ಮೇಲುಕೋಟೆ ಚಲುವನಾರಾಯಣಸ್ವಾಮಿ ದೇವಾಲಯದ ಜಮೀನಿಗೆ ಕನ್ನ ಪ್ರಕರಣ…ಸಮಿತಿ ರಚನೆ…ಸ್ಥಳಕ್ಕೆ ಅಧಿಕಾರಿಗಳ ಭೇಟಿ ಪರಿಶೀಲನೆ…

ಮೈಸೂರು,ಡಿ29,Tv10 ಕನ್ನಡ

ಮೇಲುಕೋಟೆ ಶ್ರೀ ಚಲುವನಾರಾಯಣಸ್ವಾಮಿ ದೇವಾಲಯಕ್ಕೇ ಸೇರಿದ ಜಮೀನುಗಳನ್ನ ಲಪಟಾಯಿಸಿದ ಖದೀಮರ ವಿರುದ್ದ ಕ್ರಮ ಕೈಗೊಳ್ಳುವಂತೆ ಮಂಡ್ಯ ಜಿಲ್ಲೆ ಜಿಲ್ಲಾಧಿಕಾರಿಗಳು ಮೈಸೂರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದ ಪ್ರಕರಣಕ್ಕೆ ಚುರುಕು ನೀಡಲಾಗಿದೆ.ಅಕ್ರಮದ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸಮಿತಿ ರಚಿಸಿ ಸೂಚನೆ ನೀಡಲಾಗಿದೆ.ಅಕ್ರಮ ನಡೆದ ಸ್ಥಳಕ್ಕೆ ಮಂಡ್ಯ ಉಪವಿಭಾಗಾಧಿಕಾರಿ ಶಿವಮೂರ್ತಿ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.ಮೈಸೂರುತಾಲೂಕು ಕಸಬ ಹೋಬಳಿ ಕೆಸರೆ ಗ್ರಾಮದ ಸರ್ವೆ ನಂ 396 ರ 3 ಎಕ್ರೆ 07 ಗುಂಟೆ,ಸರ್ವೆ ನಂ 397 ರ 0.05 ಗುಂಟೆ,ಸರ್ವೆ ನಂ.398 ರ 1 ಎಕ್ರೆ 18 ಗುಂಟೆ ಹಾಗೂ ಸರ್ವೆ ನಂ.399 ರ 4 ಎಕ್ರೆ 18 ಗುಂಟೆ ಜಮೀನುಗಳು ಮೇಲುಕೋಟೆ ಶ್ರೀ ಚೆಲುವನಾರಾಯಣ ಸ್ವಾಮಿ ದೇವಾಲಯಕ್ಕೆ ಸೇರಿದ ಆಸ್ತಿ.ಮೈಸೂರು ಮಹರಾಜರು ದೇವಾಲಯಕ್ಕಾಗಿ ನೀಡಿದ ಜಮೀನುಗಳು ಇವು.ಕೆಲವು ಪಟ್ಟಭದ್ರ ಹಿತಾಸಕ್ತಿಗಳು,ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಸೇರಿ ಅಕ್ರಮ ಕೂಟ ರಚಿಸಿಕೊಂಡು ಸದರಿ ಜಮೀನುಗಳ ಪಹಣಿಯಲ್ಲಿ ಸರ್ಕಾರಿ ಎಂದು ನಮೂದಿಸಿ ಖಾಸಗಿ ವ್ಯಕ್ತಿಗಳಿಗೆ ಕೋಟ್ಯಾಂತರ ರೂಗಳಿಗೆ ಮಾರಾಟ,ಒಪ್ಪಂದ ಮಾಡಿ ಅಕ್ರಮವೆಸಗಿರುವುದು ದಾಖಲೆಗಳಲ್ಲಿ ಸಾಬೀತಾಗಿದೆ.ಹೀಗಾಗಿ ಅಕ್ರಮದಲ್ಲಿ ಭಾಗಿಯಾಗಿರುವ ಅಧಿಕಾರಿಗಳು,ನೌಕರರು ಹಾಗೂ ಖಾಸಗಿ ವ್ಯಕ್ತಿಗಳ ವಿರುದ್ದ ಕ್ರಮ ಕೈಗೊಂಡು ದೇವಾಲಯದ ಆಸ್ತಿ ರಕ್ಷಣೆ ಮಾಡುವಂತೆ ಮಂಡ್ಯ ಜಿಲ್ಲಾಧಿಕಾರಿಗಳು ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ರವರಿಗೆ ಪತ್ರ ಬರೆದು ಮನವಿ ಮಾಡಿದ್ದರು.ಈ ಹಿನ್ನಲೆ ಮಂಡ್ಯ ಉಪವಿಭಾಗಾಧಿಕಾರಿ ಶಿವಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ.ಸಮಿತಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *