ದಟ್ಟಗಳ್ಳಿ ವಿವಾದಿತ ಜಮೀನಿನ ರಕ್ಷಣೆಗೆ ಮುಂದಾದ ಶಾಸಕದ್ವಯರು…ದೃಢೀಕರಿಸಿದ ದಾಖಲೆಗಳನ್ನ ನೀಡುವಂತೆ ಮುಡಾ ಆಯುಕ್ತರಿಗೆ ಪತ್ರ…

ಮೈಸೂರು,ಡಿ29,Tv10 ಕನ್ನಡ

ಮೈಸೂರಿನ ದಟ್ಟಗಳ್ಳಿ ಗ್ರಾಮದ ಸರ್ವೆ ನಂ.27/1,27/2,27/4,29/1a,32,38/1,38/2 ಸೇರಿದಂತೆ ವಿವಿದ ಸರ್ವೆ ನಂಬರ್ ಗಳ ಸುಮಾರು 27.34 ಎಕ್ರೆ ಜಮೀನುಗಳ ವಿವಾದಕ್ಕೆ ಬ್ರೇಕ್ ಹಾಕಲು ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕರಾದ ಕೆ.ಹರೀಶ್ ಗೌಡ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಂಡೀಸಿದ್ದೇಗೌಡ ರವರು ಮುಂದಾಗಿದ್ದಾರೆ. ಕೋಟ್ಯಾಂತರ ಬೆಲೆ ಬಾಳುವ ಮುಡಾ ಆಸ್ತಿಯನ್ನ ಕಬಳಿಸಲು ಸಂಚು ರೂಪಿಸಿರುವ ಆರೋಪಕ್ಕೆ ಸಂಭಂಧಿಸಿದಂತೆ ಪ್ರಾಧಿಕಾರದ ಬಳಿ ಇರುವ ಎಲ್ಲಾ ದಾಖಲೆಗಳನ್ನ ಧೃಢೀಕರಿಸಿ ನೀಡುವಂತೆ ಮುಡಾ ಆಯುಕ್ತರಿಗೆ ಶಾಸಕಧ್ವಯರು ಪತ್ರ ಬರೆದಿದ್ದಾರೆ.

ಸದರಿ ಜಮೀನುಗಳ ಬಗ್ಗೆ 21-3-2023 ರಲ್ಲಿ ನಡೆದ ಪ್ರಾಧಿಕಾರದ ಸಭೆಯಲ್ಲಿ ನಿರ್ಣಯ ಕೈಗೊಂಡಿದ್ದು ಇದರ ಸದುಪಯೋಗಪಡಿಸಿಕೊಂಡ ಮೂರನೇ ವ್ಯಕ್ತಿಯೊಬ್ಬರು ಉಚ್ಛನ್ಯಾಯಾಲಯದಲ್ಲಿ ಆದೇಶ ಪಡೆದುಕೊಂಡು ಕಬಳಿಸಲು ಉದ್ದೇಶಿಸಿರುವ ಆರೋಪ ಕೇಳಿ ಬಂದ ಹಿನ್ನಲೆ ಜಿಲ್ಲಾಧಿಕಾರಿಗಳು ಮುಡಾ ಆಯುಕ್ತರಿಗೆ ಪತ್ರ ಬರೆದು ದಾಖಲೆಗಳ ಸಮೇತ ಹಾಜರಾಗುವಂತೆ ಸೂಚಿಸಿದ್ದರು.ಈ ಬೆಳವಣಿಗೆಯ ಹಿನ್ನಲೆಯಲ್ಲೇ ಶಾಸಕರಿಬ್ಬರು ಒಂದೇ ಪತ್ರದಲ್ಲಿ ಸಹಿ ಹಾಕಿ ಮುಡಾ ಆಯುಕ್ತರಿಗೆ ಪತ್ರ ಬರೆದು ಸಂಪೂರ್ಣ ದಾಖಲೆಗಳನ್ನ ಒದಗಿಸುವಂತೆ ಮನವಿ ಮಾಡಿದ್ದಾರೆ.

ಸದರಿ ವಿಷಯದ ಬಗ್ಗೆ ಯಾವ ಶಾಸಕರೂ ಇದುವರೆಗರ ಚಕಾರ ಎತ್ತಿಲ್ಲ.ಮೌನ ಮುರಿದ ಶಾಸಕ ಕೆ.ಹರೀಶ್ ಗೌಡ ಹಾಗೂ ರಮೇಶ್ ಬಂಡಿ ಸಿದ್ದೇಗೌಡ ಜಿಲ್ಲಾಧಿಕಾರಿಗಳ ಪರ ಬ್ಯಾಟ್ ಬೀಸಿದ್ದಾರೆ.ಇನ್ನಾದರೂ ಮೈಸೂರು ಜಿಲ್ಲೆಯಿಂದ ಚುನಾಯಿತರಾದ ಉಳಿದ ಶಾಸಕರು ಎಚ್ಚೆತ್ತುಕೊಳ್ಳುತ್ತಾರೆಯೇ…?

Spread the love

Related post

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…
ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…
BTL ವಿಧ್ಯಾಸಂಸ್ಥೆಗೆ ದ್ರೋಹ…30 ಲಕ್ಷ ವಂಚನೆ…ಕಾರ್ಯದರ್ಶಿ ವಿರುದ್ದ FIR…

BTL ವಿಧ್ಯಾಸಂಸ್ಥೆಗೆ ದ್ರೋಹ…30 ಲಕ್ಷ ವಂಚನೆ…ಕಾರ್ಯದರ್ಶಿ ವಿರುದ್ದ FIR…

ಮೈಸೂರು,ಜು2,Tv10 ಕನ್ನಡ ವಿದ್ಯಾಸಂಸ್ಥೆಗೆ 30 ಲಕ್ಷ ವಂಚಿಸಿ ದ್ರೋಹಬಗೆದ ಕಾರ್ಯದರ್ಶಿ ವಿರುದ್ದ ಎನ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೈಸೂರಿನ ಕೆಸರೆ ಬಡಾವಣೆಯಲ್ಲಿರುವ ಬಿಟಿಎಲ್ ವಿದ್ಯಾವಾಹಿನಿ ಸ್ಕೂಲ್ ಮತ್ತು ಕಾಂಪೋಸಿಟ್ ಪಿಯು…

Leave a Reply

Your email address will not be published. Required fields are marked *