ನಾಡಕಚೇರಿ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಪ್ರಕರಣ…ಉಪತಹಸೀಲ್ದಾರ್ ಶಿವಕುಮಾರ್ ಸಸ್ಪೆಂಡ್…ಪ್ರಾದೇಶಿಕ ಆಯುಕ್ತರ ಆದೇಶ…

ಮೈಸೂರು,ಜ8,Tv10 ಕನ್ನಡ

ನಿರಂತರ ಕಿರುಕುಳದಿಂದ ಬೇಸತ್ತು ಡೆತ್ ನೋಟ್ ಬರೆದು ಹುಲ್ಲಹಳ್ಳಿ ನಾಡಕಚೇರಿಯಲ್ಲಿ ಆತ್ಮಹತ್ಯೆಗೆ ಶರಣಾದ ಕಂಪ್ಯೂಟರ್ ಆಪರೇಟರ್ ಪರಮೇಶ್ ಪ್ರಕರಣಕ್ಕೆ ಸಂಭಂಧಿಸಿದಂತೆ ಆರೋಪ ಎದುರಿಸುತ್ತಿರುವ ಉಪತಹಸೀಲ್ದಾರ್ ಶಿವಕುಮಾರ್ ರವರನ್ನ ಸಸ್ಪೆಂಡ್ ಮಾಡಲಾಗಿದೆ.ಪ್ರಾದೇಶಿಕ ಆಯುಕ್ತರಾದ ಡಾ.ಜಿ.ಸಿ.ಪ್ರಕಾಶ್ ರವರು ಅಮಾನತ್ತಿನ ಆದೇಶ ಹೊರಡಿಸಿದ್ದಾರೆ.

ಜನವರಿ 7 ಭಾನುವಾರದಂದು ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ನಾಡಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿರುವ ಪರಮೇಶ್ ರವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.ತನ್ನ ಸಾವಿಗೆ ಉಪತಹಸೀಲ್ದಾರ್ ಶಿವಕುಮಾರ್ ನೀಡುತ್ತಿರುವ ಕಿರುಕುಳ ಕಾರಣ ಎಂದು ಡೆತ್ ನೋಟ್ ನಲ್ಲಿ ಬರೆದು ವಾಟ್ಸ್ ಅಪ್ ಸ್ಟೇಟಸ್ ನಲ್ಲಿ ಹಾಕಿ ವಿಷ ಸೇವಿಸಿದ್ದರು.ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ಪರಮೇಶ್ ಸಾವನ್ನಪ್ಪಿದ್ದರು.ಇಂದು ಶವಾಗಾರಕ್ಕೆ ನಂಜನಗೂಡು ಶಾಸಕ ದರ್ಶನ್ ಧ್ರವನಾರಾಯಣ್ ಹಾಗೂ ಜಿಲ್ಲಾಧಿಕಾರಿ ಡಾ.ರಾಜೇಂದ್ರ ರವರು ಭೇಟಿ ನೀಡಿದ್ದರು.ಈ ವೇಳೆ ಉಪತಹಸೀಲ್ದಾರ್ ಮೇಲೆ ಕ್ರಮ ಕೈಗೊಳ್ಳುವಂತೆ ಮೃತರ ಕುಟುಂಬಸ್ಥರು ಒತ್ತಾಯಿಸಿದ್ದರು.ಅಲ್ಲದೆ ಶಾಸಕ ದರ್ಶನ್ ಧೃವನಾರಾಯಣ್ ಸಹ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದರು.ಈ ಹಿನ್ನಲೆ ಕ್ರಮಕ್ಕೆ ಮುಂದಾದ ಪ್ರಾದೇಶಿಕ ಆಯುಕ್ತರಾದ ಡಾ.ಜಿ.ಸಿ.ಪ್ರಕಾಶ್ ರವರು ಉಪತಹಸೀಲ್ದಾರ್ ಶಿವಕುಮಾರ್ ರನ್ನ ಅಮಾನತ್ತು ಪಡಿಸಿ ಆದೇಶ ಪ್ರಕಟಿಸಿದ್ದಾರೆ…

Spread the love

Related post

ಕಳುವು ಮಾಲು ಮಾರಾಟ ಮಾಡಲು ಸಹಕರಿಸಿದ ಪ್ರಕರಣ…ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು ಸಸ್ಪೆಂಡ್…

ಕಳುವು ಮಾಲು ಮಾರಾಟ ಮಾಡಲು ಸಹಕರಿಸಿದ ಪ್ರಕರಣ…ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು…

ಮೈಸೂರು,ಸೆ7,Tv10 ಕನ್ನಡ ಕಳುವು ಮಾಡಿದ ಚಿನ್ನಾಭರಣಗಳನ್ನ ಮಾರಾಟ ಮಾಡಲು ಸಹಕರಿಸಿದ ಆರೋಪದ ಮೇಲೆ ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು ಅಮಾನತುಪಡಿಸಿ ಆದೇಶ ಹೊರಡಿಸಲಾಗಿದೆ.ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್…
ಕೊಲೆ ಆರೋಪಿ ಅಂದರ್…ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಕೊಲೆ ಆರೋಪಿ ಅಂದರ್…ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ನಂಜನಗೂಡು,ಸೆ7,Tv10 ಕನ್ನಡ ಅಕ್ರಮ ಸಂಭಂಧ ಹಿನ್ನಲೆ ವ್ಯಕ್ತಿಯನ್ನ ಮೊಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನ ಸೆರೆ ಹಿಡಿಯುವಲ್ಲಿ ನಂಜನಗೂಡು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.ಮಹದೇವ ಶೆಟ್ಟಿ (45) ಬಂಧಿತ…
ಗೌರಿಗಣೇಶ ಹಬ್ಬ ಹಿನ್ನೆಲೆ: ದಸರಾ ಆನೆಗಳಿಗೆ ವಿಶೇಷ ಪೂಜೆ …

ಗೌರಿಗಣೇಶ ಹಬ್ಬ ಹಿನ್ನೆಲೆ: ದಸರಾ ಆನೆಗಳಿಗೆ ವಿಶೇಷ ಪೂಜೆ …

ಮೈಸೂರು,ಸೆ7,Tv10 ಕನ್ನಡಗೌರಿ ಗಣೇಶ ಹಬ್ಬವಾದ ಇಂದು ಅರಮನೆ ಆವರಣದಲ್ಲಿ ವಾಸ್ತವ್ಯ ಹೂಡಿರುವ ದಸರಾ ಗಜಪಡೆಗೆ ವಿಶೇಷ ಪೂಜೆ ನೆರವೇರಿಸಲಾಯಿತು.ಅಭಿಮನ್ಯು ನೇತೃತ್ವದ ಎಲ್ಲಾ ಹದಿನಾಲ್ಕು ಆನೆಗಳಿಗೂ ಪೂಜೆ ನೆರವೇರಿಸಲಾಯಿತು.ಮೈಸೂರು ಜಿಲ್ಲಾಧಿಕಾರಿ…

Leave a Reply

Your email address will not be published. Required fields are marked *