ಸೇವೆ ಸಲ್ಲಿಸುತ್ತಿದ್ದ ವೃದ್ದೆಯ ಚಿನ್ನದ ಸರ ಲಪಟಾಯಿಸಿದ ಹೋಂ ನರ್ಸ್…48 ಗಂಟೆಗಳಲ್ಲಿ ಆರೋಪಿ ಅಂದರ್…

  • Crime
  • December 30, 2023
  • No Comment
  • 516

ಮೈಸೂರು,ಡಿ30,Tv10 ಕನ್ನಡ

ಹಾಸಿಗೆ ಹಿಡಿದ ವೃದ್ದೆಗೆ ಸೇವೆ ಸಲ್ಲಿಸುತ್ತಿದ್ದ ಹೋಂ ನರ್ಸ್ 60 ಗ್ರಾಂ ತೂಕದ ಚಿನ್ನದ ಸರ ಲಪಟಾಯಿಸಿ ಪರಾರಿಯಾದ ಕೇವಲ 48 ಗಂಟೆಗಳಲ್ಲಿ ಸಿಕ್ಕಿಬಿದ್ದ ಘಟನೆ ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ನಿವೇದಿತಾ ನಗರದಲ್ಲಿ ಬೆಳಕಿಗೆ ಬಂದಿದೆ.ಆಶಾ(31) ಬಂಧಿತ ಆರೋಪಿ.ನಿವೇದಿತಾ ನಗರದ ನರಸಿಂಹಶೆಟ್ಟಿ ರವರ ಪತ್ನಿ ಸಾವಿತ್ರಿ(70) ಹಾಸಿಗೆ ಹಿಡಿದಿರುವ ವೃದ್ದೆ.ಇವರ ಪಾಲನೆಗಾಗಿ ಬೋಗಾದಿ ನಿವಾಸಿ ಆಶಾರನ್ನ ಹೋಂ ನರ್ಸ್ ಆಗಿ ಏಜೆನ್ಸ್ ಮೂಲಕ ನೇಮಕ ಮಾಡಿಕೊಳ್ಳಲಾಗಿತ್ತು.ಸುಮಾರು 15 ದಿನಗಳ ಕಾಲ ಸೇವೆ ಮಾಡಿದ ಆಶಾ ಎರಡು ದಿನಗಳ ಹಿಂದೆ ಸಾವಿತ್ರಿ ರವರು ಧರಿಸಿದ್ದ 60 ಗ್ರಾಂ ತೂಕದ ಚಿನ್ನದ ಸರ ಲಪಟಾಯಿಸಿ ಪರಾರಿಯಾಗಿದ್ದಳು.ಮೊಬೈಲ್ ಮೂಲಕ ಸಂಪರ್ಕಿಸಲು ಯತ್ನಿಸಿದಾಗ ಸ್ವಿಚ್ ಆಫ್ ಬಂದಿತ್ತು.ಕೂಡಲೇ ನರಸಿಂಹಶೆಟ್ಟಿ ರವರು ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಆಶಾ ವಿರುದ್ದ ಪ್ರಕರಣ ದಾಖಲಿಸಿದ್ದರು.ಕಾರ್ಯಾಚರಣೆ ನಡೆಸಿದ ಸರಸ್ವತಿಪುರಂ ಠಾಣೆ ಇನ್ಸ್ಪೆಕ್ಟರ್ ರವೀಂದ್ರ ಹಾಗೂ ಮಹಿಳಾ ಪಿಎಸ್ಸೈ ಲತಾ ರವರು ಕೇವಲ 48 ಗಂಟೆಗಳಲ್ಲಿ ಆರೋಪಿಯನ್ನ ಸೆರೆಹಿಡಿದು ಚಿನ್ನದ ಸರ ವಶಪಡಿಸಿಕೊಂಡಿದ್ದಾರೆ.ಈ ಸಂಭಂಧ ಸರಸ್ವವತಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *