ವರುಣಾ ನಾಲೆಗೆ ಸೇರಿದ ಜಾಗವನ್ನೇ ಮಾರಾಟ ಮಾಡಿದ ಭೂಪ…ಭೂಗಳ್ಳನ ವಿರುದ್ದ ಎಫ್.ಐ.ಆರ್.ದಾಖಲು…

  • Crime
  • January 7, 2024
  • No Comment
  • 492

ಮಂಡ್ಯ,ಜ8,Tv10 ಕನ್ನಡ

ವರುಣ ನಾಲೆಗೆ ಸೇರಿದ ಜಾಗವನ್ನ ಜಾಗವನ್ನು ಅಕ್ರಮಿಸಿಕೊಂಡು ಮಾರಾಟ ಮಾಡಿದ ಭೂಗಳ್ಳನ ವಿರುದ್ದ ಕೆ.ಆರ್.ಎಸ್.ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್.ದಾಖಲಾಗಿದೆ.
ವೀರಭದ್ರಯ್ಯ ಎಂಬುವರ ವಿರುದ್ದ ಎಫ್.ಐ.ಆರ್.ದಾಖಲಾಗಿದೆ.ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಹೋಬಳಿಯ ಬೆಳಗೊಳ ಗ್ರಾಮದ ಸರ್ವೆ ನಂ‌44 ರ 2 ಎಕರೆ 13 ಗುಂಟೆ ಜಮೀನಿನಲ್ಲಿ 14 ಗುಂಟೆ ಜಮೀನನ್ನ ಕಾವೇರಿ ನೀರಾವರಿ ನಿಗಮವು 1990ರಲ್ಲಿ ಪರಿಹಾರ ನೀಡಿ ಭೂ ಸ್ವಾದೀನ ಪಡಿಸಿ ಕೊಂಡು ವರುಣ ನಾಲೆ ನಿರ್ಮಾಣವಾಗಿದೆ. ಈ ಮಾಹಿತಿಯನ್ನ ಮರೆ ಮಾಚಿದ ಭೂಮಾಲಿಕ ವೀರಭದ್ರಯ್ಯ ಕಂದಾಯ ಅಧಿಕಾರಿಗಳ ಜೊತೆ ಶಾಮೀಲಾಗಿ ಭೂ ಸ್ವಾದೀನವಾಗಿದ್ದ ಜಮೀನನ್ನು ಸೇರಿಸಿ ಅನ್ಯ ಕ್ರಾಂತ ಮಾಡಿಸಿಕೊಂಡು ಬಡಾವಣೆ ನಿರ್ಮಿಸಿ ಮಾರಾಟ ಮಾಡಿದ್ದಾನೆ.ಈ ಸಂಭಂಧ ಮೈಸೂರು ಮೂಲದ ವಕೀಲರಾದ ಮಹೇಶ್ ಎಸ್ ರವರು ದಾಖಲೆ ಸಮೇತ ನೀಡಿದ ದೂರನ್ನ ಜಿಲ್ಲಾಧಿಕಾರಿ ಗಳು ಪರಿಶೀಲಿಸಿದ ನಂತರ ಅಕ್ರಮ ಎಂದು ಸಾಬೀತಾದ ಹಿನ್ನಲೆ ವೀರಭದ್ರನ ವಿರುದ್ದ ಕೆ.ಆರ್ ಎಸ್ ಪೋಲಿಸ್ ಠಾಣೆ ಯಲ್ಲಿ ತಹಸೀಲ್ದಾರ್ ಆದೇಶದ ಮೇರೆಗೆ ಎಫ್ ಐ ಆರ್ ದಾಖಲು ಮಾಡಿದ್ದಾರೆ. ಕಂದಾಯ ಅಧಿಕಾರ ಗಳ ವಿರುದ್ದ ದೋಷಾರೋಪ ಪಟ್ಟಿಯನ್ನು ಸಲ್ಲಿಸಿರುತ್ತಾರೆ .
ಆದರೆ ಈ ಅಕ್ರಮದಲ್ಲಿ ಬಾಗಿಯಾಗಿದ್ದ ಅಂದಿನ ಶಿರಸ್ತೆದಾರ್, ಎಡಿಎಲ್ ಆರ್, ಸರ್ವೆಯರ್ ಹಾಗೂ ಸರ್ವೆ ಸೂರ್ ವೈಸರ್ ಗಳನ್ನ ಪ್ರಕರಣದಿಂದ ಕೈ ಬಿಟ್ಟಿರುವುದು ಅನುಮಾನಕ್ಕೆ ಕಾರಣವಾಗಿದೆ.. ಈ ಅಕ್ರಮದಲ್ಲಿ ಬಾಗಿಯಾಗಿರುವ ಸಿಬ್ಬಂದಿಗಳ ವಿರುದ್ದ ಕೆ.ಸಿ ಎಸ್ ಆರ್ ರ ಪ್ರಕಾರ ಕ್ರಮ ಜರುಗಿಸುವಂತೆ ಬೆಳಗೊಳ ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ…
ಅಂದಿನ ಬೆಳಗೊಳ ವ್ಯಾಪ್ತಿಯ ರಾಜಸ್ವ ನಿರೀಕ್ಷಕ ಜಯರಾಮಮೂರ್ತಿ, ಗ್ರಾಮ ಲೆಕ್ಕಿಗ ಪುಟ್ಟಸ್ವಾಮಿ, ನಗರ ಮತ್ತು ಗ್ರಾಮಾಂತರ ಯೋಜನಾ ಶಾಖೆಯ ಸಹಾಯಕ ನಿರ್ದೇಶಕರ ಬಾಲಗಂಗಾಧರ ವಿರುದ್ಧ ಶಿಸ್ತುಕ್ರಮಕ್ಕಾಗಿ ಅನುಬಂಧ ೧-೪ ರಂತೆ ದೋಷಾರೋಪಣ ಪಟ್ಟಿ ಸಿದ್ದಪಡಿಸಲು ಮಂಡ್ಯ ಜಿಲ್ಲಾಧಿಕಾರಿ ಗಳು ಶ್ರೀರಂಗಪಟ್ಟಣ ತಾಲ್ಲೋಕು ತಹಶೀಲ್ದಾರ್ ರವರಿಗೆ ಆದೇಶ ಮಾಡಿದ್ದಾರೆ.

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *