ಸೇವೆ ಸಲ್ಲಿಸುತ್ತಿದ್ದ ವೃದ್ದೆಯ ಚಿನ್ನದ ಸರ ಲಪಟಾಯಿಸಿದ ಹೋಂ ನರ್ಸ್…48 ಗಂಟೆಗಳಲ್ಲಿ ಆರೋಪಿ ಅಂದರ್…

  • Crime
  • December 30, 2023
  • No Comment
  • 495

ಮೈಸೂರು,ಡಿ30,Tv10 ಕನ್ನಡ

ಹಾಸಿಗೆ ಹಿಡಿದ ವೃದ್ದೆಗೆ ಸೇವೆ ಸಲ್ಲಿಸುತ್ತಿದ್ದ ಹೋಂ ನರ್ಸ್ 60 ಗ್ರಾಂ ತೂಕದ ಚಿನ್ನದ ಸರ ಲಪಟಾಯಿಸಿ ಪರಾರಿಯಾದ ಕೇವಲ 48 ಗಂಟೆಗಳಲ್ಲಿ ಸಿಕ್ಕಿಬಿದ್ದ ಘಟನೆ ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ನಿವೇದಿತಾ ನಗರದಲ್ಲಿ ಬೆಳಕಿಗೆ ಬಂದಿದೆ.ಆಶಾ(31) ಬಂಧಿತ ಆರೋಪಿ.ನಿವೇದಿತಾ ನಗರದ ನರಸಿಂಹಶೆಟ್ಟಿ ರವರ ಪತ್ನಿ ಸಾವಿತ್ರಿ(70) ಹಾಸಿಗೆ ಹಿಡಿದಿರುವ ವೃದ್ದೆ.ಇವರ ಪಾಲನೆಗಾಗಿ ಬೋಗಾದಿ ನಿವಾಸಿ ಆಶಾರನ್ನ ಹೋಂ ನರ್ಸ್ ಆಗಿ ಏಜೆನ್ಸ್ ಮೂಲಕ ನೇಮಕ ಮಾಡಿಕೊಳ್ಳಲಾಗಿತ್ತು.ಸುಮಾರು 15 ದಿನಗಳ ಕಾಲ ಸೇವೆ ಮಾಡಿದ ಆಶಾ ಎರಡು ದಿನಗಳ ಹಿಂದೆ ಸಾವಿತ್ರಿ ರವರು ಧರಿಸಿದ್ದ 60 ಗ್ರಾಂ ತೂಕದ ಚಿನ್ನದ ಸರ ಲಪಟಾಯಿಸಿ ಪರಾರಿಯಾಗಿದ್ದಳು.ಮೊಬೈಲ್ ಮೂಲಕ ಸಂಪರ್ಕಿಸಲು ಯತ್ನಿಸಿದಾಗ ಸ್ವಿಚ್ ಆಫ್ ಬಂದಿತ್ತು.ಕೂಡಲೇ ನರಸಿಂಹಶೆಟ್ಟಿ ರವರು ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಆಶಾ ವಿರುದ್ದ ಪ್ರಕರಣ ದಾಖಲಿಸಿದ್ದರು.ಕಾರ್ಯಾಚರಣೆ ನಡೆಸಿದ ಸರಸ್ವತಿಪುರಂ ಠಾಣೆ ಇನ್ಸ್ಪೆಕ್ಟರ್ ರವೀಂದ್ರ ಹಾಗೂ ಮಹಿಳಾ ಪಿಎಸ್ಸೈ ಲತಾ ರವರು ಕೇವಲ 48 ಗಂಟೆಗಳಲ್ಲಿ ಆರೋಪಿಯನ್ನ ಸೆರೆಹಿಡಿದು ಚಿನ್ನದ ಸರ ವಶಪಡಿಸಿಕೊಂಡಿದ್ದಾರೆ.ಈ ಸಂಭಂಧ ಸರಸ್ವವತಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *