ಸೇವೆ ಸಲ್ಲಿಸುತ್ತಿದ್ದ ವೃದ್ದೆಯ ಚಿನ್ನದ ಸರ ಲಪಟಾಯಿಸಿದ ಹೋಂ ನರ್ಸ್…48 ಗಂಟೆಗಳಲ್ಲಿ ಆರೋಪಿ ಅಂದರ್…

  • Crime
  • December 30, 2023
  • No Comment
  • 512

ಮೈಸೂರು,ಡಿ30,Tv10 ಕನ್ನಡ

ಹಾಸಿಗೆ ಹಿಡಿದ ವೃದ್ದೆಗೆ ಸೇವೆ ಸಲ್ಲಿಸುತ್ತಿದ್ದ ಹೋಂ ನರ್ಸ್ 60 ಗ್ರಾಂ ತೂಕದ ಚಿನ್ನದ ಸರ ಲಪಟಾಯಿಸಿ ಪರಾರಿಯಾದ ಕೇವಲ 48 ಗಂಟೆಗಳಲ್ಲಿ ಸಿಕ್ಕಿಬಿದ್ದ ಘಟನೆ ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ನಿವೇದಿತಾ ನಗರದಲ್ಲಿ ಬೆಳಕಿಗೆ ಬಂದಿದೆ.ಆಶಾ(31) ಬಂಧಿತ ಆರೋಪಿ.ನಿವೇದಿತಾ ನಗರದ ನರಸಿಂಹಶೆಟ್ಟಿ ರವರ ಪತ್ನಿ ಸಾವಿತ್ರಿ(70) ಹಾಸಿಗೆ ಹಿಡಿದಿರುವ ವೃದ್ದೆ.ಇವರ ಪಾಲನೆಗಾಗಿ ಬೋಗಾದಿ ನಿವಾಸಿ ಆಶಾರನ್ನ ಹೋಂ ನರ್ಸ್ ಆಗಿ ಏಜೆನ್ಸ್ ಮೂಲಕ ನೇಮಕ ಮಾಡಿಕೊಳ್ಳಲಾಗಿತ್ತು.ಸುಮಾರು 15 ದಿನಗಳ ಕಾಲ ಸೇವೆ ಮಾಡಿದ ಆಶಾ ಎರಡು ದಿನಗಳ ಹಿಂದೆ ಸಾವಿತ್ರಿ ರವರು ಧರಿಸಿದ್ದ 60 ಗ್ರಾಂ ತೂಕದ ಚಿನ್ನದ ಸರ ಲಪಟಾಯಿಸಿ ಪರಾರಿಯಾಗಿದ್ದಳು.ಮೊಬೈಲ್ ಮೂಲಕ ಸಂಪರ್ಕಿಸಲು ಯತ್ನಿಸಿದಾಗ ಸ್ವಿಚ್ ಆಫ್ ಬಂದಿತ್ತು.ಕೂಡಲೇ ನರಸಿಂಹಶೆಟ್ಟಿ ರವರು ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಆಶಾ ವಿರುದ್ದ ಪ್ರಕರಣ ದಾಖಲಿಸಿದ್ದರು.ಕಾರ್ಯಾಚರಣೆ ನಡೆಸಿದ ಸರಸ್ವತಿಪುರಂ ಠಾಣೆ ಇನ್ಸ್ಪೆಕ್ಟರ್ ರವೀಂದ್ರ ಹಾಗೂ ಮಹಿಳಾ ಪಿಎಸ್ಸೈ ಲತಾ ರವರು ಕೇವಲ 48 ಗಂಟೆಗಳಲ್ಲಿ ಆರೋಪಿಯನ್ನ ಸೆರೆಹಿಡಿದು ಚಿನ್ನದ ಸರ ವಶಪಡಿಸಿಕೊಂಡಿದ್ದಾರೆ.ಈ ಸಂಭಂಧ ಸರಸ್ವವತಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *