ಮಹಿಳೆಯರ ದಾರಿ ದೀಪ ಸಾವಿತ್ರಿ ಬಾಯಿ ಪುಲೆ-ಭವ್ಯ ಬಾಲಸುಬ್ರಹ್ಮಣ್ಯಂ

ದೇಶದಲ್ಲಿ ಮೊದಲ ಬಾರಿಗೆ ಮಹಿಳೆಯರಿಗೆ ಅಕ್ಷರ ಜ್ಞಾನವನ್ನು ಉಣಪಡಿಸಿ ಶೋಷಿತರು ಮತ್ತು ಮಹಿಳೆಯರ ಏಳಿಗೆಗೆ ಶ್ರಮಿಸಿದವರು ಸಾವಿತ್ರಿಬಾಯಿ ಫುಲೆ. ಇವರು ಹೆಣ್ಣು ಮಕ್ಕಳಿಗೆ ದಾರಿದೀಪ ಎಂದು ಆಂಗ್ಲ ಭಾಷೆಯ ಉಪನ್ಯಾಸಕಿ ಭವ್ಯ ಬಾಲಸುಬ್ರಮಣ್ಯಂ ರವರು ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಾವಿತ್ರಿಬಾಯಿ ಪುಲೆ ರವರ ಜನ್ಮದಿನಾಚರಣೆಯನ್ನು ವಿಶೇಷ ಉಪನ್ಯಾಸ ನೀಡುತ್ತಾ ವಿದ್ಯಾರ್ಥಿಗಳಿಗೆ ಸಾವಿತ್ರಿ ಬಾಯಿ ಫುಲೆ ರವರ ಜೀವನ ಚಿತ್ರಣವನ್ನು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಹಿರಿಯ ಮಹಿಳಾ ಉಪನ್ಯಾಸಕಿ ಜುಡಿತ್ ಸಿಕ್ವೈರಾ ರವರು 19ನೇ ಶತಮಾನದ ಮಧ್ಯಭಾಗದಲ್ಲಿ ಹೆಣ್ಣು ಮಕ್ಕಳು ಶಿಕ್ಷಣಕ್ಕೆ ಕಣ್ಣಾದವರು. ಬದುಕಿನಲ್ಲಿ ಎಷ್ಟೇ ಅಡೆತಡೆಗಳು ಬಂದರೂ ಅಂದುಕೊಂಡಿದ್ದ ಗುರಿಯನ್ನು ಸಾಧಿಸಿದವರು. ಹೆಣ್ಣು ಮಕ್ಕಳಿಗೆ ಸಾವಿತ್ರಿಬಾಯಿ ಸ್ಫೂರ್ತಿಯ ಚೆಲುವೆ ಎಂದು ಹೇಳಿದರು . ದೇಶದ ಅನಕ್ಷರಸ್ಥ ಮಹಿಳೆಯರಿಗೆ ಅಕ್ಷರದ ಮಹತ್ವ ತಿಳಿಸಿದ ಭಾರತದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ರವರು ಇಂದು ಇಡೀ ಭಾರತಕ್ಕೆ ಮಾದರಿಯಾಗಿದ್ದಾರೆ. ಹಾಗಾಗಿ ನಮ್ಮ ಸಂಸ್ಥೆಯ ಎಲ್ಲಾ ಮಹಿಳಾ ಉಪನ್ಯಾಸಕರನ್ನು ಗೌರವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಹೇಳಿದ ಕಾಲೇಜಿನ ಪ್ರಾಂಶುಪಾಲರಾದ ಸಿ.ಆರ್ .ದಿನೇಶ್ ರವರು ಕಾಲೇಜಿನ ಎಲ್ಲಾ ಮಹಿಳಾ ಉಪನ್ಯಾಸಕರನ್ನು ಗೌರವಿಸುವ ಮೂಲಕ ಗೌರವ ಸೂಚಿಸಲಾಯಿತು .

ಉಪನ್ಯಾಸಕರಾದ ರಂಗಸ್ವಾಮಿ, ಡಾ.ಕೆ.ಮಾಲತಿ ಮತ್ತು ಹರೀಶ್ ರವರು ಕಾರ್ಯಕ್ರಮದ ಔಚಿತ್ಯದ ಬಗ್ಗೆ ಮಾತನಾಡಿದರು .
ಕಾರ್ಯಕ್ರಮದಲ್ಲಿ ಹಿರಿಯ ಉಪನ್ಯಾಸಕರಾದ ಅಶ್ವಥ್ ನಾರಾಯಣ ಗೌಡ ಮತ್ತು ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು. ಪ್ರಾರ್ಥನೆ ಬಿಂದು ಮತ್ತು ಕಾರ್ಯಕ್ರಮವನ್ನು ಡಾ. ಟಿ ಕೆ ರವಿ ನಿರೂಪಿಸಿದರು.

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *