ನಿರ್ವಹಣೆ ಇಲ್ಲದೆ ಸೊರಗಿದ ಇ-ಟಾಯ್ಲೆಟ್…ಸಾರ್ವಜನಿಕರ ತೆರಿಗೆ ಹಣ ಪೋಲು…ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಸಂಪ್…

ಮೈಸೂರು,ಡಿ31,Tv10 ಕನ್ನಡ

ಸಾರ್ವಜನಿಕರ ಬಳಕೆಗಾಗಿ ನಿರ್ಮಿಸಲಾದ ಇ-ಟಾಯ್ಲೆಟ್ ಸೂಕ್ತ ನಿರ್ವಹಣೆ ಇಲ್ಲದೆ ಸೊರಗಿದೆ.ರಾಮಕೃಷ್ಣನಗರದ ಉಪನೊಂದಣಿ ಕಚೇರಿ ಮುಂಭಾಗ ಇರುವ ಇ-ಶೌಚಾಲಯದ ದುಃಸ್ಥತಿಯನ್ನ ಕೇಳುವವರೇ ಇಲ್ಲದಂತಾಗಿದೆ.ಸಬ್ ರಿಜಿಸ್ಟ್ರಾರ್ ಕಚೇರಿ ಮಾತ್ರವಲ್ಲದೆ ಈ ಸ್ಥಳದಲ್ಲಿ ಹಲವು ಸರ್ಕಾರಿ ಕಚೇರಿಗಳಿವೆ.ಇಲ್ಲಿಗೆ ಬರುವ ಸಾರ್ವಜನಿಕರ ಬಳಕೆಗಾಗಿ ಇ-ಶೌಚಾಲಯ ನಿರ್ಮಿಸಲಾಗಿದೆ.ಆದರೆ ಇ-ಟಾಯ್ಲೆಟ್ ಕೆಟ್ಟು ನಿಂತು ತಿಂಗಳುಗಳೇ ಉರುಳಿದೆ.ಬಾಗಿಲುಗಳು ಭದ್ರವಾಗಿಲ್ಲದೆ ತೆರೆದ ಮನೆಯಂತಾಗಿದೆ.ಸಮರ್ಪಕವಾಗಿ ಬಳಕೆಯಲ್ಲಿ ಇಲ್ಲದಿದ್ದರೂ ವಿದ್ಯುತ್ ಸಂಪರ್ಕ ಚಾಲ್ತಿಯಲ್ಲಿದೆ.ವಿದ್ಯುತ್ ಉಪಕರಣಗಳನ್ನ ಅಳವಡಿಸಿರುವ ಪೆಟ್ಟಿಗೆ ಓಪನ್ ಆಗಿ ಅಪಾಯಕ್ಕೆ ಆಹ್ವಾನ ನೀಡುತ್ತಿದೆ.ಇ-ಶೌಚಾಲಯ ಬಳಕೆಯಲ್ಲಿ ಇಲ್ಲದ ಕಾರಣ ಸಾರ್ವಜನಿಕರ ಇದರ ಬಾಗಿಲ ಮುಂಭಾಗವೇ ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ.ಇದಕ್ಕೆ ನೀರು ಸರಬರಾಜು ಮಾಡುವ ಸಂಪ್ ಮುಚ್ಚಳ ಮಾಯವಾಗಿದೆ.ತೆರೆದ ಸಂಪ್ ಸಹ ಅಪಾಯಕ್ಕೆ ಆಹ್ವಾನ ನೀಡುತ್ತಿದೆ.ಪಾದಚಾರಿಗಳಾಗಲಿ,ಪ್ರಾಣಿಗಳಾಗಲಿ ಆಯತಪ್ಪಿ ಬೀಳುವ ಸಂಭವವಿದೆ.ಇನ್ನು ಇದನ್ನ ಹೊಂದಿಕೊಂಡಂತಿರುವ ಉದ್ಯಾನವನದಲ್ಲಿ ಮಧ್ಯದ ಬಾಟಲಿಗಳು ರಾರಾಜಿಸುತ್ತಿವೆ.ಮುಕ್ತವಾಗಿ ಎಣ್ಣೆ ಪಾರ್ಟಿ ಮಾಡಿ ಬಾಟಲ್ ಗಳನ್ನ ಬಿಸಾಡಿ ಹೋಗಿದ್ದಾರೆ.ಸರ್ಕಾರಿ ಕಚೇರಿಗೆ ಬರುವ ಹಾಗೂ ಸುತ್ತಮುತ್ತಲಿನ ನಿವಾಸಿಗಳಿಗೆ ಅನುಕೂಲವಾಗಬೇಕಿದ್ದ ಇ-ಟಾಯ್ಲೆಟ್ ಸ್ಥಿತಿ ಮುಜುಗರ ತರುತ್ತಿದೆ.ಸಾರ್ವಜನಿಕರ ತೆರಿಗೆ ಹಣದಲ್ಲಿ ಲಕ್ಷಾಂತರ ರೂ ಖರ್ಚು ಮಾಡಿ ನಿರ್ಮಿಸಿದ ಇ-ಟಾಯ್ಲೆಟ್ ಅಧಿಕಾರಿಗಳ ಬಣ್ಣ ಬಯಲು ಮಾಡುತ್ತಿದೆ.ಮಹಾನಗರ ಪಾಲಿಕೆ ವಲಯ ಕಚೇರಿ 3 ರ ವ್ಯಾಪ್ತಿಗೆ ಬರುವ ಇ-ಟಾಯ್ಲೆಟ್ ಗೆ ಕಾಯಕಲ್ಪ ದೊರೆಯುವುದೇ..? ಅಪಾಯ ಸಂಭವಿಸುವ ಮುನ್ನ ಸುಸ್ಥಿತಿಗೆ ಬರುವುದೇ…?ಇದನ್ನ ನಿರ್ಮಿಸಿದ ಉದ್ದೇಶ ಈಡೇರುವುದೇ..? ಇವೆಲ್ಲಾ ಪ್ರಶ್ನೆಗಳಿಗೆ ಪಾಲಿಕೆ ಅಧಿಕಾರಿಗಳು ಉತ್ತರ ನೀಡಬೇಕಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *