ದಟ್ಟಗಳ್ಳಿ ವಿವಾದಿತ ಜಮೀನಿನ ರಕ್ಷಣೆಗೆ ಮುಂದಾದ ಶಾಸಕದ್ವಯರು…ದೃಢೀಕರಿಸಿದ ದಾಖಲೆಗಳನ್ನ ನೀಡುವಂತೆ ಮುಡಾ ಆಯುಕ್ತರಿಗೆ ಪತ್ರ…

ಮೈಸೂರು,ಡಿ29,Tv10 ಕನ್ನಡ

ಮೈಸೂರಿನ ದಟ್ಟಗಳ್ಳಿ ಗ್ರಾಮದ ಸರ್ವೆ ನಂ.27/1,27/2,27/4,29/1a,32,38/1,38/2 ಸೇರಿದಂತೆ ವಿವಿದ ಸರ್ವೆ ನಂಬರ್ ಗಳ ಸುಮಾರು 27.34 ಎಕ್ರೆ ಜಮೀನುಗಳ ವಿವಾದಕ್ಕೆ ಬ್ರೇಕ್ ಹಾಕಲು ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕರಾದ ಕೆ.ಹರೀಶ್ ಗೌಡ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಂಡೀಸಿದ್ದೇಗೌಡ ರವರು ಮುಂದಾಗಿದ್ದಾರೆ. ಕೋಟ್ಯಾಂತರ ಬೆಲೆ ಬಾಳುವ ಮುಡಾ ಆಸ್ತಿಯನ್ನ ಕಬಳಿಸಲು ಸಂಚು ರೂಪಿಸಿರುವ ಆರೋಪಕ್ಕೆ ಸಂಭಂಧಿಸಿದಂತೆ ಪ್ರಾಧಿಕಾರದ ಬಳಿ ಇರುವ ಎಲ್ಲಾ ದಾಖಲೆಗಳನ್ನ ಧೃಢೀಕರಿಸಿ ನೀಡುವಂತೆ ಮುಡಾ ಆಯುಕ್ತರಿಗೆ ಶಾಸಕಧ್ವಯರು ಪತ್ರ ಬರೆದಿದ್ದಾರೆ.

ಸದರಿ ಜಮೀನುಗಳ ಬಗ್ಗೆ 21-3-2023 ರಲ್ಲಿ ನಡೆದ ಪ್ರಾಧಿಕಾರದ ಸಭೆಯಲ್ಲಿ ನಿರ್ಣಯ ಕೈಗೊಂಡಿದ್ದು ಇದರ ಸದುಪಯೋಗಪಡಿಸಿಕೊಂಡ ಮೂರನೇ ವ್ಯಕ್ತಿಯೊಬ್ಬರು ಉಚ್ಛನ್ಯಾಯಾಲಯದಲ್ಲಿ ಆದೇಶ ಪಡೆದುಕೊಂಡು ಕಬಳಿಸಲು ಉದ್ದೇಶಿಸಿರುವ ಆರೋಪ ಕೇಳಿ ಬಂದ ಹಿನ್ನಲೆ ಜಿಲ್ಲಾಧಿಕಾರಿಗಳು ಮುಡಾ ಆಯುಕ್ತರಿಗೆ ಪತ್ರ ಬರೆದು ದಾಖಲೆಗಳ ಸಮೇತ ಹಾಜರಾಗುವಂತೆ ಸೂಚಿಸಿದ್ದರು.ಈ ಬೆಳವಣಿಗೆಯ ಹಿನ್ನಲೆಯಲ್ಲೇ ಶಾಸಕರಿಬ್ಬರು ಒಂದೇ ಪತ್ರದಲ್ಲಿ ಸಹಿ ಹಾಕಿ ಮುಡಾ ಆಯುಕ್ತರಿಗೆ ಪತ್ರ ಬರೆದು ಸಂಪೂರ್ಣ ದಾಖಲೆಗಳನ್ನ ಒದಗಿಸುವಂತೆ ಮನವಿ ಮಾಡಿದ್ದಾರೆ.

ಸದರಿ ವಿಷಯದ ಬಗ್ಗೆ ಯಾವ ಶಾಸಕರೂ ಇದುವರೆಗರ ಚಕಾರ ಎತ್ತಿಲ್ಲ.ಮೌನ ಮುರಿದ ಶಾಸಕ ಕೆ.ಹರೀಶ್ ಗೌಡ ಹಾಗೂ ರಮೇಶ್ ಬಂಡಿ ಸಿದ್ದೇಗೌಡ ಜಿಲ್ಲಾಧಿಕಾರಿಗಳ ಪರ ಬ್ಯಾಟ್ ಬೀಸಿದ್ದಾರೆ.ಇನ್ನಾದರೂ ಮೈಸೂರು ಜಿಲ್ಲೆಯಿಂದ ಚುನಾಯಿತರಾದ ಉಳಿದ ಶಾಸಕರು ಎಚ್ಚೆತ್ತುಕೊಳ್ಳುತ್ತಾರೆಯೇ…?

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *