ಹೊಸವರ್ಷಾಚರಣೆ…ಟೂರಿಸ್ಟ್ ಗಳ ಜೊತೆ ಸೌಜನ್ಯದಿಂದ ವರ್ತಿಸಿ…ಆಟೋಚಾಲಕರಿಗೆ ಖಾಕಿ ಎಚ್ಚರಿಕೆ…

ಮೈಸೂರು,ಡಿ29,Tv10 ಕನ್ನಡ

ಹೊಸವರ್ಷಾಚರಣೆ ಹಿನ್ನಲೆ ಆಟೋ ಚಾಲಕರಿಗೆ ಇಂದು ಮೈಸೂರು ನಗರ ಪೊಲೀಸರು ಪ್ರವಾಸಿಗರ ಜೊತೆ ಸೌಜನ್ಯದಿಂದ ವರ್ತಿಸುವಂತೆ ಆಟೋ ಚಾಲಕರಿಗೆ ಕಿವಿಮಾತು

ಹೇಳಿದರು.ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಮೈಸೂರಿನ ಪುರಭವನದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ಪ್ರವಾಸಿ ಕೇಂದ್ರವಾದ ಸಾಂಸ್ಕೃತಿಕ ನಗರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆ.ಈ ವೇಳೆ ಯಾವುದೇ ರೀತಿ ತೊಂದರೆ ಆಗದಂತೆ ಎಚ್ಚರಿಕೆಯಿಂದ ವರ್ತಿಸಬೇಕೆಂದು ದೇವರಾಜ ಉಪವಿಭಾಗದ ಎಸಿಪಿ ಶಾಂತಮಲ್ಲಪ್ಪ ಸಲಹೆ ನೀಡಿದರು.ಅವಸರದಲ್ಲಿ ಪ್ರಯಾಣಿಕರು ಪದಾರ್ಥಗಳನ್ನ ಆಟೋದಲ್ಲಿ ಮರೆತರೆ ಪೊಲೀಸ್ ಠಾಣೆಗೆ ಒಪ್ಪಿಸುವಂತೆ ಮನವಿ ಮಾಡಿದರು.ಪ್ರಾಮಾಣಿಕತೆ ಮರೆವ ಚಾಲಕರಿಗೆ ಬಹುಮಾನ ನೀಡಲಾಗುವುದೆಂದು ತಿಳಿಸಿದರು.ಆಟೋ ಚಾಲನೆ ಮಾಡುವಾಗ ಸಮವಸ್ತ್ರ ಧರಿಸುವುದು,ಮೀಟರ್ ಬಳಸುವುದು ಸೇರಿದಂತೆ ಸಂಚಾರಿ ನಿಯಮಗಳನ್ನ ಪಾಲಿಸುವಂತೆ ಕರೆ ನೀಡಿದರು.ಕಾರ್ಯಕ್ರಮದಲ್ಲಿ ಲಷ್ಕರ್ ಠಾಣೆ ಇನ್ಸ್ಪೆಕ್ಟರ್ ಪ್ರಸಾದ್,ದೇವರಾಜ ಠಾಣೆ ಇನ್ಸ್ಪೆಕ್ಟರ್ ಶಿವಕುಮಾರ್,ಆಲನಹಳ್ಳಿ ಠಾಣೆ ಇನ್ಸ್ಪೆಕ್ಟರ್ ಶ್ರೀಕಾಂತ್ ಹಾಗೂ ಪಿಎಸ್ಸೈ ಗಳಾದ ಆನಂದ್,ಜೈಕೀರ್ತಿ,ಪ್ರಭು ಭಾಗವಹಿಸಿ ಆಟೋ ಚಾಲಕರಿಗೆ ಸಲಹೆ ನೀಡಿದರು.

