ನಾಡಕಚೇರಿ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಪ್ರಕರಣ…ಉಪತಹಸೀಲ್ದಾರ್ ಶಿವಕುಮಾರ್ ಸಸ್ಪೆಂಡ್…ಪ್ರಾದೇಶಿಕ ಆಯುಕ್ತರ ಆದೇಶ…

ಮೈಸೂರು,ಜ8,Tv10 ಕನ್ನಡ

ನಿರಂತರ ಕಿರುಕುಳದಿಂದ ಬೇಸತ್ತು ಡೆತ್ ನೋಟ್ ಬರೆದು ಹುಲ್ಲಹಳ್ಳಿ ನಾಡಕಚೇರಿಯಲ್ಲಿ ಆತ್ಮಹತ್ಯೆಗೆ ಶರಣಾದ ಕಂಪ್ಯೂಟರ್ ಆಪರೇಟರ್ ಪರಮೇಶ್ ಪ್ರಕರಣಕ್ಕೆ ಸಂಭಂಧಿಸಿದಂತೆ ಆರೋಪ ಎದುರಿಸುತ್ತಿರುವ ಉಪತಹಸೀಲ್ದಾರ್ ಶಿವಕುಮಾರ್ ರವರನ್ನ ಸಸ್ಪೆಂಡ್ ಮಾಡಲಾಗಿದೆ.ಪ್ರಾದೇಶಿಕ ಆಯುಕ್ತರಾದ ಡಾ.ಜಿ.ಸಿ.ಪ್ರಕಾಶ್ ರವರು ಅಮಾನತ್ತಿನ ಆದೇಶ ಹೊರಡಿಸಿದ್ದಾರೆ.

ಜನವರಿ 7 ಭಾನುವಾರದಂದು ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ನಾಡಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿರುವ ಪರಮೇಶ್ ರವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.ತನ್ನ ಸಾವಿಗೆ ಉಪತಹಸೀಲ್ದಾರ್ ಶಿವಕುಮಾರ್ ನೀಡುತ್ತಿರುವ ಕಿರುಕುಳ ಕಾರಣ ಎಂದು ಡೆತ್ ನೋಟ್ ನಲ್ಲಿ ಬರೆದು ವಾಟ್ಸ್ ಅಪ್ ಸ್ಟೇಟಸ್ ನಲ್ಲಿ ಹಾಕಿ ವಿಷ ಸೇವಿಸಿದ್ದರು.ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ಪರಮೇಶ್ ಸಾವನ್ನಪ್ಪಿದ್ದರು.ಇಂದು ಶವಾಗಾರಕ್ಕೆ ನಂಜನಗೂಡು ಶಾಸಕ ದರ್ಶನ್ ಧ್ರವನಾರಾಯಣ್ ಹಾಗೂ ಜಿಲ್ಲಾಧಿಕಾರಿ ಡಾ.ರಾಜೇಂದ್ರ ರವರು ಭೇಟಿ ನೀಡಿದ್ದರು.ಈ ವೇಳೆ ಉಪತಹಸೀಲ್ದಾರ್ ಮೇಲೆ ಕ್ರಮ ಕೈಗೊಳ್ಳುವಂತೆ ಮೃತರ ಕುಟುಂಬಸ್ಥರು ಒತ್ತಾಯಿಸಿದ್ದರು.ಅಲ್ಲದೆ ಶಾಸಕ ದರ್ಶನ್ ಧೃವನಾರಾಯಣ್ ಸಹ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದರು.ಈ ಹಿನ್ನಲೆ ಕ್ರಮಕ್ಕೆ ಮುಂದಾದ ಪ್ರಾದೇಶಿಕ ಆಯುಕ್ತರಾದ ಡಾ.ಜಿ.ಸಿ.ಪ್ರಕಾಶ್ ರವರು ಉಪತಹಸೀಲ್ದಾರ್ ಶಿವಕುಮಾರ್ ರನ್ನ ಅಮಾನತ್ತು ಪಡಿಸಿ ಆದೇಶ ಪ್ರಕಟಿಸಿದ್ದಾರೆ…

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *