚಂದ್ರ ಹಾಗೂ ಸಿಬ್ಬಂದಿಗಳಾದ ಮಹೇಶ್,ರವಿ,ಸುನಿಲ್ ಕುಮಾರ್ ರವರು ಆರೋಪಿಗಳ ಸೆರೆ ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *