ತುಂಡು ಭೂಮಿ ಹಂಚಿಕೆ,ಭೂ ಪರಿಹಾರವಾಗಿ ಜಾಗ ನೀಡುವ ನಿರ್ದೇಶನಗಳ ಉಲ್ಲಂಘನೆ ಪ್ರಕರಣಗಳ ಕಡತ ಸಲ್ಲಿಸಿ…ಮುಡಾ ಆಯುಕ್ತರಿಗೆ ತನಿಖಾ ಸಮಿತಿ ಅಧ್ಯಕ್ಷರಿಂದ ಖಡಕ್ ಪತ್ರ…

ಮೈಸೂರು,ಜ4,Tv10 ಕನ್ನಡ

ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ತುಂಡು ಭೂಮಿ ಹಂಚಿಕೆ,,ಭೂ ಪರಿಹಾರವಾಗಿ ಜಾಗ ನೀಡುವ ಕುರಿತು 14-03-2023 ರ ನಿರ್ದೇಶನಗಳನ್ನ ಉಲ್ಲಂಘನೆಯಾಗಿರುವ ಪ್ರಕರಣಗಳನ್ನ ತನಿಖೆ ನಡೆಸಲು ಸಮಿತಿ ರಚನೆಯಾಗಿದೆ.14-03-2023 ರಿಂದ ಇಲ್ಲಿಯವರೆಗೆ ಭೂ ಪರಿಹಾರವಾಗಿ ಬದಲಿ ನಿವೇಶನ ಹಂಚಿಕೆ,ತುಂಡು ಭೂಮಿ ಹಂಚಿಕೆ ವಿಷಯಕ್ಕೆ ಸಂಭಂಧಿಸಿದಂತೆ ಕ್ರಮ ವಹಿಸಿರುವ ಎಲ್ಲಾ ಪ್ರಕರಣಗಳ ಪ್ರಕರಣಾವಾರು ಮೂಲ ಕಡತಗಳನ್ನ ಸಲ್ಲಿಸುವಂತೆ ಮುಡಾ ಆಯುಕ್ತರಿಗೆ ಸೂಚಿಸಲಾಗಿತ್ತು.ಕಡತಗಳ ಪ್ರಮಾಣ ಹೆಚ್ಚಾದ ಕಾರಣ ಸಮಯದ ಕಾಲಾವಕಾಶ ಕೋರಿದ್ದರು.ಕಾಲಾವಕಾಶ ಪೂರ್ಣಗೊಂಡರೂ ಇದುವರೆಗೆ ಕಡತಗಳನ್ನ ಸಲ್ಲಿಸದ ಹಿನ್ನಲೆ ತನಿಖಾ ಸಮಿತಿಯ ಅಧ್ಯಕ್ಷರು ಹಾಗೂ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಮುಡಾ ಆಯುಕ್ತರಿಗೆ ಪತ್ರ ಬರೆದು 2 ದಿನಗಳ ಒಳಗೆ ಮೂಲ ಕಡತ,ಘನ ನ್ಯಾಯಾಲಯದ ಆದೇಶ,ಸರ್ಕಾರ ನಿಗದಿಪಡಿಸಿರುವ ನಿಯಮ ಹಾಗೂ ಕಾಯ್ದೆಗಳನ್ನೊಳಗೊಂಡ ಮಾಹಿತಿಯನ್ನ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.ಇಲ್ಲದಿದ್ದಲ್ಲಿ ವರದಿ ಸಲ್ಲಿಕೆಯಾಗಿಲ್ಲವೆಂಬ ಕಾರಣ ನೀಡಿ ಸರ್ಕಾರದ ಗಮನಕ್ಕೆ ತರುವುದಾಗಿ ಎಚ್ಚರಿಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *