ನಿರ್ವಹಣೆ ಇಲ್ಲದೆ ಸೊರಗಿದ ಇ-ಟಾಯ್ಲೆಟ್…ಸಾರ್ವಜನಿಕರ ತೆರಿಗೆ ಹಣ ಪೋಲು…ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಸಂಪ್…

ಮೈಸೂರು,ಡಿ31,Tv10 ಕನ್ನಡ

ಸಾರ್ವಜನಿಕರ ಬಳಕೆಗಾಗಿ ನಿರ್ಮಿಸಲಾದ ಇ-ಟಾಯ್ಲೆಟ್ ಸೂಕ್ತ ನಿರ್ವಹಣೆ ಇಲ್ಲದೆ ಸೊರಗಿದೆ.ರಾಮಕೃಷ್ಣನಗರದ ಉಪನೊಂದಣಿ ಕಚೇರಿ ಮುಂಭಾಗ ಇರುವ ಇ-ಶೌಚಾಲಯದ ದುಃಸ್ಥತಿಯನ್ನ ಕೇಳುವವರೇ ಇಲ್ಲದಂತಾಗಿದೆ.ಸಬ್ ರಿಜಿಸ್ಟ್ರಾರ್ ಕಚೇರಿ ಮಾತ್ರವಲ್ಲದೆ ಈ ಸ್ಥಳದಲ್ಲಿ ಹಲವು ಸರ್ಕಾರಿ ಕಚೇರಿಗಳಿವೆ.ಇಲ್ಲಿಗೆ ಬರುವ ಸಾರ್ವಜನಿಕರ ಬಳಕೆಗಾಗಿ ಇ-ಶೌಚಾಲಯ ನಿರ್ಮಿಸಲಾಗಿದೆ.ಆದರೆ ಇ-ಟಾಯ್ಲೆಟ್ ಕೆಟ್ಟು ನಿಂತು ತಿಂಗಳುಗಳೇ ಉರುಳಿದೆ.ಬಾಗಿಲುಗಳು ಭದ್ರವಾಗಿಲ್ಲದೆ ತೆರೆದ ಮನೆಯಂತಾಗಿದೆ.ಸಮರ್ಪಕವಾಗಿ ಬಳಕೆಯಲ್ಲಿ ಇಲ್ಲದಿದ್ದರೂ ವಿದ್ಯುತ್ ಸಂಪರ್ಕ ಚಾಲ್ತಿಯಲ್ಲಿದೆ.ವಿದ್ಯುತ್ ಉಪಕರಣಗಳನ್ನ ಅಳವಡಿಸಿರುವ ಪೆಟ್ಟಿಗೆ ಓಪನ್ ಆಗಿ ಅಪಾಯಕ್ಕೆ ಆಹ್ವಾನ ನೀಡುತ್ತಿದೆ.ಇ-ಶೌಚಾಲಯ ಬಳಕೆಯಲ್ಲಿ ಇಲ್ಲದ ಕಾರಣ ಸಾರ್ವಜನಿಕರ ಇದರ ಬಾಗಿಲ ಮುಂಭಾಗವೇ ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ.ಇದಕ್ಕೆ ನೀರು ಸರಬರಾಜು ಮಾಡುವ ಸಂಪ್ ಮುಚ್ಚಳ ಮಾಯವಾಗಿದೆ.ತೆರೆದ ಸಂಪ್ ಸಹ ಅಪಾಯಕ್ಕೆ ಆಹ್ವಾನ ನೀಡುತ್ತಿದೆ.ಪಾದಚಾರಿಗಳಾಗಲಿ,ಪ್ರಾಣಿಗಳಾಗಲಿ ಆಯತಪ್ಪಿ ಬೀಳುವ ಸಂಭವವಿದೆ.ಇನ್ನು ಇದನ್ನ ಹೊಂದಿಕೊಂಡಂತಿರುವ ಉದ್ಯಾನವನದಲ್ಲಿ ಮಧ್ಯದ ಬಾಟಲಿಗಳು ರಾರಾಜಿಸುತ್ತಿವೆ.ಮುಕ್ತವಾಗಿ ಎಣ್ಣೆ ಪಾರ್ಟಿ ಮಾಡಿ ಬಾಟಲ್ ಗಳನ್ನ ಬಿಸಾಡಿ ಹೋಗಿದ್ದಾರೆ.ಸರ್ಕಾರಿ ಕಚೇರಿಗೆ ಬರುವ ಹಾಗೂ ಸುತ್ತಮುತ್ತಲಿನ ನಿವಾಸಿಗಳಿಗೆ ಅನುಕೂಲವಾಗಬೇಕಿದ್ದ ಇ-ಟಾಯ್ಲೆಟ್ ಸ್ಥಿತಿ ಮುಜುಗರ ತರುತ್ತಿದೆ.ಸಾರ್ವಜನಿಕರ ತೆರಿಗೆ ಹಣದಲ್ಲಿ ಲಕ್ಷಾಂತರ ರೂ ಖರ್ಚು ಮಾಡಿ ನಿರ್ಮಿಸಿದ ಇ-ಟಾಯ್ಲೆಟ್ ಅಧಿಕಾರಿಗಳ ಬಣ್ಣ ಬಯಲು ಮಾಡುತ್ತಿದೆ.ಮಹಾನಗರ ಪಾಲಿಕೆ ವಲಯ ಕಚೇರಿ 3 ರ ವ್ಯಾಪ್ತಿಗೆ ಬರುವ ಇ-ಟಾಯ್ಲೆಟ್ ಗೆ ಕಾಯಕಲ್ಪ ದೊರೆಯುವುದೇ..? ಅಪಾಯ ಸಂಭವಿಸುವ ಮುನ್ನ ಸುಸ್ಥಿತಿಗೆ ಬರುವುದೇ…?ಇದನ್ನ ನಿರ್ಮಿಸಿದ ಉದ್ದೇಶ ಈಡೇರುವುದೇ..? ಇವೆಲ್ಲಾ ಪ್ರಶ್ನೆಗಳಿಗೆ ಪಾಲಿಕೆ ಅಧಿಕಾರಿಗಳು ಉತ್ತರ ನೀಡಬೇಕಿದೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *