ಮೈಸೂರು:ಶಾರದಾದೇವಿ ಜಯಂತಿ ಆಚರಣೆ…ಶಾರದಾಮಾತೆ ಪ್ರತಿಮೆ ಸ್ಥಾಪನೆಗೆ ಒತ್ತಾಯ…

ಮೈಸೂರು,ಜ3,Tv10 ಕನ್ನಡ

ಮೈಸೂರಿನ ಶಾರದಾ ದೇವಿ ನಗರ ವೃತ್ತದಲ್ಲಿ ಶ್ರೀ ಶಾರದಾದೇವಿ 171ನೇ ಜಯಂತಿಯನ್ನ ಆಚರಿಸಲಾಯಿತು. ಆಧ್ಯಾತ್ಮಿಕ ಲೋಕ ಕಾರ್ಯಕ್ರಮದಲ್ಲಿ ಶ್ರೀ ಶಾರದಾ ಮಾತೆ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ನಂತರ ಸಿಹಿ ವಿತರಿಸಲಾಯಿತು. ಮಾತನಾಡಿದ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್ ತಮ್ಮ ಸಾಧನೆ, ತ್ಯಾಗ ಮತ್ತು ಪರಿಶ್ರಮದಿಂದ ಶ್ರೀ ರಾಮಕೃಷ್ಣ ಪರಮಹಂಸರು ಹಾಗೂ ವೀರಸನ್ಯಾಸಿ ಸ್ವಾಮಿ ವಿವೇಕಾನಂದರನ್ನು ಆಧ್ಯಾತ್ಮಿಕವಾಗಿ ಬೆಳೆಸಿದ ಮಹಾನ್‌ ಶಕ್ತಿ ಶ್ರೀ ಶಾರದಾದೇವಿಯವರು ಎಂದು ಬಣ್ಣಿಸಿದರು.
ಚಾಮುಂಡೇಶ್ವರಿ ಕ್ಷೇತ್ರದ ಬಿಜೆಪಿ ಅಧ್ಯಕ್ಷರಾದ ಬಿ ಎಂ ರಘು ಮಾತನಾಡಿ
ವಿವೇಕಾನಂದನಗರ, ರಾಮಕೃಷ್ಣನಗರದ ವೃತ್ತಗಳಲ್ಲಿರುವಂತೆ ಶಾರದಾದೇವಿನಗರದಲ್ಲಿಯೂ ಶಾರದಾಮಾತೆಯ ಪ್ರತಿಮೆ ನಿರ್ಮಾಣವಾಗಬೇಕು ತನ್ಮೂಲಕ ಮೂವರು ಮಹನೀಯರನ್ನು ಕೊಡುಗೆಯನ್ನು ಶಾಶ್ವತವಾಗಿ ನೆನೆಯುವ ಕೆಲಸವಾಗುತ್ತದೆ ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷರಾದ ಮಡ್ಡಿಕೆರೆ ಗೋಪಾಲ್,
ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ,
ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷರಾದ ಕಡಕೋಳ ಜಗದೀಶ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಸ್ಥಳೀಯ ಮುಖಂಡರಾದ ಎಚ್ ಜಿ ರಾಜಮಣಿ, ಶ್ರೀಧರ್ ಶರ್ಮ, ವಿಜೇಂದ್ರ, ರಾಜಕುಮಾರ್ ಕಾಮತ್, ಪಾಂಡುರಂಗ ಶೆಟ್ಟಿ, ರವಿ ಅರಸ್, ವಿನುತಾ, ಹೇಮಲತಾ, ರಾಧಾ ಮುತಾಲಿಕ್, ಸುಮಾ ಪ್ರಾಣೇಶ್, ರಮಾಬಾಯಿ, ಮಂಜುಳ ,ನೇತ್ರಾವತಿ,ರಮೇಶ್, ತುಳಸಿ,
ಹಾಗೂ ಇನ್ನಿತರರು ಹಾಜರಿದ್ದರು..

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *