ಮೈಸೂರಿನಲ್ಲೂ ಒಂದು ಹನಿಟ್ರಾಪ್…ಕೇರಳಾ ಉದ್ಯಮಿಗೆ ಬ್ಲಾಕ್ ಮೇಲ್…ಮೂವರು ಅಂದರ್…ತಡವಾಗಿ ಬೆಳಕಿಗೆ ಬಂದ ಪ್ರಕರಣ…

  • Crime
  • December 28, 2023
  • No Comment
  • 983

ಮೈಸೂರು,ಡಿ28,Tv10 ಕನ್ನಡ

ಕೇರಳಾ ಉದ್ಯಮಿಯೊಬ್ಬರನ್ನ ಬಲವಂತವಾಗಿ ಎಳೆದೊಯ್ದು ಮಹಿಳೆಯ ಜೊತೆ ನಗ್ನವಾಗಿ ಮಲಗಿರುವಂತೆ ಫೋಟೋ ತೆಗೆದು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿದ್ದ ಆರೋಪಿಗಳನ್ನ ಬಂಧಿಸುವಲ್ಲಿ ಮೈಸೂರು ಗ್ರಾಮಾಂತರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.ಸುಮಾರು 9 ತಿಂಗಳ ಹಿಂದೆ ನಡೆದ ಘಟನೆಯನ್ನ ಬೆನ್ನತ್ತಿದ ಗ್ರಾಮಾಂತರ ಪೊಲೀಸರು ಮಹಿಳೆ ಸೇರಿದಂತೆ ಮೂವರು ಆರೋಪಿಗಳನ್ನ ಸೆರೆಹಿಡಿದು ಜೈಲಿಗಟ್ಟಿದ್ದಾರೆ.ಆರೋಪಿಗಳಿಂದ 50 ಸಾವಿರ ನಗದು ಹಾಗೂ ಕೃತ್ಯಕ್ಕೆ ಬಳಸಿದ ಇನೋವಾ ಕಾರ್ ವಶಪಡಿಸಿಕೊಂಡಿದ್ದಾರೆ.ಫಜಲುಲ್ಲಾ ರೆಹಮಾನ್,ರಿಜ್ವಾನ್ ಹಾಗೂ ಮೋನಾ(ಹೆಸರು ಬದಲಿಸಲಾಗಿದೆ) ಬಂಧಿತ ಆರೋಪಿಗಳು.ಕೇರಳಾ ರಾಜ್ಯದ ತಿರುನೆಲ್ಲಿಯ ಉದ್ಯಮಿ ಸುನ್ನಿ ಎಂಬುವರನ್ನ ಬ್ಲಾಕ್ ಮೇಲ್ ಮಾಡಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ.

ಮಾರ್ಚ್ ತಿಂಗಳಿನಲ್ಲಿ ಸುನ್ನಿ ರವರು ಚೆನ್ನೈನಿಂದ ಹಿಂದಿರುಗಿ ಮೈಸೂರು ಮೂಲಕ ತಮ್ಮ ಕಾರಿನಲ್ಲಿ ಕೇರಳಾ ಗೆ ತೆರಳುತ್ತಿದ್ದ ವೇಳೆ ಮಾನಂದವಾಡಿ ರಸ್ತೆಯಲ್ಲಿ ಈ ಆರೋಪಿಗಳು ಅಡ್ಡಗಟ್ಟಿ ಬಲವಂತವಾಗಿ ಮನೆಯೊಂದಕ್ಕೆ ಕರೆದೊಯ್ದು ಮೋನ ಜೊತೆ ನಗ್ನವಾಗಿ ಮಲಗಿಸಿ ಫೋಟೋ ಹಾಗೂ ವಿಡಿಯೋಗಳನ್ನ ಚಿತ್ರೀಕರಿಸಿದ್ದಾರೆ.ನಂತರ ಸುನ್ನಿ ರವರಿಗೆ ಫೋಟೋ ಹಾಗೂ ವಿಡಿಯೋಗಳನ್ನ ತೋರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿದುಬಿಡುವುದಾಗಿ ಹೆದರಿಸಿ 10 ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದಾರೆ.ಗೌರವಕ್ಕೆ ಅಂಜಿದ ಸುನ್ನಿ 5 ಲಕ್ಷ ಪಾವತಿಸಿದ್ದಾರೆ.ಅಲ್ಲದೆ ಸುನ್ನಿ ರವರು ಧರಿಸಿದ್ದ ಚಿನ್ನದ ಉಂಗುರ ಹಾಗೂ ನಗದು ದೋಚಿ ಎಸ್ಕೇಪ್ ಆಗಿದ್ದಾರೆ.ನಡೆದ ಘಟನೆಯನ್ನ ಸುನ್ನಿರವರು ತಿರುನೆಲ್ಲಿ ಠಾಣೆ ಪೊಲೀಸರಿಗೆ ತಿಳಿಸಿ ಪ್ರಕರಣ ದಾಖಲಿಸಿದ್ದಾರೆ. ಕೃತ್ಯ ಮೈಸೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದ ಹಿನ್ನಲೆ ಪ್ರಕರಣ ವರ್ಗಾವಣೆ ಆಗಿದೆ.ಪ್ರಕರಣದ ತನಿಖೆ ಕೈಗೊಂಡ ಮೈಸೂರು ಗ್ರಾಮಾಂತರ ಠಾಣೆ ಪೊಲೀಸರು ಆರೋಪಿಗಳ ಬೆನ್ನತ್ತಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಆರೋಪಿಗಳಿಂದ 50 ಸಾವಿರ ನಗದು ಹಾಗೂ ಕೃತ್ಯಕ್ಕೆ ಬಳಸಿದ ಇನೋವಾ ಕಾರ್ ವಶಪಡಿಸಿಕೊಂಡಿದ್ದಾರೆ.ಇದೇ ತಂಡ ಮಡಿಕೇರಿಯಲ್ಲೂ ಇಂತಹದ್ದೇ ಕೃತ್ಯ ನಡೆಸಿರುವುದು ತನಿಖೆಯಲ್ಲಿ ತಿಳಿದುಬಂದಿದೆ…

ಮೈಸೂರು ಜಿಲ್ಲಾ ಎಸ್ಪಿ ಸೀಮಾ ಲಾಟ್ಕರ್,ಅಡಿಷನಲ್ ಎಸ್ಪಿ ನಂದಿನಿ ಹಾಗೂ ಡಿವೈಎಸ್ಪಿ ಕರೀಂ ರಾವತರ್ ಮಾರ್ಗದರ್ಶನದಲ್ಲಿ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಡಾ.ಶೇಖರ್ ನೇತೃತ್ವದಲ್ಲಿ ಪಿಎಸ್ಸೈ ಚಂದ್ರ ಹಾಗೂ ಸಿಬ್ಬಂದಿಗಳಾದ ಮಹೇಶ್,ರವಿ,ಸುನಿಲ್ ಕುಮಾರ್ ರವರು ಆರೋಪಿಗಳ ಸೆರೆ ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *