ನಾಡಕಚೇರಿ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಪ್ರಕರಣ…ಉಪತಹಸೀಲ್ದಾರ್ ಶಿವಕುಮಾರ್ ಸಸ್ಪೆಂಡ್…ಪ್ರಾದೇಶಿಕ ಆಯುಕ್ತರ ಆದೇಶ…

ಮೈಸೂರು,ಜ8,Tv10 ಕನ್ನಡ

ನಿರಂತರ ಕಿರುಕುಳದಿಂದ ಬೇಸತ್ತು ಡೆತ್ ನೋಟ್ ಬರೆದು ಹುಲ್ಲಹಳ್ಳಿ ನಾಡಕಚೇರಿಯಲ್ಲಿ ಆತ್ಮಹತ್ಯೆಗೆ ಶರಣಾದ ಕಂಪ್ಯೂಟರ್ ಆಪರೇಟರ್ ಪರಮೇಶ್ ಪ್ರಕರಣಕ್ಕೆ ಸಂಭಂಧಿಸಿದಂತೆ ಆರೋಪ ಎದುರಿಸುತ್ತಿರುವ ಉಪತಹಸೀಲ್ದಾರ್ ಶಿವಕುಮಾರ್ ರವರನ್ನ ಸಸ್ಪೆಂಡ್ ಮಾಡಲಾಗಿದೆ.ಪ್ರಾದೇಶಿಕ ಆಯುಕ್ತರಾದ ಡಾ.ಜಿ.ಸಿ.ಪ್ರಕಾಶ್ ರವರು ಅಮಾನತ್ತಿನ ಆದೇಶ ಹೊರಡಿಸಿದ್ದಾರೆ.

ಜನವರಿ 7 ಭಾನುವಾರದಂದು ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ನಾಡಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿರುವ ಪರಮೇಶ್ ರವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.ತನ್ನ ಸಾವಿಗೆ ಉಪತಹಸೀಲ್ದಾರ್ ಶಿವಕುಮಾರ್ ನೀಡುತ್ತಿರುವ ಕಿರುಕುಳ ಕಾರಣ ಎಂದು ಡೆತ್ ನೋಟ್ ನಲ್ಲಿ ಬರೆದು ವಾಟ್ಸ್ ಅಪ್ ಸ್ಟೇಟಸ್ ನಲ್ಲಿ ಹಾಕಿ ವಿಷ ಸೇವಿಸಿದ್ದರು.ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ಪರಮೇಶ್ ಸಾವನ್ನಪ್ಪಿದ್ದರು.ಇಂದು ಶವಾಗಾರಕ್ಕೆ ನಂಜನಗೂಡು ಶಾಸಕ ದರ್ಶನ್ ಧ್ರವನಾರಾಯಣ್ ಹಾಗೂ ಜಿಲ್ಲಾಧಿಕಾರಿ ಡಾ.ರಾಜೇಂದ್ರ ರವರು ಭೇಟಿ ನೀಡಿದ್ದರು.ಈ ವೇಳೆ ಉಪತಹಸೀಲ್ದಾರ್ ಮೇಲೆ ಕ್ರಮ ಕೈಗೊಳ್ಳುವಂತೆ ಮೃತರ ಕುಟುಂಬಸ್ಥರು ಒತ್ತಾಯಿಸಿದ್ದರು.ಅಲ್ಲದೆ ಶಾಸಕ ದರ್ಶನ್ ಧೃವನಾರಾಯಣ್ ಸಹ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದರು.ಈ ಹಿನ್ನಲೆ ಕ್ರಮಕ್ಕೆ ಮುಂದಾದ ಪ್ರಾದೇಶಿಕ ಆಯುಕ್ತರಾದ ಡಾ.ಜಿ.ಸಿ.ಪ್ರಕಾಶ್ ರವರು ಉಪತಹಸೀಲ್ದಾರ್ ಶಿವಕುಮಾರ್ ರನ್ನ ಅಮಾನತ್ತು ಪಡಿಸಿ ಆದೇಶ ಪ್ರಕಟಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *