ವರುಣಾ ನಾಲೆಗೆ ಸೇರಿದ ಜಾಗವನ್ನೇ ಮಾರಾಟ ಮಾಡಿದ ಭೂಪ…ಭೂಗಳ್ಳನ ವಿರುದ್ದ ಎಫ್.ಐ.ಆರ್.ದಾಖಲು…

  • Crime
  • January 7, 2024
  • No Comment
  • 436

ಮಂಡ್ಯ,ಜ8,Tv10 ಕನ್ನಡ

ವರುಣ ನಾಲೆಗೆ ಸೇರಿದ ಜಾಗವನ್ನ ಜಾಗವನ್ನು ಅಕ್ರಮಿಸಿಕೊಂಡು ಮಾರಾಟ ಮಾಡಿದ ಭೂಗಳ್ಳನ ವಿರುದ್ದ ಕೆ.ಆರ್.ಎಸ್.ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್.ದಾಖಲಾಗಿದೆ.
ವೀರಭದ್ರಯ್ಯ ಎಂಬುವರ ವಿರುದ್ದ ಎಫ್.ಐ.ಆರ್.ದಾಖಲಾಗಿದೆ.ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಹೋಬಳಿಯ ಬೆಳಗೊಳ ಗ್ರಾಮದ ಸರ್ವೆ ನಂ‌44 ರ 2 ಎಕರೆ 13 ಗುಂಟೆ ಜಮೀನಿನಲ್ಲಿ 14 ಗುಂಟೆ ಜಮೀನನ್ನ ಕಾವೇರಿ ನೀರಾವರಿ ನಿಗಮವು 1990ರಲ್ಲಿ ಪರಿಹಾರ ನೀಡಿ ಭೂ ಸ್ವಾದೀನ ಪಡಿಸಿ ಕೊಂಡು ವರುಣ ನಾಲೆ ನಿರ್ಮಾಣವಾಗಿದೆ. ಈ ಮಾಹಿತಿಯನ್ನ ಮರೆ ಮಾಚಿದ ಭೂಮಾಲಿಕ ವೀರಭದ್ರಯ್ಯ ಕಂದಾಯ ಅಧಿಕಾರಿಗಳ ಜೊತೆ ಶಾಮೀಲಾಗಿ ಭೂ ಸ್ವಾದೀನವಾಗಿದ್ದ ಜಮೀನನ್ನು ಸೇರಿಸಿ ಅನ್ಯ ಕ್ರಾಂತ ಮಾಡಿಸಿಕೊಂಡು ಬಡಾವಣೆ ನಿರ್ಮಿಸಿ ಮಾರಾಟ ಮಾಡಿದ್ದಾನೆ.ಈ ಸಂಭಂಧ ಮೈಸೂರು ಮೂಲದ ವಕೀಲರಾದ ಮಹೇಶ್ ಎಸ್ ರವರು ದಾಖಲೆ ಸಮೇತ ನೀಡಿದ ದೂರನ್ನ ಜಿಲ್ಲಾಧಿಕಾರಿ ಗಳು ಪರಿಶೀಲಿಸಿದ ನಂತರ ಅಕ್ರಮ ಎಂದು ಸಾಬೀತಾದ ಹಿನ್ನಲೆ ವೀರಭದ್ರನ ವಿರುದ್ದ ಕೆ.ಆರ್ ಎಸ್ ಪೋಲಿಸ್ ಠಾಣೆ ಯಲ್ಲಿ ತಹಸೀಲ್ದಾರ್ ಆದೇಶದ ಮೇರೆಗೆ ಎಫ್ ಐ ಆರ್ ದಾಖಲು ಮಾಡಿದ್ದಾರೆ. ಕಂದಾಯ ಅಧಿಕಾರ ಗಳ ವಿರುದ್ದ ದೋಷಾರೋಪ ಪಟ್ಟಿಯನ್ನು ಸಲ್ಲಿಸಿರುತ್ತಾರೆ .
ಆದರೆ ಈ ಅಕ್ರಮದಲ್ಲಿ ಬಾಗಿಯಾಗಿದ್ದ ಅಂದಿನ ಶಿರಸ್ತೆದಾರ್, ಎಡಿಎಲ್ ಆರ್, ಸರ್ವೆಯರ್ ಹಾಗೂ ಸರ್ವೆ ಸೂರ್ ವೈಸರ್ ಗಳನ್ನ ಪ್ರಕರಣದಿಂದ ಕೈ ಬಿಟ್ಟಿರುವುದು ಅನುಮಾನಕ್ಕೆ ಕಾರಣವಾಗಿದೆ.. ಈ ಅಕ್ರಮದಲ್ಲಿ ಬಾಗಿಯಾಗಿರುವ ಸಿಬ್ಬಂದಿಗಳ ವಿರುದ್ದ ಕೆ.ಸಿ ಎಸ್ ಆರ್ ರ ಪ್ರಕಾರ ಕ್ರಮ ಜರುಗಿಸುವಂತೆ ಬೆಳಗೊಳ ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ…
ಅಂದಿನ ಬೆಳಗೊಳ ವ್ಯಾಪ್ತಿಯ ರಾಜಸ್ವ ನಿರೀಕ್ಷಕ ಜಯರಾಮಮೂರ್ತಿ, ಗ್ರಾಮ ಲೆಕ್ಕಿಗ ಪುಟ್ಟಸ್ವಾಮಿ, ನಗರ ಮತ್ತು ಗ್ರಾಮಾಂತರ ಯೋಜನಾ ಶಾಖೆಯ ಸಹಾಯಕ ನಿರ್ದೇಶಕರ ಬಾಲಗಂಗಾಧರ ವಿರುದ್ಧ ಶಿಸ್ತುಕ್ರಮಕ್ಕಾಗಿ ಅನುಬಂಧ ೧-೪ ರಂತೆ ದೋಷಾರೋಪಣ ಪಟ್ಟಿ ಸಿದ್ದಪಡಿಸಲು ಮಂಡ್ಯ ಜಿಲ್ಲಾಧಿಕಾರಿ ಗಳು ಶ್ರೀರಂಗಪಟ್ಟಣ ತಾಲ್ಲೋಕು ತಹಶೀಲ್ದಾರ್ ರವರಿಗೆ ಆದೇಶ ಮಾಡಿದ್ದಾರೆ.

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *