ನಿರ್ವಹಣೆ ಇಲ್ಲದೆ ಸೊರಗಿದ ಇ-ಟಾಯ್ಲೆಟ್…ಸಾರ್ವಜನಿಕರ ತೆರಿಗೆ ಹಣ ಪೋಲು…ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಸಂಪ್…

ಮೈಸೂರು,ಡಿ31,Tv10 ಕನ್ನಡ

ಸಾರ್ವಜನಿಕರ ಬಳಕೆಗಾಗಿ ನಿರ್ಮಿಸಲಾದ ಇ-ಟಾಯ್ಲೆಟ್ ಸೂಕ್ತ ನಿರ್ವಹಣೆ ಇಲ್ಲದೆ ಸೊರಗಿದೆ.ರಾಮಕೃಷ್ಣನಗರದ ಉಪನೊಂದಣಿ ಕಚೇರಿ ಮುಂಭಾಗ ಇರುವ ಇ-ಶೌಚಾಲಯದ ದುಃಸ್ಥತಿಯನ್ನ ಕೇಳುವವರೇ ಇಲ್ಲದಂತಾಗಿದೆ.ಸಬ್ ರಿಜಿಸ್ಟ್ರಾರ್ ಕಚೇರಿ ಮಾತ್ರವಲ್ಲದೆ ಈ ಸ್ಥಳದಲ್ಲಿ ಹಲವು ಸರ್ಕಾರಿ ಕಚೇರಿಗಳಿವೆ.ಇಲ್ಲಿಗೆ ಬರುವ ಸಾರ್ವಜನಿಕರ ಬಳಕೆಗಾಗಿ ಇ-ಶೌಚಾಲಯ ನಿರ್ಮಿಸಲಾಗಿದೆ.ಆದರೆ ಇ-ಟಾಯ್ಲೆಟ್ ಕೆಟ್ಟು ನಿಂತು ತಿಂಗಳುಗಳೇ ಉರುಳಿದೆ.ಬಾಗಿಲುಗಳು ಭದ್ರವಾಗಿಲ್ಲದೆ ತೆರೆದ ಮನೆಯಂತಾಗಿದೆ.ಸಮರ್ಪಕವಾಗಿ ಬಳಕೆಯಲ್ಲಿ ಇಲ್ಲದಿದ್ದರೂ ವಿದ್ಯುತ್ ಸಂಪರ್ಕ ಚಾಲ್ತಿಯಲ್ಲಿದೆ.ವಿದ್ಯುತ್ ಉಪಕರಣಗಳನ್ನ ಅಳವಡಿಸಿರುವ ಪೆಟ್ಟಿಗೆ ಓಪನ್ ಆಗಿ ಅಪಾಯಕ್ಕೆ ಆಹ್ವಾನ ನೀಡುತ್ತಿದೆ.ಇ-ಶೌಚಾಲಯ ಬಳಕೆಯಲ್ಲಿ ಇಲ್ಲದ ಕಾರಣ ಸಾರ್ವಜನಿಕರ ಇದರ ಬಾಗಿಲ ಮುಂಭಾಗವೇ ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ.ಇದಕ್ಕೆ ನೀರು ಸರಬರಾಜು ಮಾಡುವ ಸಂಪ್ ಮುಚ್ಚಳ ಮಾಯವಾಗಿದೆ.ತೆರೆದ ಸಂಪ್ ಸಹ ಅಪಾಯಕ್ಕೆ ಆಹ್ವಾನ ನೀಡುತ್ತಿದೆ.ಪಾದಚಾರಿಗಳಾಗಲಿ,ಪ್ರಾಣಿಗಳಾಗಲಿ ಆಯತಪ್ಪಿ ಬೀಳುವ ಸಂಭವವಿದೆ.ಇನ್ನು ಇದನ್ನ ಹೊಂದಿಕೊಂಡಂತಿರುವ ಉದ್ಯಾನವನದಲ್ಲಿ ಮಧ್ಯದ ಬಾಟಲಿಗಳು ರಾರಾಜಿಸುತ್ತಿವೆ.ಮುಕ್ತವಾಗಿ ಎಣ್ಣೆ ಪಾರ್ಟಿ ಮಾಡಿ ಬಾಟಲ್ ಗಳನ್ನ ಬಿಸಾಡಿ ಹೋಗಿದ್ದಾರೆ.ಸರ್ಕಾರಿ ಕಚೇರಿಗೆ ಬರುವ ಹಾಗೂ ಸುತ್ತಮುತ್ತಲಿನ ನಿವಾಸಿಗಳಿಗೆ ಅನುಕೂಲವಾಗಬೇಕಿದ್ದ ಇ-ಟಾಯ್ಲೆಟ್ ಸ್ಥಿತಿ ಮುಜುಗರ ತರುತ್ತಿದೆ.ಸಾರ್ವಜನಿಕರ ತೆರಿಗೆ ಹಣದಲ್ಲಿ ಲಕ್ಷಾಂತರ ರೂ ಖರ್ಚು ಮಾಡಿ ನಿರ್ಮಿಸಿದ ಇ-ಟಾಯ್ಲೆಟ್ ಅಧಿಕಾರಿಗಳ ಬಣ್ಣ ಬಯಲು ಮಾಡುತ್ತಿದೆ.ಮಹಾನಗರ ಪಾಲಿಕೆ ವಲಯ ಕಚೇರಿ 3 ರ ವ್ಯಾಪ್ತಿಗೆ ಬರುವ ಇ-ಟಾಯ್ಲೆಟ್ ಗೆ ಕಾಯಕಲ್ಪ ದೊರೆಯುವುದೇ..? ಅಪಾಯ ಸಂಭವಿಸುವ ಮುನ್ನ ಸುಸ್ಥಿತಿಗೆ ಬರುವುದೇ…?ಇದನ್ನ ನಿರ್ಮಿಸಿದ ಉದ್ದೇಶ ಈಡೇರುವುದೇ..? ಇವೆಲ್ಲಾ ಪ್ರಶ್ನೆಗಳಿಗೆ ಪಾಲಿಕೆ ಅಧಿಕಾರಿಗಳು ಉತ್ತರ ನೀಡಬೇಕಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *