ದಟ್ಟಗಳ್ಳಿ ವಿವಾದಿತ ಜಮೀನಿನ ರಕ್ಷಣೆಗೆ ಮುಂದಾದ ಶಾಸಕದ್ವಯರು…ದೃಢೀಕರಿಸಿದ ದಾಖಲೆಗಳನ್ನ ನೀಡುವಂತೆ ಮುಡಾ ಆಯುಕ್ತರಿಗೆ ಪತ್ರ…

ಮೈಸೂರು,ಡಿ29,Tv10 ಕನ್ನಡ

ಮೈಸೂರಿನ ದಟ್ಟಗಳ್ಳಿ ಗ್ರಾಮದ ಸರ್ವೆ ನಂ.27/1,27/2,27/4,29/1a,32,38/1,38/2 ಸೇರಿದಂತೆ ವಿವಿದ ಸರ್ವೆ ನಂಬರ್ ಗಳ ಸುಮಾರು 27.34 ಎಕ್ರೆ ಜಮೀನುಗಳ ವಿವಾದಕ್ಕೆ ಬ್ರೇಕ್ ಹಾಕಲು ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕರಾದ ಕೆ.ಹರೀಶ್ ಗೌಡ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಂಡೀಸಿದ್ದೇಗೌಡ ರವರು ಮುಂದಾಗಿದ್ದಾರೆ. ಕೋಟ್ಯಾಂತರ ಬೆಲೆ ಬಾಳುವ ಮುಡಾ ಆಸ್ತಿಯನ್ನ ಕಬಳಿಸಲು ಸಂಚು ರೂಪಿಸಿರುವ ಆರೋಪಕ್ಕೆ ಸಂಭಂಧಿಸಿದಂತೆ ಪ್ರಾಧಿಕಾರದ ಬಳಿ ಇರುವ ಎಲ್ಲಾ ದಾಖಲೆಗಳನ್ನ ಧೃಢೀಕರಿಸಿ ನೀಡುವಂತೆ ಮುಡಾ ಆಯುಕ್ತರಿಗೆ ಶಾಸಕಧ್ವಯರು ಪತ್ರ ಬರೆದಿದ್ದಾರೆ.

ಸದರಿ ಜಮೀನುಗಳ ಬಗ್ಗೆ 21-3-2023 ರಲ್ಲಿ ನಡೆದ ಪ್ರಾಧಿಕಾರದ ಸಭೆಯಲ್ಲಿ ನಿರ್ಣಯ ಕೈಗೊಂಡಿದ್ದು ಇದರ ಸದುಪಯೋಗಪಡಿಸಿಕೊಂಡ ಮೂರನೇ ವ್ಯಕ್ತಿಯೊಬ್ಬರು ಉಚ್ಛನ್ಯಾಯಾಲಯದಲ್ಲಿ ಆದೇಶ ಪಡೆದುಕೊಂಡು ಕಬಳಿಸಲು ಉದ್ದೇಶಿಸಿರುವ ಆರೋಪ ಕೇಳಿ ಬಂದ ಹಿನ್ನಲೆ ಜಿಲ್ಲಾಧಿಕಾರಿಗಳು ಮುಡಾ ಆಯುಕ್ತರಿಗೆ ಪತ್ರ ಬರೆದು ದಾಖಲೆಗಳ ಸಮೇತ ಹಾಜರಾಗುವಂತೆ ಸೂಚಿಸಿದ್ದರು.ಈ ಬೆಳವಣಿಗೆಯ ಹಿನ್ನಲೆಯಲ್ಲೇ ಶಾಸಕರಿಬ್ಬರು ಒಂದೇ ಪತ್ರದಲ್ಲಿ ಸಹಿ ಹಾಕಿ ಮುಡಾ ಆಯುಕ್ತರಿಗೆ ಪತ್ರ ಬರೆದು ಸಂಪೂರ್ಣ ದಾಖಲೆಗಳನ್ನ ಒದಗಿಸುವಂತೆ ಮನವಿ ಮಾಡಿದ್ದಾರೆ.

ಸದರಿ ವಿಷಯದ ಬಗ್ಗೆ ಯಾವ ಶಾಸಕರೂ ಇದುವರೆಗರ ಚಕಾರ ಎತ್ತಿಲ್ಲ.ಮೌನ ಮುರಿದ ಶಾಸಕ ಕೆ.ಹರೀಶ್ ಗೌಡ ಹಾಗೂ ರಮೇಶ್ ಬಂಡಿ ಸಿದ್ದೇಗೌಡ ಜಿಲ್ಲಾಧಿಕಾರಿಗಳ ಪರ ಬ್ಯಾಟ್ ಬೀಸಿದ್ದಾರೆ.ಇನ್ನಾದರೂ ಮೈಸೂರು ಜಿಲ್ಲೆಯಿಂದ ಚುನಾಯಿತರಾದ ಉಳಿದ ಶಾಸಕರು ಎಚ್ಚೆತ್ತುಕೊಳ್ಳುತ್ತಾರೆಯೇ…?

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *