ದ್ವಿಚಕ್ರ ವಾಹನಗಳಿಗೆ ಆಶ್ರಯವಾದ ಬಸ್ ತಂಗುದಾಣ…

ಮೈಸೂರು,ಡಿ29,Tv10 ಕನ್ನಡ

ಪ್ರಯಾಣಿಕರಿಗೆ ಆಶ್ರಯವಾಗಬೇಕಿದ್ದ ಬಸ್ ತಂಗುದಾಣ ದ್ವಿಚಕ್ರ ವಾಹನಗಳಿಗೆ ಆಶ್ರಯ ನೀಡಿದೆ.ಜೆ.ಸಿ.ಕಾಲೇಜು ರಸ್ತೆಯಲ್ಲಿರುವ ಮೈಸೂರು ಮಹಾನಗರ ಪಾಲಿಕೆ ವತಿಯಿಂದ ನಿರ್ಮಿಸಲಾದ ಬಸ್ ತಂಗುದಾಣದ ಸ್ಥಿತಿ ಇದು.ಬಸ್ ಗಾಗಿ ಕಾದು ನಿಲ್ಲುವ ಪ್ರಯಾಣಿಕರಿಗೆ ಉಪಯೋಗವಾಗಲೆಂದು ಮೈಸೂರು ಮಹಾನಗರ ಪಾಲಿಕೆ ಜೆ.ಸಿ.ರಸ್ತೆಯಲ್ಲಿ ಬಸ್ ತಂಗುದಾಣ ನಿರ್ಮಿಸಿದೆ.ಆದರೆ ಈ ತಂಗುದಾಣವನ್ನ ಉಪಯೋಗಿಸಲು ಪ್ರಯಾಣಿಕರಿಗೆ ಸಾಧ್ಯವೇ ಆಗುತ್ತಿಲ್ಲ.ಕಾರಣ ಸಮೀಪದ ಕಾಲೇಜಿನ ವಿಧ್ಯಾರ್ಥಿಗಳು ಟೂ ವ್ಹೀಲರ್ ಪಾರ್ಕಿಂಗ್ ಗೆ ಬಳಸಿಕೊಂಡಿದ್ದಾರೆ.ಸಾವಿರಾರು ರೂಪಾಯಿ ಖರ್ಚು ಮಾಡಿ ನಿರ್ಮಿಸಿದ ಬಸ್ ತಂಗುದಾಣ ಅರ್ಥಪೂರ್ಣವಾಗಿ ಬಳಕೆಯಾಗುತ್ತಿಲ್ಲ. ಹೆಲ್ಮೆಟ್ ಧರಿಸದ ವಿಧ್ಯಾರ್ಥಿಗಳನ್ನ ಕ್ಯಾಂಪಸ್ ಒಳಗೆ ಪ್ರವೇಶ ಇಲ್ಲವಂತೆ.ಹೀಗಾಗಿ ಹೆಲ್ಮೆಟ್ ಧರಿಸದೆ ಬರುವ ದ್ವಿಚಕ್ರ ವಾಹನ ವಿಧ್ಯಾರ್ಥಿಗಳು ಈ ಬಸ್ ತಂಗುದಾಣದಲ್ಲಿ ಪಾರ್ಕ್ ಮಾಡಿ ಕಾಲೇಜಿಗೆ ಪ್ರವೇಶಿಸುತ್ತಿದ್ದಾರೆ.ಪ್ರಯಾಣಿಕರಿಗೆ ಅನುಕೂಲವಾಗಬೇಕಿದ್ದ ಬಸ್ ತಂಗುದಾಣ ವಿಧ್ಯಾರ್ಥಿಗಳ ದ್ವಿಚಕ್ರ ವಾಹನಗಳಿಗೆ ಆಶ್ರಯ ನೀಡಿದೆ.ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಇತ್ತ ಗಮನಹರಿಸಿ ಬಸ್ ತಂಗುದಾಣದ ಬಳಕೆಯನ್ನ ಸರಿಪಡಿಸುವರೇ…?

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *