ಮೈಸೂರಿನಲ್ಲೂ ಒಂದು ಹನಿಟ್ರಾಪ್…ಕೇರಳಾ ಉದ್ಯಮಿಗೆ ಬ್ಲಾಕ್ ಮೇಲ್…ಮೂವರು ಅಂದರ್…ತಡವಾಗಿ ಬೆಳಕಿಗೆ ಬಂದ ಪ್ರಕರಣ…

  • Crime
  • December 28, 2023
  • No Comment
  • 954

ಮೈಸೂರು,ಡಿ28,Tv10 ಕನ್ನಡ

ಕೇರಳಾ ಉದ್ಯಮಿಯೊಬ್ಬರನ್ನ ಬಲವಂತವಾಗಿ ಎಳೆದೊಯ್ದು ಮಹಿಳೆಯ ಜೊತೆ ನಗ್ನವಾಗಿ ಮಲಗಿರುವಂತೆ ಫೋಟೋ ತೆಗೆದು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿದ್ದ ಆರೋಪಿಗಳನ್ನ ಬಂಧಿಸುವಲ್ಲಿ ಮೈಸೂರು ಗ್ರಾಮಾಂತರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.ಸುಮಾರು 9 ತಿಂಗಳ ಹಿಂದೆ ನಡೆದ ಘಟನೆಯನ್ನ ಬೆನ್ನತ್ತಿದ ಗ್ರಾಮಾಂತರ ಪೊಲೀಸರು ಮಹಿಳೆ ಸೇರಿದಂತೆ ಮೂವರು ಆರೋಪಿಗಳನ್ನ ಸೆರೆಹಿಡಿದು ಜೈಲಿಗಟ್ಟಿದ್ದಾರೆ.ಆರೋಪಿಗಳಿಂದ 50 ಸಾವಿರ ನಗದು ಹಾಗೂ ಕೃತ್ಯಕ್ಕೆ ಬಳಸಿದ ಇನೋವಾ ಕಾರ್ ವಶಪಡಿಸಿಕೊಂಡಿದ್ದಾರೆ.ಫಜಲುಲ್ಲಾ ರೆಹಮಾನ್,ರಿಜ್ವಾನ್ ಹಾಗೂ ಮೋನಾ(ಹೆಸರು ಬದಲಿಸಲಾಗಿದೆ) ಬಂಧಿತ ಆರೋಪಿಗಳು.ಕೇರಳಾ ರಾಜ್ಯದ ತಿರುನೆಲ್ಲಿಯ ಉದ್ಯಮಿ ಸುನ್ನಿ ಎಂಬುವರನ್ನ ಬ್ಲಾಕ್ ಮೇಲ್ ಮಾಡಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ.

ಮಾರ್ಚ್ ತಿಂಗಳಿನಲ್ಲಿ ಸುನ್ನಿ ರವರು ಚೆನ್ನೈನಿಂದ ಹಿಂದಿರುಗಿ ಮೈಸೂರು ಮೂಲಕ ತಮ್ಮ ಕಾರಿನಲ್ಲಿ ಕೇರಳಾ ಗೆ ತೆರಳುತ್ತಿದ್ದ ವೇಳೆ ಮಾನಂದವಾಡಿ ರಸ್ತೆಯಲ್ಲಿ ಈ ಆರೋಪಿಗಳು ಅಡ್ಡಗಟ್ಟಿ ಬಲವಂತವಾಗಿ ಮನೆಯೊಂದಕ್ಕೆ ಕರೆದೊಯ್ದು ಮೋನ ಜೊತೆ ನಗ್ನವಾಗಿ ಮಲಗಿಸಿ ಫೋಟೋ ಹಾಗೂ ವಿಡಿಯೋಗಳನ್ನ ಚಿತ್ರೀಕರಿಸಿದ್ದಾರೆ.ನಂತರ ಸುನ್ನಿ ರವರಿಗೆ ಫೋಟೋ ಹಾಗೂ ವಿಡಿಯೋಗಳನ್ನ ತೋರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿದುಬಿಡುವುದಾಗಿ ಹೆದರಿಸಿ 10 ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದಾರೆ.ಗೌರವಕ್ಕೆ ಅಂಜಿದ ಸುನ್ನಿ 5 ಲಕ್ಷ ಪಾವತಿಸಿದ್ದಾರೆ.ಅಲ್ಲದೆ ಸುನ್ನಿ ರವರು ಧರಿಸಿದ್ದ ಚಿನ್ನದ ಉಂಗುರ ಹಾಗೂ ನಗದು ದೋಚಿ ಎಸ್ಕೇಪ್ ಆಗಿದ್ದಾರೆ.ನಡೆದ ಘಟನೆಯನ್ನ ಸುನ್ನಿರವರು ತಿರುನೆಲ್ಲಿ ಠಾಣೆ ಪೊಲೀಸರಿಗೆ ತಿಳಿಸಿ ಪ್ರಕರಣ ದಾಖಲಿಸಿದ್ದಾರೆ. ಕೃತ್ಯ ಮೈಸೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದ ಹಿನ್ನಲೆ ಪ್ರಕರಣ ವರ್ಗಾವಣೆ ಆಗಿದೆ.ಪ್ರಕರಣದ ತನಿಖೆ ಕೈಗೊಂಡ ಮೈಸೂರು ಗ್ರಾಮಾಂತರ ಠಾಣೆ ಪೊಲೀಸರು ಆರೋಪಿಗಳ ಬೆನ್ನತ್ತಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಆರೋಪಿಗಳಿಂದ 50 ಸಾವಿರ ನಗದು ಹಾಗೂ ಕೃತ್ಯಕ್ಕೆ ಬಳಸಿದ ಇನೋವಾ ಕಾರ್ ವಶಪಡಿಸಿಕೊಂಡಿದ್ದಾರೆ.ಇದೇ ತಂಡ ಮಡಿಕೇರಿಯಲ್ಲೂ ಇಂತಹದ್ದೇ ಕೃತ್ಯ ನಡೆಸಿರುವುದು ತನಿಖೆಯಲ್ಲಿ ತಿಳಿದುಬಂದಿದೆ…

ಮೈಸೂರು ಜಿಲ್ಲಾ ಎಸ್ಪಿ ಸೀಮಾ ಲಾಟ್ಕರ್,ಅಡಿಷನಲ್ ಎಸ್ಪಿ ನಂದಿನಿ ಹಾಗೂ ಡಿವೈಎಸ್ಪಿ ಕರೀಂ ರಾವತರ್ ಮಾರ್ಗದರ್ಶನದಲ್ಲಿ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಡಾ.ಶೇಖರ್ ನೇತೃತ್ವದಲ್ಲಿ ಪಿಎಸ್ಸೈ ಚಂದ್ರ ಹಾಗೂ ಸಿಬ್ಬಂದಿಗಳಾದ ಮಹೇಶ್,ರವಿ,ಸುನಿಲ್ ಕುಮಾರ್ ರವರು ಆರೋಪಿಗಳ ಸೆರೆ ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *