ದಟ್ಟಗಳ್ಳಿ ವಿವಾದಿತ ಜಮೀನಿನ ರಕ್ಷಣೆಗೆ ಮುಂದಾದ ಶಾಸಕದ್ವಯರು…ದೃಢೀಕರಿಸಿದ ದಾಖಲೆಗಳನ್ನ ನೀಡುವಂತೆ ಮುಡಾ ಆಯುಕ್ತರಿಗೆ ಪತ್ರ…

ಮೈಸೂರು,ಡಿ29,Tv10 ಕನ್ನಡ

ಮೈಸೂರಿನ ದಟ್ಟಗಳ್ಳಿ ಗ್ರಾಮದ ಸರ್ವೆ ನಂ.27/1,27/2,27/4,29/1a,32,38/1,38/2 ಸೇರಿದಂತೆ ವಿವಿದ ಸರ್ವೆ ನಂಬರ್ ಗಳ ಸುಮಾರು 27.34 ಎಕ್ರೆ ಜಮೀನುಗಳ ವಿವಾದಕ್ಕೆ ಬ್ರೇಕ್ ಹಾಕಲು ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕರಾದ ಕೆ.ಹರೀಶ್ ಗೌಡ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಂಡೀಸಿದ್ದೇಗೌಡ ರವರು ಮುಂದಾಗಿದ್ದಾರೆ. ಕೋಟ್ಯಾಂತರ ಬೆಲೆ ಬಾಳುವ ಮುಡಾ ಆಸ್ತಿಯನ್ನ ಕಬಳಿಸಲು ಸಂಚು ರೂಪಿಸಿರುವ ಆರೋಪಕ್ಕೆ ಸಂಭಂಧಿಸಿದಂತೆ ಪ್ರಾಧಿಕಾರದ ಬಳಿ ಇರುವ ಎಲ್ಲಾ ದಾಖಲೆಗಳನ್ನ ಧೃಢೀಕರಿಸಿ ನೀಡುವಂತೆ ಮುಡಾ ಆಯುಕ್ತರಿಗೆ ಶಾಸಕಧ್ವಯರು ಪತ್ರ ಬರೆದಿದ್ದಾರೆ.

ಸದರಿ ಜಮೀನುಗಳ ಬಗ್ಗೆ 21-3-2023 ರಲ್ಲಿ ನಡೆದ ಪ್ರಾಧಿಕಾರದ ಸಭೆಯಲ್ಲಿ ನಿರ್ಣಯ ಕೈಗೊಂಡಿದ್ದು ಇದರ ಸದುಪಯೋಗಪಡಿಸಿಕೊಂಡ ಮೂರನೇ ವ್ಯಕ್ತಿಯೊಬ್ಬರು ಉಚ್ಛನ್ಯಾಯಾಲಯದಲ್ಲಿ ಆದೇಶ ಪಡೆದುಕೊಂಡು ಕಬಳಿಸಲು ಉದ್ದೇಶಿಸಿರುವ ಆರೋಪ ಕೇಳಿ ಬಂದ ಹಿನ್ನಲೆ ಜಿಲ್ಲಾಧಿಕಾರಿಗಳು ಮುಡಾ ಆಯುಕ್ತರಿಗೆ ಪತ್ರ ಬರೆದು ದಾಖಲೆಗಳ ಸಮೇತ ಹಾಜರಾಗುವಂತೆ ಸೂಚಿಸಿದ್ದರು.ಈ ಬೆಳವಣಿಗೆಯ ಹಿನ್ನಲೆಯಲ್ಲೇ ಶಾಸಕರಿಬ್ಬರು ಒಂದೇ ಪತ್ರದಲ್ಲಿ ಸಹಿ ಹಾಕಿ ಮುಡಾ ಆಯುಕ್ತರಿಗೆ ಪತ್ರ ಬರೆದು ಸಂಪೂರ್ಣ ದಾಖಲೆಗಳನ್ನ ಒದಗಿಸುವಂತೆ ಮನವಿ ಮಾಡಿದ್ದಾರೆ.

ಸದರಿ ವಿಷಯದ ಬಗ್ಗೆ ಯಾವ ಶಾಸಕರೂ ಇದುವರೆಗರ ಚಕಾರ ಎತ್ತಿಲ್ಲ.ಮೌನ ಮುರಿದ ಶಾಸಕ ಕೆ.ಹರೀಶ್ ಗೌಡ ಹಾಗೂ ರಮೇಶ್ ಬಂಡಿ ಸಿದ್ದೇಗೌಡ ಜಿಲ್ಲಾಧಿಕಾರಿಗಳ ಪರ ಬ್ಯಾಟ್ ಬೀಸಿದ್ದಾರೆ.ಇನ್ನಾದರೂ ಮೈಸೂರು ಜಿಲ್ಲೆಯಿಂದ ಚುನಾಯಿತರಾದ ಉಳಿದ ಶಾಸಕರು ಎಚ್ಚೆತ್ತುಕೊಳ್ಳುತ್ತಾರೆಯೇ…?

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *