ಮೈಸೂರು:ಡಾಕ್ಟರ್ ಕಿಡ್ನಾಪ್ ಪ್ರಕರಣ…9 ವರ್ಷಗಳ ನಂತರ ಅಪಹರಣಕಾರನ ಬಂಧನ…ಕುವೆಂಪುನಗರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

  • Crime
  • January 4, 2024
  • No Comment
  • 699

ಮೈಸೂರು:ಡಾಕ್ಟರ್ ಕಿಡ್ನಾಪ್ ಪ್ರಕರಣ…9 ವರ್ಷಗಳ ನಂತರ ಅಪಹರಣಕಾರನ ಬಂಧನ…ಕುವೆಂಪುನಗರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮೈಸೂರು,ಜ4,Tv10 ಕನ್ನಡ

2014 ರಲ್ಲಿ ವೈದ್ಯರೊಬ್ಬರನ್ನ ಅಪಹರಿಸಿ ಖಾಲಿ ಇರುವ ದಾಖಲೆ ಪತ್ರಗಳಿಗೆ ಸಹಿ ಹಾಕಿಸಿಕೊಂಡು 5,20,000/- ವಸೂಲಿ ಮಾಡಿ ಬಿಡುಗಡೆ ಮಾಡಿ ನಂತರ ತಲೆ ಮರೆಸಿಕೊಂಡಿದ್ದ ಆರೋಪಿಯನ್ನ ಬಂಧಿಸುವಲ್ಲಿ ಕುವೆಂಪುನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ದಟ್ಟಗಳ್ಳಿ ನಿವಾಸಿ ಫಣಿರಾಜ್ ಗೌಡ ಬಂಧಿತ ಆರೋಪಿ.2014 ರಲ್ಲಿ ಡಾ.ಮಹೇಶ್ ಎಂಬುವರನ್ನ ರಾಮಚಂದ್ರ.ಡಿ.ಹೆಗಡೆ ಎಂಬುವರ ನೆರವಿನಿಂದ ಬಲವಂತವಾಗಿ ಅಪಹರಿಸಿ ಕರೆದೊಯ್ದು ಖಾಲಿ ದಾಖಲಾತಿಗಳಿಗೆ ಸಹಿ ಹಾಕಿಸಿಕೊಂಡು ನಂತರ 20,000/- ರೂ ವಸೂಲಿ ಮಾಡಿದ್ದಾರೆ.ಮತ್ತೆ ಡಾ.ಮಹೇಶ್ ರವರನ್ನ ಮಂಗಳೂರಿನ ಅಂಕೋಲಾ ಗೆ ಕರೆದೊಯ್ದು ಒಮ್ಮೆ 2 ಲಕ್ಷ ಹಾಗೂ ಮತ್ತೊಮ್ಮೆ 3 ಲಕ್ಷ ಹಣ ವಸೂಲಿ ಮಾಡಿ ಬಿಡುಗಡೆ ಮಾಡಿದ್ದಾರೆ.ಇದನ್ನ ಪೊಲೀಸರಿಗೆ ತಿಳಿಸಿದ್ದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿದ ಕಾರಣ ಡಾ.ಮಹೇಶ್ ಕೆಲವು ದಿನ ಮೌನಕ್ಕೆ ಶರಣಾಗಿ ನಂತರ ನ್ಯಾಯಾಲಯದ ಮೊರೆ ಹೋಗಿ ಪಿಸಿಆರ್ ಸಂಖ್ಯೆ 2342/14 ಅನ್ವಯದಂತೆ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಫಣಿರಾಜ್ ಗೌಡ ತಲೆ ಮರೆಸಿಕೊಂಡಿದ್ದನೆಂದು ಹೇಳಲಾಗಿದ್ದು ಇತ್ತೀಚೆಗಷ್ಟೆ ಮೈಸೂರಿನ ದಟ್ಟಗಳ್ಳಿ ಬಡಾವಣೆಯಲ್ಲಿ ಮನೆ ಮಾಡಿ ವಾಸವಿದ್ದ ಮಾಹಿತಿ ಅರಿತ ಕುವೆಂಪುನಗರ ಠಾಣೆ ಪೊಲೀಸರು ಆರೋಪಿ ಫಣಿರಾಜ್ ಗೌಡ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನಿಶ್ಕಾ ವಿವಿದೋದ್ದೇಶ ಸೌಹಾರ್ಧ ಸಹಕಾರ ಸಂಘದ ನಿರ್ದೇಶಕನಾಗಿದ್ದ ಫಣಿರಾಜ್ ಗೌಡ ಸಾಕಷ್ಟು ಮಂದಿಗೆ ವಂಚಿಸಿರುವುದಾಗಿ ಬೆಳಕಿಗೆ ಬಂದಿದೆ.ಮೈಸೂರು,ಬೆಂಗಳೂರು,ಮಂಡ್ಯ,ತುಮಕೂರು ಸೇರಿದಂತೆ ಹಲವಾರು ಪೊಲೀಸ್ ಠಾಣೆಗಳಲ್ಲಿ ಈತನ ಮೇಲೆ ವಂಚನೆ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.ಮನಿ ಡಬ್ಲಿಂಗ್,ಬಡಾವಣೆ ನಿರ್ಮಿಸಿ ನಿವೇಶನ ಹಂಚುವುದು,ಟೀಕ್ ಮರಗಳ ಮೇಲೆ ಬಂಡವಾಳ ಹೂಡುವುದು ಸೇರಿದಂತೆ ಹಲವು ಆಮಿಷವೊಡ್ಡಿ ಕೋಟ್ಯಾಂತರ ರೂ ವಂಚಿಸಿರುವ ಆರೋಪ ಈತನ ಮೇಲಿದೆ.ಕೆಲವು ಪ್ರಕರಣಗಳಿಗೆ ಜಾಮೀನು ಪಡೆದಿರುವ ಈತ ಕೆಲವು ಪ್ರಕರಣಗಳಿಗೆ ವಾರೆಂಟ್ ಗಳಿವೆ.ಬಳ್ಳಾರಿ ಹಾಗೂ ಬೆಂಗಳೂರಿನಲ್ಲಿ ಜೈಲು ವಾಸ ಅನುಭವಿಸಿರುವ ಫಣಿರಾಜ್ ಗೌಡ ಕೆಲವೇ ದಿನಗಳ ಹಿಂದೆ ಬಿಡುಗಡೆಯಾಗಿ ಮೈಸೂರಿನ ದಟ್ಟಗಳ್ಳಿಯಲ್ಲಿ ವಾಸವಿದ್ದ. ಈ ಮಾಹಿತಿ ಅರಿತ ಕುವೆಂಪುನಗರ ಠಾಣೆ ಇನ್ಸ್ಪೆಕ್ಟರ್ ಅರುಣ್ ರವರು ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್,ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಯವರಾದ ಮುತ್ತುರಾಜ್,ಸಂಚಾರ ಮತ್ತು ಅಪರಾಧ ಡಿಸಿಪಿಯವರಾದ ಜಾಹ್ನವಿ ರವರ ಮಾರ್ಗದರ್ಶನದಲ್ಲಿ ಇನ್ಸಪೆಕ್ಟರ್ ಅರುಣ್ ರವರು ತಮ್ಮ ಸಿಬ್ಬಂದಿಗಳಾದ ಶೇಖರ್ ಹಾಗೂ ಸುರೇಶ್ ರವರೊಂದಿಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *