ಮೇಲುಕೋಟೆ ಚಲುವನಾರಾಯಣಸ್ವಾಮಿ ದೇವಾಲಯದ ಜಮೀನಿಗೆ ಕನ್ನ ಪ್ರಕರಣ…ಸಮಿತಿ ರಚನೆ…ಸ್ಥಳಕ್ಕೆ ಅಧಿಕಾರಿಗಳ ಭೇಟಿ ಪರಿಶೀಲನೆ…

ಮೈಸೂರು,ಡಿ29,Tv10 ಕನ್ನಡ

ಮೇಲುಕೋಟೆ ಶ್ರೀ ಚಲುವನಾರಾಯಣಸ್ವಾಮಿ ದೇವಾಲಯಕ್ಕೇ ಸೇರಿದ ಜಮೀನುಗಳನ್ನ ಲಪಟಾಯಿಸಿದ ಖದೀಮರ ವಿರುದ್ದ ಕ್ರಮ ಕೈಗೊಳ್ಳುವಂತೆ ಮಂಡ್ಯ ಜಿಲ್ಲೆ ಜಿಲ್ಲಾಧಿಕಾರಿಗಳು ಮೈಸೂರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದ ಪ್ರಕರಣಕ್ಕೆ ಚುರುಕು ನೀಡಲಾಗಿದೆ.ಅಕ್ರಮದ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸಮಿತಿ ರಚಿಸಿ ಸೂಚನೆ ನೀಡಲಾಗಿದೆ.ಅಕ್ರಮ ನಡೆದ ಸ್ಥಳಕ್ಕೆ ಮಂಡ್ಯ ಉಪವಿಭಾಗಾಧಿಕಾರಿ ಶಿವಮೂರ್ತಿ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.ಮೈಸೂರುತಾಲೂಕು ಕಸಬ ಹೋಬಳಿ ಕೆಸರೆ ಗ್ರಾಮದ ಸರ್ವೆ ನಂ 396 ರ 3 ಎಕ್ರೆ 07 ಗುಂಟೆ,ಸರ್ವೆ ನಂ 397 ರ 0.05 ಗುಂಟೆ,ಸರ್ವೆ ನಂ.398 ರ 1 ಎಕ್ರೆ 18 ಗುಂಟೆ ಹಾಗೂ ಸರ್ವೆ ನಂ.399 ರ 4 ಎಕ್ರೆ 18 ಗುಂಟೆ ಜಮೀನುಗಳು ಮೇಲುಕೋಟೆ ಶ್ರೀ ಚೆಲುವನಾರಾಯಣ ಸ್ವಾಮಿ ದೇವಾಲಯಕ್ಕೆ ಸೇರಿದ ಆಸ್ತಿ.ಮೈಸೂರು ಮಹರಾಜರು ದೇವಾಲಯಕ್ಕಾಗಿ ನೀಡಿದ ಜಮೀನುಗಳು ಇವು.ಕೆಲವು ಪಟ್ಟಭದ್ರ ಹಿತಾಸಕ್ತಿಗಳು,ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಸೇರಿ ಅಕ್ರಮ ಕೂಟ ರಚಿಸಿಕೊಂಡು ಸದರಿ ಜಮೀನುಗಳ ಪಹಣಿಯಲ್ಲಿ ಸರ್ಕಾರಿ ಎಂದು ನಮೂದಿಸಿ ಖಾಸಗಿ ವ್ಯಕ್ತಿಗಳಿಗೆ ಕೋಟ್ಯಾಂತರ ರೂಗಳಿಗೆ ಮಾರಾಟ,ಒಪ್ಪಂದ ಮಾಡಿ ಅಕ್ರಮವೆಸಗಿರುವುದು ದಾಖಲೆಗಳಲ್ಲಿ ಸಾಬೀತಾಗಿದೆ.ಹೀಗಾಗಿ ಅಕ್ರಮದಲ್ಲಿ ಭಾಗಿಯಾಗಿರುವ ಅಧಿಕಾರಿಗಳು,ನೌಕರರು ಹಾಗೂ ಖಾಸಗಿ ವ್ಯಕ್ತಿಗಳ ವಿರುದ್ದ ಕ್ರಮ ಕೈಗೊಂಡು ದೇವಾಲಯದ ಆಸ್ತಿ ರಕ್ಷಣೆ ಮಾಡುವಂತೆ ಮಂಡ್ಯ ಜಿಲ್ಲಾಧಿಕಾರಿಗಳು ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ರವರಿಗೆ ಪತ್ರ ಬರೆದು ಮನವಿ ಮಾಡಿದ್ದರು.ಈ ಹಿನ್ನಲೆ ಮಂಡ್ಯ ಉಪವಿಭಾಗಾಧಿಕಾರಿ ಶಿವಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ.ಸಮಿತಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *