ಸೇವೆ ಸಲ್ಲಿಸುತ್ತಿದ್ದ ವೃದ್ದೆಯ ಚಿನ್ನದ ಸರ ಲಪಟಾಯಿಸಿದ ಹೋಂ ನರ್ಸ್…48 ಗಂಟೆಗಳಲ್ಲಿ ಆರೋಪಿ ಅಂದರ್…

  • Crime
  • December 30, 2023
  • No Comment
  • 442

ಮೈಸೂರು,ಡಿ30,Tv10 ಕನ್ನಡ

ಹಾಸಿಗೆ ಹಿಡಿದ ವೃದ್ದೆಗೆ ಸೇವೆ ಸಲ್ಲಿಸುತ್ತಿದ್ದ ಹೋಂ ನರ್ಸ್ 60 ಗ್ರಾಂ ತೂಕದ ಚಿನ್ನದ ಸರ ಲಪಟಾಯಿಸಿ ಪರಾರಿಯಾದ ಕೇವಲ 48 ಗಂಟೆಗಳಲ್ಲಿ ಸಿಕ್ಕಿಬಿದ್ದ ಘಟನೆ ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ನಿವೇದಿತಾ ನಗರದಲ್ಲಿ ಬೆಳಕಿಗೆ ಬಂದಿದೆ.ಆಶಾ(31) ಬಂಧಿತ ಆರೋಪಿ.ನಿವೇದಿತಾ ನಗರದ ನರಸಿಂಹಶೆಟ್ಟಿ ರವರ ಪತ್ನಿ ಸಾವಿತ್ರಿ(70) ಹಾಸಿಗೆ ಹಿಡಿದಿರುವ ವೃದ್ದೆ.ಇವರ ಪಾಲನೆಗಾಗಿ ಬೋಗಾದಿ ನಿವಾಸಿ ಆಶಾರನ್ನ ಹೋಂ ನರ್ಸ್ ಆಗಿ ಏಜೆನ್ಸ್ ಮೂಲಕ ನೇಮಕ ಮಾಡಿಕೊಳ್ಳಲಾಗಿತ್ತು.ಸುಮಾರು 15 ದಿನಗಳ ಕಾಲ ಸೇವೆ ಮಾಡಿದ ಆಶಾ ಎರಡು ದಿನಗಳ ಹಿಂದೆ ಸಾವಿತ್ರಿ ರವರು ಧರಿಸಿದ್ದ 60 ಗ್ರಾಂ ತೂಕದ ಚಿನ್ನದ ಸರ ಲಪಟಾಯಿಸಿ ಪರಾರಿಯಾಗಿದ್ದಳು.ಮೊಬೈಲ್ ಮೂಲಕ ಸಂಪರ್ಕಿಸಲು ಯತ್ನಿಸಿದಾಗ ಸ್ವಿಚ್ ಆಫ್ ಬಂದಿತ್ತು.ಕೂಡಲೇ ನರಸಿಂಹಶೆಟ್ಟಿ ರವರು ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಆಶಾ ವಿರುದ್ದ ಪ್ರಕರಣ ದಾಖಲಿಸಿದ್ದರು.ಕಾರ್ಯಾಚರಣೆ ನಡೆಸಿದ ಸರಸ್ವತಿಪುರಂ ಠಾಣೆ ಇನ್ಸ್ಪೆಕ್ಟರ್ ರವೀಂದ್ರ ಹಾಗೂ ಮಹಿಳಾ ಪಿಎಸ್ಸೈ ಲತಾ ರವರು ಕೇವಲ 48 ಗಂಟೆಗಳಲ್ಲಿ ಆರೋಪಿಯನ್ನ ಸೆರೆಹಿಡಿದು ಚಿನ್ನದ ಸರ ವಶಪಡಿಸಿಕೊಂಡಿದ್ದಾರೆ.ಈ ಸಂಭಂಧ ಸರಸ್ವವತಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ…

Spread the love

Related post

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…
ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…
BTL ವಿಧ್ಯಾಸಂಸ್ಥೆಗೆ ದ್ರೋಹ…30 ಲಕ್ಷ ವಂಚನೆ…ಕಾರ್ಯದರ್ಶಿ ವಿರುದ್ದ FIR…

BTL ವಿಧ್ಯಾಸಂಸ್ಥೆಗೆ ದ್ರೋಹ…30 ಲಕ್ಷ ವಂಚನೆ…ಕಾರ್ಯದರ್ಶಿ ವಿರುದ್ದ FIR…

ಮೈಸೂರು,ಜು2,Tv10 ಕನ್ನಡ ವಿದ್ಯಾಸಂಸ್ಥೆಗೆ 30 ಲಕ್ಷ ವಂಚಿಸಿ ದ್ರೋಹಬಗೆದ ಕಾರ್ಯದರ್ಶಿ ವಿರುದ್ದ ಎನ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೈಸೂರಿನ ಕೆಸರೆ ಬಡಾವಣೆಯಲ್ಲಿರುವ ಬಿಟಿಎಲ್ ವಿದ್ಯಾವಾಹಿನಿ ಸ್ಕೂಲ್ ಮತ್ತು ಕಾಂಪೋಸಿಟ್ ಪಿಯು…

Leave a Reply

Your email address will not be published. Required fields are marked *