ಮೈಸೂರು:ಹೋಟೆಲ್ ಲೇಡಿ ಕ್ಯಾಶೀಯರ್ ಮೇಲೆ ಅತ್ಯಾಚಾರ…ಬೆತ್ತಲೆ ಫೋಟೋ,ವಿಡಿಯೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ಕೃತ್ಯ…ಪ್ರತಿಷ್ಠಿತ ಹೋಟೆಲ್ ನಲ್ಲಿ ಘಟನೆ…

  • Crime
  • January 5, 2024
  • No Comment
  • 2018

ಮೈಸೂರು,ಜ4,Tv10 ಕನ್ನಡ

ಮದುವೆ ಆಗುವುದಾಗಿ ನಂಬಿಸಿ ಯುವತಿಯ ಬೆತ್ತಲೆ ಫೋಟೋ ಹಾಗೂ ವಿಡಿಯೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ಅತ್ಯಾಚಾರ ಮಾಡಿದ ಘಟನೆ ಮೈಸೂರು ಬೆಂಗಳೂರು ರಸ್ತೆಯ ರಿಂಗ್ ರೋಡ್ ಬಳಿ ಇರುವ ಏಟ್ರಿಯಂ ಹೋಟೆಲ್ ನಲ್ಲಿ ನಡೆದಿದೆ.ಹೋಟೆಲ್ ಮ್ಯಾನೇಜ್ಮೆಂಟ್ ನಡೆಸುವ ಪ್ರೀತಂ ಪುರಾಣಿಕ್ ಮೇಲೆ ಅತ್ಯಾಚಾರ ಆರೋಪ ಮಾಡಲಾಗಿದೆ.ಪ್ರೀತಂ ಪುರಾಣಿಕ್ ಹಾಗೂ ಆತನ ತಂದೆ ಕೃಷ್ಣದಾಸ್ ಪುರಾಣಿಕ್ ಎಂಬುವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಎನ್.ಆರ್.ಪೊಲೀಸ್ ಠಾಣೆಯಲ್ಲಿ
ನೊಂದ ಯುವತಿ ಪ್ರೇಮಾ(27)(ಹೆಸರು ಬದಲಿಸಲಾಗಿದೆ) ಪ್ರಕರಣ ದಾಖಲಿಸಿದ್ದಾಳೆ.

ಕೆಲವು ವರ್ಷಗಳಿಂದ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದ ಪ್ರೇಮಾಳ ಜೊತೆ ಸಲುಗೆ ಬೆಳೆಸಿದ ಪ್ರೀತಂ ಪುರಾಣಿಕ್ ಮದುವೆ ಆಗುವುದಾಗಿ ನಂಬಿಸಿ ಬಲೆಗೆ ಹಾಕಿಕೊಂಡಿದ್ದ.ಹೋಟೆಲ್ ನಲ್ಲೇ ಇದ್ದ ಸ್ಪಾ ಒಂದರಲ್ಲಿ ಮದುವೆ ಆದ ಪ್ರೀತಂ ಪುರಾಣಿಕ್ ಯುವತಿಯ ಇಚ್ಛೆಗೆ ವಿರುದ್ದವಾಗಿ ದೈಹಿಕ ಸಂಪರ್ಕ ಬೆಳೆಸಿದ.ಇದರ ಫಲವಾಗಿ ಪ್ರೇಮ ಗರ್ಭವತಿಯಾಗಿದ್ದಳು.ಮದುವೆ ಆಗುವಂತೆ ಒತ್ತಾಯಿಸಿದಾಗ ಬಲವಂತವಾಗಿ ಮಾತ್ರೆ ತಿನ್ನಿಸಿ ಗರ್ಭಪಾತ ಮಾಡಿಸಿದ್ದ.ನಂತರದ ದಿನಗಳಲ್ಲಿ ಮತ್ತೆ ಮದುವೆ ಆಗುವ ನಾಟಕವಾಡಿ ಪ್ರೇಮಾಳ ಬೆತ್ತಲೆ ಫೋಟೋ ಹಾಗೂ ವಿಡಿಯೋಗಳನ್ನ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ದೈಹಿಕ ಸಂಪರ್ಕ ಬೆಳೆಸಿದ.ಪ್ರೇಮಾ ಮತ್ತೆ ಗರ್ಭವತಿಯಾಗಿದ್ದಾಳೆ.ಇದೀಗ ಮದುವೆ ಆಗುವಂತೆ ಒತ್ತಾಯಿಸಿದ ವೇಳೆ ಪ್ರೀತಂ ಪುರಾಣಿಕ್ ಹಾಗೂ ತಂದೆ ಕೃಷ್ಣದಾಸ್ ಪುರಾಣಿಕ್ ರವರು ಪ್ರೇಮಾಳಿಗೆ ಜಾತಿ ನಿಂದನೆ ಮಾಡಿ ಹೋಟೆಲ್ ನಿಂದ ಹೊರಗೆ ತಳ್ಳಿದ್ದಾರೆ.ಸಧ್ಯ ಗರ್ಭವತಿಯಾಗಿರುವ ಪ್ರೇಮಾ ತನ್ನನ್ನ ವಂಚಿಸಿದ ಪ್ರೀತಂ ಪುರಾಣಿಕ್ ಹಾಗೂ ಬೆಂಬಲ ನೀಡಿದ ತಂದೆ ಕೃಷ್ಣದಾಸ್ ಪುರಾಣಿಕ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಎನ್.ಆರ್.ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾಳೆ…

Spread the love

Related post

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ…

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ ಮೈಸೂರು:ಮೈಸೂರಿನಲ್ಲಿ 01/02/2026 ರಂದು ನಡೆದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ…
ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

*ಬಿಜಾಪುರ ಜಿಲ್ಲೆ ಇಂಡಿ ಪಟ್ಟಣದ ಅದ್ಭುತ ಪ್ರತಿಭೆ ತಮ್ಮ ರಾಷ್ಟ್ರಮಟ್ಟದ ಬಹು ಪ್ರಶಸ್ತಿಗಳ ಮೂಲಕ ದೇಶಕ್ಕೆ ನಾಡಿಗೆ ಮತ್ತೆ ಹುಟ್ಟುರಿಗೆ ಕೀರ್ತಿ ತಂದಿದ್ದಾರೆ ಚೇತನ ಬಸವರಾಜ ಮೂರಮನ ಕ್ಷಮಿಸಿ…
ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ…

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ… ನಂಜನಗೂಡು,ಜ31,Tv10 ಕನ್ನಡ ಗ್ರಾಮದ ಫೋಕಸ್ ಲೈಟ್…

Leave a Reply

Your email address will not be published. Required fields are marked *