ಸಾಹಸಸಿಂಹನ ಪುಣ್ಯಸ್ಮರಣೆ…ವಿಷ್ಣು ಸ್ಮಾರಕದಲ್ಲಿ ರಕ್ತದಾನ ಕಾರ್ಯಕ್ರಮ…

ಮೈಸೂರು,ಡಿ30,Tv10 ಕನ್ನಡ

ಸಾಹಸಸಿಂಹ ವಿಷ್ಣುವರ್ಧನ್ ರವರ 14ನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಉದ್ಬೂರು ಗೇಟ್ ಬಳಿ ಇರುವ ಸ್ಮಾರಕದಲ್ಲಿ ಜೀವದಾರ ರಕ್ತ ನಿಧಿ ಕೇಂದ್ರದ ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. 50ಕ್ಕೂ ಹೆಚ್ಚು ಅಭಿಮಾನಿಗಳು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು.
ರಕ್ತದಾನ ಶಿಬಿರವನ್ನು ವಿಷ್ಣುವರ್ಧನ್ ಅಳಿಯ ಅನಿರುದ್ ರವರು ಉದ್ಘಾಟಿಸಿ ನಂತರ ಮಾತನಾಡಿದರು.

ವಿಷ್ಣುಸ್ಮಾರಕದಲ್ಲಿ ಪ್ರತಿವಾರ
ಲಯನ್ಸ್ ಜೀವಧಾರ ರಕ್ತನಿಧಿ ಕೇಂದ್ರದವರು ಶಿಬಿರ ಮತ್ತು ರಸಮಂಜರಿ ಕಾರ್ಯಕ್ರಮ ಆಯೋಜಿಸುತ್ತಾ ಬಂದಿರುವುದು ಶ್ಲಾಘನೀಯ ಕೆಲಸವಾಗಿದ್ದು ಗ್ರಾಮೀಣ ಮತ್ತು ನಗರ ಪ್ರದೇಶ ಬಡಾವಣೆಗಳಲ್ಲಿ ವಿಷ್ಣು ಅಪ್ಪಾಜಿ ರವರ ಭಾವಚಿತ್ರವಾಕಿ ಸಮಾಜಮಖಿ ಕೆಲಸ ಮಾಡುತ್ತಿದ್ದಾರೆ, ಅವರ ಚಿತ್ರಗಳು ಕೌಟುಂಬಿಕ ಪ್ರಧಾನವಾಗಿದ್ದವು ಸಮಾಜದಲ್ಲಿ ಶ್ರಮಜೀವಿಗಳಿಗೆ ಇಂದಿಗೂ ಪ್ರೇರಣೆಯಾಗಿದ್ದಾರೆ, ಬೆಂಗಳೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣ ಅಭಿಮಾನಿಗಳ ಹೋರಾಟ ಮಾಡುತ್ತಿದ್ದಾರೆ. ಬಾಲಣ್ಣ ರವರ ಕುಟುಂಬಕ್ಕೆ ಮನವಿ ಮಾಡಿದ್ದೇನೆ, 10ಗುಂಟೆ ಜಾಗವನ್ನ ಕೇಳಿದ್ದೇವೆ ಇದರ ಬಗ್ಗೆ ಸರ್ಕಾರದ ನಿರ್ಧಾರಗಳು ಬೇಗ ಸಮ್ಮತಿಸಿದರೇ ಕೋಟ್ಯಾಂತರ ಅಭಿಮಾನಿಗಳಿಗೆ ಖುಷಿಯಾಗುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಜೀವಸಾರ ರತ್ನ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್, ರೋಟರಿ ಕ್ಲಬ್ ಸೌತ್ ಈಸ್ಟ್ ಕಾರ್ಯದರ್ಶಿ ಎನ್ ಟಿ ಗಿರೀಶ್, ಅಜಯ್ ಶಾಸ್ತ್ರಿ, ಬೈರತಿ ಲಿಂಗರಾಜು, ವಿಷ್ಣುಸೇನಾ ಅಧ್ಯಕ್ಷ ಶ್ರೀಕಂಠೇಗೌಡ, ಮರಟಿ ಕ್ಯಾತನಹಳ್ಳಿ ಮಂಜು, ವರುಣ ಮಹದೇವ್,
ಜಟ್ಟಿ ಹುಂಡಿಗೋಪಾಲ್, ರಶ್ಮಿ ,ಪ್ರಭು, ಸುರೇಶ್, ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…
ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…
BTL ವಿಧ್ಯಾಸಂಸ್ಥೆಗೆ ದ್ರೋಹ…30 ಲಕ್ಷ ವಂಚನೆ…ಕಾರ್ಯದರ್ಶಿ ವಿರುದ್ದ FIR…

BTL ವಿಧ್ಯಾಸಂಸ್ಥೆಗೆ ದ್ರೋಹ…30 ಲಕ್ಷ ವಂಚನೆ…ಕಾರ್ಯದರ್ಶಿ ವಿರುದ್ದ FIR…

ಮೈಸೂರು,ಜು2,Tv10 ಕನ್ನಡ ವಿದ್ಯಾಸಂಸ್ಥೆಗೆ 30 ಲಕ್ಷ ವಂಚಿಸಿ ದ್ರೋಹಬಗೆದ ಕಾರ್ಯದರ್ಶಿ ವಿರುದ್ದ ಎನ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೈಸೂರಿನ ಕೆಸರೆ ಬಡಾವಣೆಯಲ್ಲಿರುವ ಬಿಟಿಎಲ್ ವಿದ್ಯಾವಾಹಿನಿ ಸ್ಕೂಲ್ ಮತ್ತು ಕಾಂಪೋಸಿಟ್ ಪಿಯು…

Leave a Reply

Your email address will not be published. Required fields are marked *