ಮೈಸೂರು:ಹೋಟೆಲ್ ಲೇಡಿ ಕ್ಯಾಶೀಯರ್ ಮೇಲೆ ಅತ್ಯಾಚಾರ…ಬೆತ್ತಲೆ ಫೋಟೋ,ವಿಡಿಯೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ಕೃತ್ಯ…ಪ್ರತಿಷ್ಠಿತ ಹೋಟೆಲ್ ನಲ್ಲಿ ಘಟನೆ…

  • Crime
  • January 5, 2024
  • No Comment
  • 1991

ಮೈಸೂರು,ಜ4,Tv10 ಕನ್ನಡ

ಮದುವೆ ಆಗುವುದಾಗಿ ನಂಬಿಸಿ ಯುವತಿಯ ಬೆತ್ತಲೆ ಫೋಟೋ ಹಾಗೂ ವಿಡಿಯೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ಅತ್ಯಾಚಾರ ಮಾಡಿದ ಘಟನೆ ಮೈಸೂರು ಬೆಂಗಳೂರು ರಸ್ತೆಯ ರಿಂಗ್ ರೋಡ್ ಬಳಿ ಇರುವ ಏಟ್ರಿಯಂ ಹೋಟೆಲ್ ನಲ್ಲಿ ನಡೆದಿದೆ.ಹೋಟೆಲ್ ಮ್ಯಾನೇಜ್ಮೆಂಟ್ ನಡೆಸುವ ಪ್ರೀತಂ ಪುರಾಣಿಕ್ ಮೇಲೆ ಅತ್ಯಾಚಾರ ಆರೋಪ ಮಾಡಲಾಗಿದೆ.ಪ್ರೀತಂ ಪುರಾಣಿಕ್ ಹಾಗೂ ಆತನ ತಂದೆ ಕೃಷ್ಣದಾಸ್ ಪುರಾಣಿಕ್ ಎಂಬುವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಎನ್.ಆರ್.ಪೊಲೀಸ್ ಠಾಣೆಯಲ್ಲಿ
ನೊಂದ ಯುವತಿ ಪ್ರೇಮಾ(27)(ಹೆಸರು ಬದಲಿಸಲಾಗಿದೆ) ಪ್ರಕರಣ ದಾಖಲಿಸಿದ್ದಾಳೆ.

ಕೆಲವು ವರ್ಷಗಳಿಂದ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದ ಪ್ರೇಮಾಳ ಜೊತೆ ಸಲುಗೆ ಬೆಳೆಸಿದ ಪ್ರೀತಂ ಪುರಾಣಿಕ್ ಮದುವೆ ಆಗುವುದಾಗಿ ನಂಬಿಸಿ ಬಲೆಗೆ ಹಾಕಿಕೊಂಡಿದ್ದ.ಹೋಟೆಲ್ ನಲ್ಲೇ ಇದ್ದ ಸ್ಪಾ ಒಂದರಲ್ಲಿ ಮದುವೆ ಆದ ಪ್ರೀತಂ ಪುರಾಣಿಕ್ ಯುವತಿಯ ಇಚ್ಛೆಗೆ ವಿರುದ್ದವಾಗಿ ದೈಹಿಕ ಸಂಪರ್ಕ ಬೆಳೆಸಿದ.ಇದರ ಫಲವಾಗಿ ಪ್ರೇಮ ಗರ್ಭವತಿಯಾಗಿದ್ದಳು.ಮದುವೆ ಆಗುವಂತೆ ಒತ್ತಾಯಿಸಿದಾಗ ಬಲವಂತವಾಗಿ ಮಾತ್ರೆ ತಿನ್ನಿಸಿ ಗರ್ಭಪಾತ ಮಾಡಿಸಿದ್ದ.ನಂತರದ ದಿನಗಳಲ್ಲಿ ಮತ್ತೆ ಮದುವೆ ಆಗುವ ನಾಟಕವಾಡಿ ಪ್ರೇಮಾಳ ಬೆತ್ತಲೆ ಫೋಟೋ ಹಾಗೂ ವಿಡಿಯೋಗಳನ್ನ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ದೈಹಿಕ ಸಂಪರ್ಕ ಬೆಳೆಸಿದ.ಪ್ರೇಮಾ ಮತ್ತೆ ಗರ್ಭವತಿಯಾಗಿದ್ದಾಳೆ.ಇದೀಗ ಮದುವೆ ಆಗುವಂತೆ ಒತ್ತಾಯಿಸಿದ ವೇಳೆ ಪ್ರೀತಂ ಪುರಾಣಿಕ್ ಹಾಗೂ ತಂದೆ ಕೃಷ್ಣದಾಸ್ ಪುರಾಣಿಕ್ ರವರು ಪ್ರೇಮಾಳಿಗೆ ಜಾತಿ ನಿಂದನೆ ಮಾಡಿ ಹೋಟೆಲ್ ನಿಂದ ಹೊರಗೆ ತಳ್ಳಿದ್ದಾರೆ.ಸಧ್ಯ ಗರ್ಭವತಿಯಾಗಿರುವ ಪ್ರೇಮಾ ತನ್ನನ್ನ ವಂಚಿಸಿದ ಪ್ರೀತಂ ಪುರಾಣಿಕ್ ಹಾಗೂ ಬೆಂಬಲ ನೀಡಿದ ತಂದೆ ಕೃಷ್ಣದಾಸ್ ಪುರಾಣಿಕ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಎನ್.ಆರ್.ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾಳೆ…

Spread the love

Related post

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…
ಮೈಸೂರು ಪೊಲೀಸ್ ಅಲರ್ಟ್…ರೌಡಿ ಪ್ರತಿಬಂಧಕ ದಳದಿಂದ ವಿಶೇಷ ಕಾರ್ಯಾಚರಣೆ…ಕಾನೂನು ಬಾಹಿರ ಚಟುವಟಿಕೆಗೆ ಬ್ರೇಕ್…400 ಕ್ಕೂ ಹೆಚ್ಚು ಪ್ರಕರಣ ದಾಖಲು…

ಮೈಸೂರು ಪೊಲೀಸ್ ಅಲರ್ಟ್…ರೌಡಿ ಪ್ರತಿಬಂಧಕ ದಳದಿಂದ ವಿಶೇಷ ಕಾರ್ಯಾಚರಣೆ…ಕಾನೂನು ಬಾಹಿರ ಚಟುವಟಿಕೆಗೆ…

ಮೈಸೂರು,ಅ12,Tv10 ಕನ್ನಡ ಇತ್ತೀಚೆಗೆ ನಡೆದ ಭೀಕರ ಕೊಲೆ ರೇಪ್ ಅಂಡ್ ಮರ್ಡರ್ ಮೈಸೂರು ಪೊಲೀಸರ ಕಾರ್ಯಚಟುವಟಿಕೆಯನ್ನ ಪ್ರಶ್ನಿಸುವಂತೆ ಮಾಡಿದೆ.ಕಾನೂನು ಬಾಹಿರ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಪೊಲೀಸ್ ಪಡೆ ಸನ್ನದ್ದಾಗಿ…

Leave a Reply

Your email address will not be published. Required fields are marked *