ದ್ವಿಚಕ್ರ ವಾಹನಗಳಿಗೆ ಆಶ್ರಯವಾದ ಬಸ್ ತಂಗುದಾಣ…

ಮೈಸೂರು,ಡಿ29,Tv10 ಕನ್ನಡ

ಪ್ರಯಾಣಿಕರಿಗೆ ಆಶ್ರಯವಾಗಬೇಕಿದ್ದ ಬಸ್ ತಂಗುದಾಣ ದ್ವಿಚಕ್ರ ವಾಹನಗಳಿಗೆ ಆಶ್ರಯ ನೀಡಿದೆ.ಜೆ.ಸಿ.ಕಾಲೇಜು ರಸ್ತೆಯಲ್ಲಿರುವ ಮೈಸೂರು ಮಹಾನಗರ ಪಾಲಿಕೆ ವತಿಯಿಂದ ನಿರ್ಮಿಸಲಾದ ಬಸ್ ತಂಗುದಾಣದ ಸ್ಥಿತಿ ಇದು.ಬಸ್ ಗಾಗಿ ಕಾದು ನಿಲ್ಲುವ ಪ್ರಯಾಣಿಕರಿಗೆ ಉಪಯೋಗವಾಗಲೆಂದು ಮೈಸೂರು ಮಹಾನಗರ ಪಾಲಿಕೆ ಜೆ.ಸಿ.ರಸ್ತೆಯಲ್ಲಿ ಬಸ್ ತಂಗುದಾಣ ನಿರ್ಮಿಸಿದೆ.ಆದರೆ ಈ ತಂಗುದಾಣವನ್ನ ಉಪಯೋಗಿಸಲು ಪ್ರಯಾಣಿಕರಿಗೆ ಸಾಧ್ಯವೇ ಆಗುತ್ತಿಲ್ಲ.ಕಾರಣ ಸಮೀಪದ ಕಾಲೇಜಿನ ವಿಧ್ಯಾರ್ಥಿಗಳು ಟೂ ವ್ಹೀಲರ್ ಪಾರ್ಕಿಂಗ್ ಗೆ ಬಳಸಿಕೊಂಡಿದ್ದಾರೆ.ಸಾವಿರಾರು ರೂಪಾಯಿ ಖರ್ಚು ಮಾಡಿ ನಿರ್ಮಿಸಿದ ಬಸ್ ತಂಗುದಾಣ ಅರ್ಥಪೂರ್ಣವಾಗಿ ಬಳಕೆಯಾಗುತ್ತಿಲ್ಲ. ಹೆಲ್ಮೆಟ್ ಧರಿಸದ ವಿಧ್ಯಾರ್ಥಿಗಳನ್ನ ಕ್ಯಾಂಪಸ್ ಒಳಗೆ ಪ್ರವೇಶ ಇಲ್ಲವಂತೆ.ಹೀಗಾಗಿ ಹೆಲ್ಮೆಟ್ ಧರಿಸದೆ ಬರುವ ದ್ವಿಚಕ್ರ ವಾಹನ ವಿಧ್ಯಾರ್ಥಿಗಳು ಈ ಬಸ್ ತಂಗುದಾಣದಲ್ಲಿ ಪಾರ್ಕ್ ಮಾಡಿ ಕಾಲೇಜಿಗೆ ಪ್ರವೇಶಿಸುತ್ತಿದ್ದಾರೆ.ಪ್ರಯಾಣಿಕರಿಗೆ ಅನುಕೂಲವಾಗಬೇಕಿದ್ದ ಬಸ್ ತಂಗುದಾಣ ವಿಧ್ಯಾರ್ಥಿಗಳ ದ್ವಿಚಕ್ರ ವಾಹನಗಳಿಗೆ ಆಶ್ರಯ ನೀಡಿದೆ.ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಇತ್ತ ಗಮನಹರಿಸಿ ಬಸ್ ತಂಗುದಾಣದ ಬಳಕೆಯನ್ನ ಸರಿಪಡಿಸುವರೇ…?

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *