ಮೈಸೂರು:ಹೋಟೆಲ್ ಲೇಡಿ ಕ್ಯಾಶೀಯರ್ ಮೇಲೆ ಅತ್ಯಾಚಾರ…ಬೆತ್ತಲೆ ಫೋಟೋ,ವಿಡಿಯೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ಕೃತ್ಯ…ಪ್ರತಿಷ್ಠಿತ ಹೋಟೆಲ್ ನಲ್ಲಿ ಘಟನೆ…

  • Crime
  • January 5, 2024
  • No Comment
  • 1962

ಮೈಸೂರು,ಜ4,Tv10 ಕನ್ನಡ

ಮದುವೆ ಆಗುವುದಾಗಿ ನಂಬಿಸಿ ಯುವತಿಯ ಬೆತ್ತಲೆ ಫೋಟೋ ಹಾಗೂ ವಿಡಿಯೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ಅತ್ಯಾಚಾರ ಮಾಡಿದ ಘಟನೆ ಮೈಸೂರು ಬೆಂಗಳೂರು ರಸ್ತೆಯ ರಿಂಗ್ ರೋಡ್ ಬಳಿ ಇರುವ ಏಟ್ರಿಯಂ ಹೋಟೆಲ್ ನಲ್ಲಿ ನಡೆದಿದೆ.ಹೋಟೆಲ್ ಮ್ಯಾನೇಜ್ಮೆಂಟ್ ನಡೆಸುವ ಪ್ರೀತಂ ಪುರಾಣಿಕ್ ಮೇಲೆ ಅತ್ಯಾಚಾರ ಆರೋಪ ಮಾಡಲಾಗಿದೆ.ಪ್ರೀತಂ ಪುರಾಣಿಕ್ ಹಾಗೂ ಆತನ ತಂದೆ ಕೃಷ್ಣದಾಸ್ ಪುರಾಣಿಕ್ ಎಂಬುವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಎನ್.ಆರ್.ಪೊಲೀಸ್ ಠಾಣೆಯಲ್ಲಿ
ನೊಂದ ಯುವತಿ ಪ್ರೇಮಾ(27)(ಹೆಸರು ಬದಲಿಸಲಾಗಿದೆ) ಪ್ರಕರಣ ದಾಖಲಿಸಿದ್ದಾಳೆ.

ಕೆಲವು ವರ್ಷಗಳಿಂದ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದ ಪ್ರೇಮಾಳ ಜೊತೆ ಸಲುಗೆ ಬೆಳೆಸಿದ ಪ್ರೀತಂ ಪುರಾಣಿಕ್ ಮದುವೆ ಆಗುವುದಾಗಿ ನಂಬಿಸಿ ಬಲೆಗೆ ಹಾಕಿಕೊಂಡಿದ್ದ.ಹೋಟೆಲ್ ನಲ್ಲೇ ಇದ್ದ ಸ್ಪಾ ಒಂದರಲ್ಲಿ ಮದುವೆ ಆದ ಪ್ರೀತಂ ಪುರಾಣಿಕ್ ಯುವತಿಯ ಇಚ್ಛೆಗೆ ವಿರುದ್ದವಾಗಿ ದೈಹಿಕ ಸಂಪರ್ಕ ಬೆಳೆಸಿದ.ಇದರ ಫಲವಾಗಿ ಪ್ರೇಮ ಗರ್ಭವತಿಯಾಗಿದ್ದಳು.ಮದುವೆ ಆಗುವಂತೆ ಒತ್ತಾಯಿಸಿದಾಗ ಬಲವಂತವಾಗಿ ಮಾತ್ರೆ ತಿನ್ನಿಸಿ ಗರ್ಭಪಾತ ಮಾಡಿಸಿದ್ದ.ನಂತರದ ದಿನಗಳಲ್ಲಿ ಮತ್ತೆ ಮದುವೆ ಆಗುವ ನಾಟಕವಾಡಿ ಪ್ರೇಮಾಳ ಬೆತ್ತಲೆ ಫೋಟೋ ಹಾಗೂ ವಿಡಿಯೋಗಳನ್ನ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ದೈಹಿಕ ಸಂಪರ್ಕ ಬೆಳೆಸಿದ.ಪ್ರೇಮಾ ಮತ್ತೆ ಗರ್ಭವತಿಯಾಗಿದ್ದಾಳೆ.ಇದೀಗ ಮದುವೆ ಆಗುವಂತೆ ಒತ್ತಾಯಿಸಿದ ವೇಳೆ ಪ್ರೀತಂ ಪುರಾಣಿಕ್ ಹಾಗೂ ತಂದೆ ಕೃಷ್ಣದಾಸ್ ಪುರಾಣಿಕ್ ರವರು ಪ್ರೇಮಾಳಿಗೆ ಜಾತಿ ನಿಂದನೆ ಮಾಡಿ ಹೋಟೆಲ್ ನಿಂದ ಹೊರಗೆ ತಳ್ಳಿದ್ದಾರೆ.ಸಧ್ಯ ಗರ್ಭವತಿಯಾಗಿರುವ ಪ್ರೇಮಾ ತನ್ನನ್ನ ವಂಚಿಸಿದ ಪ್ರೀತಂ ಪುರಾಣಿಕ್ ಹಾಗೂ ಬೆಂಬಲ ನೀಡಿದ ತಂದೆ ಕೃಷ್ಣದಾಸ್ ಪುರಾಣಿಕ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಎನ್.ಆರ್.ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾಳೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *