ನಾಡಕಚೇರಿ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಪ್ರಕರಣ…ಉಪತಹಸೀಲ್ದಾರ್ ಶಿವಕುಮಾರ್ ಸಸ್ಪೆಂಡ್…ಪ್ರಾದೇಶಿಕ ಆಯುಕ್ತರ ಆದೇಶ…

ಮೈಸೂರು,ಜ8,Tv10 ಕನ್ನಡ

ನಿರಂತರ ಕಿರುಕುಳದಿಂದ ಬೇಸತ್ತು ಡೆತ್ ನೋಟ್ ಬರೆದು ಹುಲ್ಲಹಳ್ಳಿ ನಾಡಕಚೇರಿಯಲ್ಲಿ ಆತ್ಮಹತ್ಯೆಗೆ ಶರಣಾದ ಕಂಪ್ಯೂಟರ್ ಆಪರೇಟರ್ ಪರಮೇಶ್ ಪ್ರಕರಣಕ್ಕೆ ಸಂಭಂಧಿಸಿದಂತೆ ಆರೋಪ ಎದುರಿಸುತ್ತಿರುವ ಉಪತಹಸೀಲ್ದಾರ್ ಶಿವಕುಮಾರ್ ರವರನ್ನ ಸಸ್ಪೆಂಡ್ ಮಾಡಲಾಗಿದೆ.ಪ್ರಾದೇಶಿಕ ಆಯುಕ್ತರಾದ ಡಾ.ಜಿ.ಸಿ.ಪ್ರಕಾಶ್ ರವರು ಅಮಾನತ್ತಿನ ಆದೇಶ ಹೊರಡಿಸಿದ್ದಾರೆ.

ಜನವರಿ 7 ಭಾನುವಾರದಂದು ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ನಾಡಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿರುವ ಪರಮೇಶ್ ರವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.ತನ್ನ ಸಾವಿಗೆ ಉಪತಹಸೀಲ್ದಾರ್ ಶಿವಕುಮಾರ್ ನೀಡುತ್ತಿರುವ ಕಿರುಕುಳ ಕಾರಣ ಎಂದು ಡೆತ್ ನೋಟ್ ನಲ್ಲಿ ಬರೆದು ವಾಟ್ಸ್ ಅಪ್ ಸ್ಟೇಟಸ್ ನಲ್ಲಿ ಹಾಕಿ ವಿಷ ಸೇವಿಸಿದ್ದರು.ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ಪರಮೇಶ್ ಸಾವನ್ನಪ್ಪಿದ್ದರು.ಇಂದು ಶವಾಗಾರಕ್ಕೆ ನಂಜನಗೂಡು ಶಾಸಕ ದರ್ಶನ್ ಧ್ರವನಾರಾಯಣ್ ಹಾಗೂ ಜಿಲ್ಲಾಧಿಕಾರಿ ಡಾ.ರಾಜೇಂದ್ರ ರವರು ಭೇಟಿ ನೀಡಿದ್ದರು.ಈ ವೇಳೆ ಉಪತಹಸೀಲ್ದಾರ್ ಮೇಲೆ ಕ್ರಮ ಕೈಗೊಳ್ಳುವಂತೆ ಮೃತರ ಕುಟುಂಬಸ್ಥರು ಒತ್ತಾಯಿಸಿದ್ದರು.ಅಲ್ಲದೆ ಶಾಸಕ ದರ್ಶನ್ ಧೃವನಾರಾಯಣ್ ಸಹ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದರು.ಈ ಹಿನ್ನಲೆ ಕ್ರಮಕ್ಕೆ ಮುಂದಾದ ಪ್ರಾದೇಶಿಕ ಆಯುಕ್ತರಾದ ಡಾ.ಜಿ.ಸಿ.ಪ್ರಕಾಶ್ ರವರು ಉಪತಹಸೀಲ್ದಾರ್ ಶಿವಕುಮಾರ್ ರನ್ನ ಅಮಾನತ್ತು ಪಡಿಸಿ ಆದೇಶ ಪ್ರಕಟಿಸಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *