ತುಂಡು ಭೂಮಿ ಹಂಚಿಕೆ,ಭೂ ಪರಿಹಾರವಾಗಿ ಜಾಗ ನೀಡುವ ನಿರ್ದೇಶನಗಳ ಉಲ್ಲಂಘನೆ ಪ್ರಕರಣಗಳ ಕಡತ ಸಲ್ಲಿಸಿ…ಮುಡಾ ಆಯುಕ್ತರಿಗೆ ತನಿಖಾ ಸಮಿತಿ ಅಧ್ಯಕ್ಷರಿಂದ ಖಡಕ್ ಪತ್ರ…

ಮೈಸೂರು,ಜ4,Tv10 ಕನ್ನಡ

ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ತುಂಡು ಭೂಮಿ ಹಂಚಿಕೆ,,ಭೂ ಪರಿಹಾರವಾಗಿ ಜಾಗ ನೀಡುವ ಕುರಿತು 14-03-2023 ರ ನಿರ್ದೇಶನಗಳನ್ನ ಉಲ್ಲಂಘನೆಯಾಗಿರುವ ಪ್ರಕರಣಗಳನ್ನ ತನಿಖೆ ನಡೆಸಲು ಸಮಿತಿ ರಚನೆಯಾಗಿದೆ.14-03-2023 ರಿಂದ ಇಲ್ಲಿಯವರೆಗೆ ಭೂ ಪರಿಹಾರವಾಗಿ ಬದಲಿ ನಿವೇಶನ ಹಂಚಿಕೆ,ತುಂಡು ಭೂಮಿ ಹಂಚಿಕೆ ವಿಷಯಕ್ಕೆ ಸಂಭಂಧಿಸಿದಂತೆ ಕ್ರಮ ವಹಿಸಿರುವ ಎಲ್ಲಾ ಪ್ರಕರಣಗಳ ಪ್ರಕರಣಾವಾರು ಮೂಲ ಕಡತಗಳನ್ನ ಸಲ್ಲಿಸುವಂತೆ ಮುಡಾ ಆಯುಕ್ತರಿಗೆ ಸೂಚಿಸಲಾಗಿತ್ತು.ಕಡತಗಳ ಪ್ರಮಾಣ ಹೆಚ್ಚಾದ ಕಾರಣ ಸಮಯದ ಕಾಲಾವಕಾಶ ಕೋರಿದ್ದರು.ಕಾಲಾವಕಾಶ ಪೂರ್ಣಗೊಂಡರೂ ಇದುವರೆಗೆ ಕಡತಗಳನ್ನ ಸಲ್ಲಿಸದ ಹಿನ್ನಲೆ ತನಿಖಾ ಸಮಿತಿಯ ಅಧ್ಯಕ್ಷರು ಹಾಗೂ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಮುಡಾ ಆಯುಕ್ತರಿಗೆ ಪತ್ರ ಬರೆದು 2 ದಿನಗಳ ಒಳಗೆ ಮೂಲ ಕಡತ,ಘನ ನ್ಯಾಯಾಲಯದ ಆದೇಶ,ಸರ್ಕಾರ ನಿಗದಿಪಡಿಸಿರುವ ನಿಯಮ ಹಾಗೂ ಕಾಯ್ದೆಗಳನ್ನೊಳಗೊಂಡ ಮಾಹಿತಿಯನ್ನ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.ಇಲ್ಲದಿದ್ದಲ್ಲಿ ವರದಿ ಸಲ್ಲಿಕೆಯಾಗಿಲ್ಲವೆಂಬ ಕಾರಣ ನೀಡಿ ಸರ್ಕಾರದ ಗಮನಕ್ಕೆ ತರುವುದಾಗಿ ಎಚ್ಚರಿಸಿದ್ದಾರೆ…

Spread the love

Related post

ಕಳುವು ಮಾಲು ಮಾರಾಟ ಮಾಡಲು ಸಹಕರಿಸಿದ ಪ್ರಕರಣ…ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು ಸಸ್ಪೆಂಡ್…

ಕಳುವು ಮಾಲು ಮಾರಾಟ ಮಾಡಲು ಸಹಕರಿಸಿದ ಪ್ರಕರಣ…ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು…

ಮೈಸೂರು,ಸೆ7,Tv10 ಕನ್ನಡ ಕಳುವು ಮಾಡಿದ ಚಿನ್ನಾಭರಣಗಳನ್ನ ಮಾರಾಟ ಮಾಡಲು ಸಹಕರಿಸಿದ ಆರೋಪದ ಮೇಲೆ ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು ಅಮಾನತುಪಡಿಸಿ ಆದೇಶ ಹೊರಡಿಸಲಾಗಿದೆ.ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್…
ಕೊಲೆ ಆರೋಪಿ ಅಂದರ್…ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಕೊಲೆ ಆರೋಪಿ ಅಂದರ್…ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ನಂಜನಗೂಡು,ಸೆ7,Tv10 ಕನ್ನಡ ಅಕ್ರಮ ಸಂಭಂಧ ಹಿನ್ನಲೆ ವ್ಯಕ್ತಿಯನ್ನ ಮೊಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನ ಸೆರೆ ಹಿಡಿಯುವಲ್ಲಿ ನಂಜನಗೂಡು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.ಮಹದೇವ ಶೆಟ್ಟಿ (45) ಬಂಧಿತ…
ಗೌರಿಗಣೇಶ ಹಬ್ಬ ಹಿನ್ನೆಲೆ: ದಸರಾ ಆನೆಗಳಿಗೆ ವಿಶೇಷ ಪೂಜೆ …

ಗೌರಿಗಣೇಶ ಹಬ್ಬ ಹಿನ್ನೆಲೆ: ದಸರಾ ಆನೆಗಳಿಗೆ ವಿಶೇಷ ಪೂಜೆ …

ಮೈಸೂರು,ಸೆ7,Tv10 ಕನ್ನಡಗೌರಿ ಗಣೇಶ ಹಬ್ಬವಾದ ಇಂದು ಅರಮನೆ ಆವರಣದಲ್ಲಿ ವಾಸ್ತವ್ಯ ಹೂಡಿರುವ ದಸರಾ ಗಜಪಡೆಗೆ ವಿಶೇಷ ಪೂಜೆ ನೆರವೇರಿಸಲಾಯಿತು.ಅಭಿಮನ್ಯು ನೇತೃತ್ವದ ಎಲ್ಲಾ ಹದಿನಾಲ್ಕು ಆನೆಗಳಿಗೂ ಪೂಜೆ ನೆರವೇರಿಸಲಾಯಿತು.ಮೈಸೂರು ಜಿಲ್ಲಾಧಿಕಾರಿ…

Leave a Reply

Your email address will not be published. Required fields are marked *