ಮತ ಮನುಜ ಮತವಾಗಲಿ ಪಥ ವಿಶ್ವಪಥವಾಗಲಿ – ರಾಮಪ್ರಸಾದ್.


ಪ್ರಸ್ತುತ ಸಮಾಜದಲ್ಲಿ ಇಂದು ಮತ ಮತ್ತು ಪಥದ ಅರಿವು ಹೆಚ್ಚು ಅವಶ್ಯಕ . ಕುವೆಂಪು ಅವರು ಮಾನವ ಕುಲಕ್ಕೆ ನೀಡಿದ ಆದರ್ಶಗಳು ಸರ್ವಕಾಲಿಕ. ಕುವೆಂಪುರವರ ವಿಶ್ವಮಾನವ ಸಂದೇಶವು ಇಂದು ಎಲ್ಲ ಮಾನವರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಶ್ರೀ ರಾಮ್ ಪ್ರಸಾದ್ ರವರು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ವಿಶ್ವಮಾನವ ದಿನಾಚರಣೆಯ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲರಾದ ಲಯನ್ ಸಿ.ಆರ್ ದಿನೇಶ್ ರವರು ಯಾವುದೇ ವ್ಯಕ್ತಿ ಜಾತಿಯಿಂದ ಮುಖ್ಯನಾಗಬಾರದು ನೈತಿಕ ವ್ಯಕ್ತಿತ್ವದಿಂದ ಮುಖ್ಯನಾಗಬೇಕು. ಬುದ್ಧ ಬಸವಣ್ಣನವರ ಹಾಗೆ ಸಮಾಜದಲ್ಲಿ ವ್ಯಕ್ತಿ ಸ್ವತಂತ್ರವಾಗಿ ವೈಚಾರಿಕ ದೃಷ್ಟಿಕೋನವನ್ನು ಬೆಳೆಸಿಕೊಳ್ಳಬೇಕೆಂದು ಹೇಳಿದರು. ಮಹಾರಾತ್ರಿ ನಾಟಕದಲ್ಲಿ ಬುದ್ಧರಾಗುವ ಹಾದಿಯತ್ತ ಹೊರಟ ಸಿದ್ದಾರ್ಥನಿಗೆ ಕಾಣಿಸಿದ ಚೆನ್ನ ನ ನಿದ್ರೆ ಮತ್ತು ಮಹರಾತ್ರಿಯ ದ್ವನಿಯನ್ನು ಕುವೆಂಪುರವರ ದರ್ಶನದೊಂದಿಗೆ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ವರ್ಣಿಸಿದರು .

ವಿಶೇಷ ಉಪನ್ಯಾಸ ನೀಡಿದ ಕನ್ನಡ ಉಪನ್ಯಾಸಕರಾದ ಡಾ. ಮಾಲತಿ ಕೆ ರವರು ವಿಶ್ವಮಾನವ ಸಂದೇಶವನ್ನು ಸಂಪೂರ್ಣವಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಆಂಗ್ಲ ಭಾಷೆಯ ಉಪನ್ಯಾಸಕರಾದ ಶ್ರೀರಂಗಸ್ವಾಮಿ ರವರು ರವಿಂದ್ರನಾಥ್ ಠಾಗೂರ್ ರವರ ಗೀತಾಂಜಲಿಯ ಪ್ರಭಾವ ಕುವೆಂಪುರವರ ಮೇಲೆ ಪ್ರಭಾವ ಬೀರುವ ಮೂಲಕ ಅವರ ಅಪ್ರತಿಮ ಸಾಧನೆಗೆ ಕಾರಣವಾಯಿತು ಎಂದು ಹೇಳಿದರು . ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಅಶ್ವಥ್ ನಾರಾಯಣಗೌಡ,ಜುಡಿತ್ ಲಿಂಗನಸ್ವಾಮಿ ,ಸ್ವಾಮಿ ಗೌಡ ನಾಗರಾಜು, ಮೀನಾ ,ಡಾ ಟಿ ಕೆ ರವಿ, ಸುಮಿತ್ರ ,ಹರೀಶ್, ಮಲ್ಲಿಕಾರ್ಜುನ್ ಮುಂತಾದವರು ಉಪಸ್ಥಿತರಿದ್ದರು ವಿದ್ಯಾರ್ಥಿಗಳು ಐದು ಗೀತ ಗಾಯನವನ್ನು ಹಾಡಿದರು . ಮಾನಸ ಸ್ವಾಗತ, ಸಫಾರೋಶನ್ ವಂದನೆ ರಮ್ಯ ಸಿ ಕಾರ್ಯಕ್ರಮವನ್ನು ನಿರೂಪಿಸಿದರು .

Spread the love

Related post

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…
ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…
BTL ವಿಧ್ಯಾಸಂಸ್ಥೆಗೆ ದ್ರೋಹ…30 ಲಕ್ಷ ವಂಚನೆ…ಕಾರ್ಯದರ್ಶಿ ವಿರುದ್ದ FIR…

BTL ವಿಧ್ಯಾಸಂಸ್ಥೆಗೆ ದ್ರೋಹ…30 ಲಕ್ಷ ವಂಚನೆ…ಕಾರ್ಯದರ್ಶಿ ವಿರುದ್ದ FIR…

ಮೈಸೂರು,ಜು2,Tv10 ಕನ್ನಡ ವಿದ್ಯಾಸಂಸ್ಥೆಗೆ 30 ಲಕ್ಷ ವಂಚಿಸಿ ದ್ರೋಹಬಗೆದ ಕಾರ್ಯದರ್ಶಿ ವಿರುದ್ದ ಎನ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೈಸೂರಿನ ಕೆಸರೆ ಬಡಾವಣೆಯಲ್ಲಿರುವ ಬಿಟಿಎಲ್ ವಿದ್ಯಾವಾಹಿನಿ ಸ್ಕೂಲ್ ಮತ್ತು ಕಾಂಪೋಸಿಟ್ ಪಿಯು…

Leave a Reply

Your email address will not be published. Required fields are marked *