ನಗರ ಪೊಲೀಸ್ ಆಯುಕ್ತ ಡಾ
ಬಿ.ರಮೇಶ್,ಡಿಸಿಪಿ ಮುತ್ತುರಾಜ್ ಹಾಗೂ ಜಾಹ್ನವಿ ರವತ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು…

Spread the love

Related post

ರಸ್ತೆ ಅಗಲೀಕರಣಕ್ಕೆ ಮೀಸಲಾದ ಜಾಗದಲ್ಲಿ ಅಕ್ರಮ ಕಟ್ಟಡ…ಸೂಕ್ತ ಕ್ರಮ ಕೈಗೊಳ್ಳುವಂತೆ ಮುಡಾದಿಂದ ಪಾಲಿಕೆಗೆ ಪತ್ರ…

ರಸ್ತೆ ಅಗಲೀಕರಣಕ್ಕೆ ಮೀಸಲಾದ ಜಾಗದಲ್ಲಿ ಅಕ್ರಮ ಕಟ್ಟಡ…ಸೂಕ್ತ ಕ್ರಮ ಕೈಗೊಳ್ಳುವಂತೆ ಮುಡಾದಿಂದ…

ಮೈಸೂರು,ಮೇ21,Tv10 ಕನ್ನಡ ಸಿಎ ನಿವೇಶನದ ರಸ್ತೆ ಅಗಲೀಕರಣಕ್ಕಾಗಿ ಮೀಸಲಿರಿಸಿದ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣವಾಗುತ್ತಿರುವುದನ್ನ ಮುಡಾ ವಲಯ ಅಧಿಕಾರಿಗಳು ಪತ್ತೆ ಹಚ್ಚಿದ್ದು ತುರ್ತಾಗಿ ಪರಿಶೀಲನೆ ನಡೆಸಿ ಅಗತ್ಯ ಕ್ರಮ…
ಬಲಮುರಿ ಎಡಮುರಿ ಫಾಲ್ಸ್ ಗೆ ಎಸ್ಪಿ ಮಲ್ಲಿಕಾರ್ಜುನ ಬಾಲದಿಂಡಿ ಭೇಟಿ…ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚನೆ…

ಬಲಮುರಿ ಎಡಮುರಿ ಫಾಲ್ಸ್ ಗೆ ಎಸ್ಪಿ ಮಲ್ಲಿಕಾರ್ಜುನ ಬಾಲದಿಂಡಿ ಭೇಟಿ…ಮುನ್ನೆಚ್ಚರಿಕೆ ಕ್ರಮ…

ಕೆ.ಆರ್.ಎಸ್,ಮೇ20,Tv10 ಕನ್ನಡ ಬಲಮುರಿ ಹಾಗೂ ಎಡಮುರಿ ಫಾಲ್ಸ್ ಗಳಿಗೆ ಮಂಡ್ಯ ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ರವರು ಭೇಟಿ ನೀಡಿ ಸುರಕ್ಷತಾ ಕ್ರಮದ ಬಗ್ಗೆ ಕೆಲವು ಸೂಚನೆಗಳನ್ನ ನೀಡಿದರು.ಶಾಲಾ…
ಅಕ್ರಮ ಗಂಧದ ಮರದ ತುಂಡುಗಳ ಸಂಗ್ರಹ…ಓರ್ವನ ಬಂಧನ…ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಅಕ್ರಮ ಗಂಧದ ಮರದ ತುಂಡುಗಳ ಸಂಗ್ರಹ…ಓರ್ವನ ಬಂಧನ…ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರ…

ಹುಣಸೂರು,ಮೇ20,Tv10 ಕನ್ನಡ ಅಕ್ರಮವಾಗಿ ಗಂಧದ ಮರದ ತುಂಡುಗಳನ್ನ ಸಂಗ್ರಹಿಸಿದ್ದ ಓರ್ವ ಆರೋಪಿಯನ್ನ ಬಂಧಿಸುವಲ್ಲಿ ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಠಾಣಾ ವ್ಯಾಪ್ತಿಯ ಮಂಗಳೂರು ಮಾಳ ಹಾಡಿಯ ನಿವಾಸಿ ಶಿವನಂಜ…

Leave a Reply

Your email address will not be published. Required fields are marked *