ತುಂಡು ಭೂಮಿ ಹಂಚಿಕೆ,ಭೂ ಪರಿಹಾರವಾಗಿ ಜಾಗ ನೀಡುವ ನಿರ್ದೇಶನಗಳ ಉಲ್ಲಂಘನೆ ಪ್ರಕರಣಗಳ ಕಡತ ಸಲ್ಲಿಸಿ…ಮುಡಾ ಆಯುಕ್ತರಿಗೆ ತನಿಖಾ ಸಮಿತಿ ಅಧ್ಯಕ್ಷರಿಂದ ಖಡಕ್ ಪತ್ರ…

ಮೈಸೂರು,ಜ4,Tv10 ಕನ್ನಡ

ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ತುಂಡು ಭೂಮಿ ಹಂಚಿಕೆ,,ಭೂ ಪರಿಹಾರವಾಗಿ ಜಾಗ ನೀಡುವ ಕುರಿತು 14-03-2023 ರ ನಿರ್ದೇಶನಗಳನ್ನ ಉಲ್ಲಂಘನೆಯಾಗಿರುವ ಪ್ರಕರಣಗಳನ್ನ ತನಿಖೆ ನಡೆಸಲು ಸಮಿತಿ ರಚನೆಯಾಗಿದೆ.14-03-2023 ರಿಂದ ಇಲ್ಲಿಯವರೆಗೆ ಭೂ ಪರಿಹಾರವಾಗಿ ಬದಲಿ ನಿವೇಶನ ಹಂಚಿಕೆ,ತುಂಡು ಭೂಮಿ ಹಂಚಿಕೆ ವಿಷಯಕ್ಕೆ ಸಂಭಂಧಿಸಿದಂತೆ ಕ್ರಮ ವಹಿಸಿರುವ ಎಲ್ಲಾ ಪ್ರಕರಣಗಳ ಪ್ರಕರಣಾವಾರು ಮೂಲ ಕಡತಗಳನ್ನ ಸಲ್ಲಿಸುವಂತೆ ಮುಡಾ ಆಯುಕ್ತರಿಗೆ ಸೂಚಿಸಲಾಗಿತ್ತು.ಕಡತಗಳ ಪ್ರಮಾಣ ಹೆಚ್ಚಾದ ಕಾರಣ ಸಮಯದ ಕಾಲಾವಕಾಶ ಕೋರಿದ್ದರು.ಕಾಲಾವಕಾಶ ಪೂರ್ಣಗೊಂಡರೂ ಇದುವರೆಗೆ ಕಡತಗಳನ್ನ ಸಲ್ಲಿಸದ ಹಿನ್ನಲೆ ತನಿಖಾ ಸಮಿತಿಯ ಅಧ್ಯಕ್ಷರು ಹಾಗೂ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಮುಡಾ ಆಯುಕ್ತರಿಗೆ ಪತ್ರ ಬರೆದು 2 ದಿನಗಳ ಒಳಗೆ ಮೂಲ ಕಡತ,ಘನ ನ್ಯಾಯಾಲಯದ ಆದೇಶ,ಸರ್ಕಾರ ನಿಗದಿಪಡಿಸಿರುವ ನಿಯಮ ಹಾಗೂ ಕಾಯ್ದೆಗಳನ್ನೊಳಗೊಂಡ ಮಾಹಿತಿಯನ್ನ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.ಇಲ್ಲದಿದ್ದಲ್ಲಿ ವರದಿ ಸಲ್ಲಿಕೆಯಾಗಿಲ್ಲವೆಂಬ ಕಾರಣ ನೀಡಿ ಸರ್ಕಾರದ ಗಮನಕ್ಕೆ ತರುವುದಾಗಿ ಎಚ್ಚರಿಸಿದ್ದಾರೆ…

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *