ದಟ್ಟಗಳ್ಳಿ ವಿವಾದಿತ ಜಮೀನಿನ ರಕ್ಷಣೆಗೆ ಮುಂದಾದ ಶಾಸಕದ್ವಯರು…ದೃಢೀಕರಿಸಿದ ದಾಖಲೆಗಳನ್ನ ನೀಡುವಂತೆ ಮುಡಾ ಆಯುಕ್ತರಿಗೆ ಪತ್ರ…

ಮೈಸೂರು,ಡಿ29,Tv10 ಕನ್ನಡ

ಮೈಸೂರಿನ ದಟ್ಟಗಳ್ಳಿ ಗ್ರಾಮದ ಸರ್ವೆ ನಂ.27/1,27/2,27/4,29/1a,32,38/1,38/2 ಸೇರಿದಂತೆ ವಿವಿದ ಸರ್ವೆ ನಂಬರ್ ಗಳ ಸುಮಾರು 27.34 ಎಕ್ರೆ ಜಮೀನುಗಳ ವಿವಾದಕ್ಕೆ ಬ್ರೇಕ್ ಹಾಕಲು ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕರಾದ ಕೆ.ಹರೀಶ್ ಗೌಡ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಂಡೀಸಿದ್ದೇಗೌಡ ರವರು ಮುಂದಾಗಿದ್ದಾರೆ. ಕೋಟ್ಯಾಂತರ ಬೆಲೆ ಬಾಳುವ ಮುಡಾ ಆಸ್ತಿಯನ್ನ ಕಬಳಿಸಲು ಸಂಚು ರೂಪಿಸಿರುವ ಆರೋಪಕ್ಕೆ ಸಂಭಂಧಿಸಿದಂತೆ ಪ್ರಾಧಿಕಾರದ ಬಳಿ ಇರುವ ಎಲ್ಲಾ ದಾಖಲೆಗಳನ್ನ ಧೃಢೀಕರಿಸಿ ನೀಡುವಂತೆ ಮುಡಾ ಆಯುಕ್ತರಿಗೆ ಶಾಸಕಧ್ವಯರು ಪತ್ರ ಬರೆದಿದ್ದಾರೆ.

ಸದರಿ ಜಮೀನುಗಳ ಬಗ್ಗೆ 21-3-2023 ರಲ್ಲಿ ನಡೆದ ಪ್ರಾಧಿಕಾರದ ಸಭೆಯಲ್ಲಿ ನಿರ್ಣಯ ಕೈಗೊಂಡಿದ್ದು ಇದರ ಸದುಪಯೋಗಪಡಿಸಿಕೊಂಡ ಮೂರನೇ ವ್ಯಕ್ತಿಯೊಬ್ಬರು ಉಚ್ಛನ್ಯಾಯಾಲಯದಲ್ಲಿ ಆದೇಶ ಪಡೆದುಕೊಂಡು ಕಬಳಿಸಲು ಉದ್ದೇಶಿಸಿರುವ ಆರೋಪ ಕೇಳಿ ಬಂದ ಹಿನ್ನಲೆ ಜಿಲ್ಲಾಧಿಕಾರಿಗಳು ಮುಡಾ ಆಯುಕ್ತರಿಗೆ ಪತ್ರ ಬರೆದು ದಾಖಲೆಗಳ ಸಮೇತ ಹಾಜರಾಗುವಂತೆ ಸೂಚಿಸಿದ್ದರು.ಈ ಬೆಳವಣಿಗೆಯ ಹಿನ್ನಲೆಯಲ್ಲೇ ಶಾಸಕರಿಬ್ಬರು ಒಂದೇ ಪತ್ರದಲ್ಲಿ ಸಹಿ ಹಾಕಿ ಮುಡಾ ಆಯುಕ್ತರಿಗೆ ಪತ್ರ ಬರೆದು ಸಂಪೂರ್ಣ ದಾಖಲೆಗಳನ್ನ ಒದಗಿಸುವಂತೆ ಮನವಿ ಮಾಡಿದ್ದಾರೆ.

ಸದರಿ ವಿಷಯದ ಬಗ್ಗೆ ಯಾವ ಶಾಸಕರೂ ಇದುವರೆಗರ ಚಕಾರ ಎತ್ತಿಲ್ಲ.ಮೌನ ಮುರಿದ ಶಾಸಕ ಕೆ.ಹರೀಶ್ ಗೌಡ ಹಾಗೂ ರಮೇಶ್ ಬಂಡಿ ಸಿದ್ದೇಗೌಡ ಜಿಲ್ಲಾಧಿಕಾರಿಗಳ ಪರ ಬ್ಯಾಟ್ ಬೀಸಿದ್ದಾರೆ.ಇನ್ನಾದರೂ ಮೈಸೂರು ಜಿಲ್ಲೆಯಿಂದ ಚುನಾಯಿತರಾದ ಉಳಿದ ಶಾಸಕರು ಎಚ್ಚೆತ್ತುಕೊಳ್ಳುತ್ತಾರೆಯೇ…?

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *